ರೇಸ್ ನಲ್ಲಿದೆ ಅಮ್ಮೆ ರ್ ಪೊಲೀಸಾ ರಿಲೀಸ್ ಡೇಟ್!
Team Udayavani, May 31, 2018, 3:49 PM IST
ಬಹುನಿರೀಕ್ಷಿತ ‘ಅಮ್ಮೆರ್ ಪೊಲೀಸಾ’ ತುಳು ಚಿತ್ರವು ನಿರೀಕ್ಷೆಯಂತೆ ಜೂನ್ ತಿಂಗಳಲ್ಲಿ ಬಿಡುಗಡೆಯಾಗಬೇಕಿದ್ದರೂ, ಈಗ ಚಿತ್ರಕ್ಕೆ ಥಿಯೇಟರ್ ಸಮಸ್ಯೆಯಿಂದಾಗಿ ಚಿತ್ರ ಬಿಡುಗಡೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಚಿತ್ರ ಬಿಡುಗಡೆಗೆ ಜೂನ್ ತಿಂಗಳ ಮೂರು
ದಿನಾಂಕಗಳು ಲಿಸ್ಟ್ ನಲ್ಲಿದ್ದು, ಇನ್ನೆರಡು ದಿನಗಳಲ್ಲಿ ದಿನಾಂಕ ಫಿಕ್ಸ್ ಆಗಲಿದೆ.
ಜೂ. 15ರಂದು ಸಲ್ಮಾನ್ ಖಾನ್ ಅಭಿನಯದ ‘ರೇಸ್-3’ ಹಿಂದಿ ಚಿತ್ರ ಬಿಡುಗಡೆಗೊಳ್ಳುತ್ತಿದ್ದು, ಅದು ಮಂಗಳೂರು ಥಿಯೇಟರ್ನಲ್ಲೂ ರಿಲೀಸ್ ಆಗುತ್ತಿರುವುದರಿಂದ ‘ಅಮ್ಮೆರ್ ಪೊಲೀಸಾ’ ಚಿತ್ರದ ದಿನಾಂಕ ಮುಂದೂಡುವ ಸಾಧ್ಯತೆ ಇದೆ. ಜತೆಗೆ ರಜನೀಕಾಂತ್ ಅಭಿನಯದ ‘ಕಾಲ’ ತಮಿಳು ಚಿತ್ರಕ್ಕೆ ಪ್ರಸ್ತುತ ಕರ್ನಾಟಕದಲ್ಲಿ ಅವಕಾಶ ಇಲ್ಲ ಎಂದು ಹೇಳಿದರೂ, ಮುಂದೆ ಚಿತ್ರ ಪ್ರದರ್ಶನಕ್ಕೆ ಅವಕಾಶ ಸಿಕ್ಕಿದರೆ, ‘ಕಾಲ’ದಿಂದಲೂ ತೊಂದರೆ ಎದುರಾಗಬಹುದು.
ಎಕ್ಕಸಕ, ಪಿಲಿಬೈಲ್ ಯಮುನಕ್ಕ ಎಂಬ ಯಶಸ್ವಿ ಚಿತ್ರಗಳನ್ನು ನೀಡಿರುವ ನಿರ್ದೇಶಕ ಸೂರಜ್ ಶೆಟ್ಟಿ ಅವರೇ ‘ಅಮ್ಮೆರ್ ಪೊಲೀಸಾ’ ಚಿತ್ರವನ್ನೂ ನಿರ್ದೇಶನ ಮಾಡಿದ್ದು, ಈ ಚಿತ್ರ ತುಳುಚಿತ್ರ ಪ್ರೇಮಿಗಳಲ್ಲಿ ಹೆಚ್ಚಿನ ನಿರೀಕ್ಷೆಯನ್ನು ಹುಟ್ಟಿಸಿದೆ. ಹೀಗಾಗಿ ಇದರ ಬಿಡುಗಡೆಗಾಗಿ ಎಲ್ಲರೂ ತುದಿಗಾಲಲ್ಲಿ ನಿಂತಿದ್ದು, ಇನ್ನೂ ಬಿಡುಗಡೆಯ ದಿನಾಂಕ ನಿಗದಿಯಾಗದೇ ಇರುವುದು ಚಿತ್ರಪ್ರೇಮಿಗಳಿಗೆ ನಿರಾಸೆಯನ್ನು ತಂದಿದೆ.
ಕಳೆದ ಹಲವು ವರ್ಷಗಳಿಂದ ತುಳು ಚಿತ್ರಗಳಿಗೆ ಇದೇ ರೀತಿಯಲ್ಲಿ ಥಿಯೇಟರ್ ಸಮಸ್ಯೆ ಎದುರಾಗುತ್ತಿದ್ದು, ಅದಕ್ಕೊಂದು ಶಾಶ್ವತ ಪರಿಹಾರ ಇನ್ನೂ ಸಾಧ್ಯವಾಗಿಲ್ಲ. ಚಿತ್ರತಂಡ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡು ಬಿಡುಗಡೆಗೆ ತಯಾರಿ ನಡೆಸಿದರೆ ಆ ಸಂದರ್ಭದಲ್ಲಿ ಇತರ ಭಾಷೆಗಳ ಚಿತ್ರ ಬಿಡುಗಡೆಗೆ ಬಂದರೆ ತುಳು ಚಿತ್ರತಂಡ ಹಿಂದೆ ಸರಿಯಲೇ ಬೇಕಾಗುತ್ತದೆ.
ತುಳು ಚಿತ್ರಕ್ಕೆ ಸೀಮಿತ ಮಾರುಕಟ್ಟೆ ವ್ಯಾಪ್ತಿ ಇರುವುದರಿಂದ ಮಂಗಳೂರು, ಉಡುಪಿ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಪ್ರಮುಖ ಥಿಯೇಟರ್ಗಳು ಲಭ್ಯವಾಗಬೇಕಾಗುತ್ತದೆ. ಪ್ರಸ್ತುತ ‘ಅಮ್ಮೆರ್ ಪೊಲೀಸಾ’ ಚಿತ್ರಕ್ಕೂ ಅದೇ ಸಮಸ್ಯೆ ಎದುರಾಗಿದ್ದು, ಜೂ. 15, 22, 28 ದಿನಾಂಕಗಳಲ್ಲಿ ಒಂದನ್ನು ಚಿತ್ರತಂಡ ಆರಿಸಲಿದೆ. ಆದರೆ ಇನ್ನೂ ಯಾವ ದಿನಾಂಕ ಎಂಬುದು ಪಕ್ಕಾ ಆಗಿಲ್ಲ. ಇನ್ನೆರಡು ದಿನಗಳಲ್ಲಿ ಬಿಡುಗಡೆಯ ದಿನಾಂಕವನ್ನು ಅಂತಿಮಗೊಳಿಸಲಿದ್ದೇವೆ ಎಂದು ಚಿತ್ರದ ನಿರ್ದೇಶಕ ಸೂರಜ್ ಶೆಟ್ಟಿ ತಿಳಿಸಿದ್ದಾರೆ.
ಕಿರಣ್ ಸರಪಾಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
Pilikula: “ಫ್ಯಾನ್-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!
Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ
Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ
Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ