ರಫೇಲ್‌: ಕಾಂಗ್ರೆಸ್‌ ಕೈಪಿಡಿ ಬಿಡುಗಡೆ


Team Udayavani, Mar 17, 2019, 3:23 AM IST

q-24.jpg

ಮಂಗಳೂರು: ಲೋಕ ಸಭಾ ಚುನಾವಣೆ ಪ್ರಚಾರ ಇನ್ನಷ್ಟೇ ಕಾವು ಪಡೆಯಬೇಕಾಗಿದ್ದರೂ ಕಾಂಗ್ರೆಸ್‌ ಪಕ್ಷವು ಬಿಜೆಪಿ ವಿರುದ್ಧ ಹರಿಹಾಯಲು “ರಫೇಲ್‌ ಹಗರಣ’ವನ್ನು ಹಾಗೂ ಕೇಂದ್ರದ ಮೋದಿ ಸರಕಾರದ ವೈಫಲ್ಯ ಗಳನ್ನು ಅಸ್ತ್ರವನ್ನಾಗಿ ಬಳಸಲು ನಿರ್ಧರಿ ಸಿದ್ದು, ಈ ಬಗ್ಗೆ ಸಾರ್ವಜನಿಕ ಮಾಹಿತಿ ಕೈಪಿಡಿಯನ್ನು ಬಿಡುಗಡೆ ಮಾಡಿದೆ.

ಶನಿವಾರ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ “ಬ್ರಹ್ಮಾಂಡ ರಫೇಲ್‌ ಭ್ರಷ್ಟಾಚಾರ: ಬಿಜೆಪಿ ಹೇಳಿ ದ್ದೇನು? ಮಾಡಿದ್ದೇನು?’ ಎಂಬ 16 ಪುಟಗಳ ಸಾರ್ವಜನಿಕ ಮಾಹಿತಿ ಕೈಪಿಡಿಯನ್ನು ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಹಾಗೂ ಕೆಪಿಸಿಸಿ ಶಿಸ್ತು ಸಮಿತಿಯ ಅಧ್ಯಕ್ಷ ವಿ.ಆರ್‌. ಸುದರ್ಶನ್‌ ಅವರು ಮತ್ತು “ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರಿಗೆ 28 ನೇರ ಪ್ರಶ್ನೆಗಳು’ ಎಂಬ ಕರಪತ್ರವನ್ನು ವಿಧಾನ ಪರಿಷತ್‌ ಸದಸ್ಯ ಹಾಗೂ ದ.ಕ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌ ಬಿಡುಗಡೆ ಮಾಡಿದರು. ಇವೆರಡನ್ನೂ ಕೆಪಿಸಿಸಿ ವಕ್ತಾರ ಮತ್ತು ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ ಪ್ರಕಟಿಸಿದ್ದಾರೆ. 

ರಫೇಲ್‌ ಯುದ್ಧ ವಿಮಾನ ಖರೀದಿಯಲ್ಲಿ 30,000 ಕೋಟಿ ರೂ. ಅವ್ಯವಹಾರ ನಡೆದಿದೆ. ಈ ಬಗ್ಗೆ ಮೂವರು ವಕೀಲರನ್ನು ಒಳಗೊಂಡ ಸಮಿತಿ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿ ಈ ಕೈಪಿಡಿಯನ್ನು ತಯಾರಿಸಲಾಗಿದೆ. ಇಲ್ಲಿ ಅವ್ಯವಹಾರ ಹೇಗೆ ನಡೆದಿದೆ ಮತ್ತು ಅದರಿಂದ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ಮಾಹಿತಿ ಇದೆ. ಕರಪತ್ರದಲ್ಲಿ ಮೋದಿ ಮತ್ತು ಬಿಜೆಪಿ ನಾಯಕರಿಗೆ 28 ನೇರ ಪ್ರಶ್ನೆಗಳನ್ನು ಕೇಳಲಾಗಿದ್ದು, ಬಿಜೆಪಿ ಮುಖಂಡರಿಂದ ಉತ್ತರ ನಿರೀಕ್ಷಿಸಲಾಗಿದೆ ಎಂದು ಐವನ್‌ ಡಿ’ಸೋಜಾ ಅವರು ತಿಳಿಸಿದರು. 

ಮತದಾರರು ಪ್ರಜಾಪ್ರಭುತ್ವದ ಮಾಲಕರು. ಅವರಿಗೆ ಎಲ್ಲ ವಿಷಯ ಗಳು ತಿಳಿಯಬೇಕು. ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಹೇಳಿದ್ದೇನು, ಮಾಡಿದ್ದೇನು ಎನ್ನುವ ಬಗ್ಗೆ ತೌಲನಿಕ ಅಧ್ಯಯನ ಆಗಬೇಕು ಎಂದು ವಿ.ಆರ್‌. ಸುದರ್ಶನ್‌ ತಿಳಿಸಿದರು. ಕರಪತ್ರವನ್ನು ಬಿಜೆಪಿಯ ರಾಜ್ಯ ಮತ್ತು ಜಿಲ್ಲಾಧ್ಯಕ್ಷರಿಗೆ ಕಳುಹಿಸಿ ಕೊಡಲಾಗುವುದು. ಈ ಬಗ್ಗೆ ಕಾಂಗ್ರೆಸ್‌ ಚರ್ಚೆ ನಡೆಸಲು ಸಿದ್ಧವಿದೆ. ಬಿಜೆಪಿ ನಾಯಕರಿಂದ ಉತ್ತರ ನಿರೀಕ್ಷಿಸುತ್ತಿದ್ದೇವೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕರಾದ ಶಕುಂತಳಾ ಶೆಟ್ಟಿ, ಜೆ.ಆರ್‌. ಲೋಬೊ, ಕಾಂಗ್ರೆಸ್‌ ನಾಯಕರಾದ ಇಬ್ರಾಹಿಂ ಕೋಡಿಜಾಲ್‌, ಕಳ್ಳಿಗೆ ತಾರಾನಾಥ ಶೆಟ್ಟಿ, ವಾಸುದೇವ ಬೋಳೂರು, ಹನೀಫ್‌, ಬಿ. ಎಚ್‌. ಖಾದರ್‌, ಎಂ.ಎಸ್‌. ಮಹಮದ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.