ಶಾಂತಿ ಕಾಪಾಡಲು ರೈ, ಖಾದರ್‌ ಮನವಿ


Team Udayavani, Jul 11, 2017, 3:50 AM IST

ut-rai.jpg

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ – ಸಾಮರಸ್ಯ ಕಾಪಾಡುವ ನಿಟ್ಟಿನಲ್ಲಿ ಸರ್ವರೂ ಸಹಕರಿಸಬೇಕು ಹಾಗೂ ವದಂತಿಗಳಿಗೆ ಕಿವಿಗೊಡಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್‌ ಅವರು ಮನವಿ ಮಾಡಿದ್ದಾರೆ.

ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಸೋಮ ವಾರ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತ ನಾಡಿದ ಅವರು, ಕಾನೂನು ಕೈಗೆತ್ತಿಕೊಳ್ಳು ವವರ ವಿರುದ್ಧ ಕಠಿನ ಕ್ರಮಕ್ಕೆ ಪೊಲೀಸ್‌ ಇಲಾಖೆಗೆ ಮುಖ್ಯಮಂತ್ರಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಕೋಮುಸಾಮರಸ್ಯ ಉಳಿಸಬೇಕು. ಶಾಂತಿ, ಸೌಹಾರ್ದ ಕದಡುವ ಕೃತ್ಯಕ್ಕೆ ಯಾರೂ ಕೈಹಾಕಬಾರದು ಮತ್ತು ಪ್ರಚೋದನೆ ನೀಡುವ ಕಾರ್ಯ ಮಾಡಬಾರದು ಜಿಲ್ಲಾಧಿ ಕಾರಿಯವರು ಗುರುವಾರ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳನ್ನು ಒಳಗೊಂಡು ಶಾಂತಿಸಭೆ ನಡೆಸಲಿದ್ದಾರೆ ಎಂದರು.

ಘರ್ಷಣೆಯಲ್ಲಿ  ಪಾತ್ರವಿಲ್ಲ
ಜಿಲ್ಲೆಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕೋಮು ಘರ್ಷಣೆಗಳಿಗೆ ಸಂಬಂಧಪಟ್ಟಂತೆ ಡಿ.ವಿ. ಸದಾನಂದ ಗೌಡ, ಶೋಭಾ ಕರಂದ್ಲಾಜೆ, ಬಿ.ಎಸ್‌. ಯಡಿಯೂರಪ್ಪ ಮುಂತಾದ ಬಿಜೆಪಿ ನಾಯಕರು ನಮ್ಮ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಇದರಲ್ಲಿ ನಮ್ಮ ದಾಗಲಿ, ಕಾಂಗ್ರೆಸ್‌ ಪಕ್ಷ ದ್ದಾಗಲಿ ಯಾವುದೇ ಪಾತ್ರ ವಿಲ್ಲ ಎಂಬು ದಾಗಿ ಸ್ಪಷ್ಟ ಪಡಿಸುತ್ತೇವೆ. ಜಿಲ್ಲೆ ಯಲ್ಲಿ ಯಾವುದೇ ಘಟನೆ ನಡೆದರೂ ಅದಕ್ಕೆ ನಮ್ಮ ಹೆಸರನ್ನು ಎಳೆತರುವುದು ಕೆಲವರ ಚಾಳಿ ಯಾಗಿದೆ. ಕಾಂಗ್ರೆಸ್‌ ಪಕ್ಷ ಜಾತ್ಯತೀತ ಸಿದ್ಧಾಂತದ ಭದ್ರ ಬುನಾದಿಯಲ್ಲಿ ಬೆಳೆದು ಬಂದಿರುವ ಪಕ್ಷ. ಯಾವತ್ತೂ ಸಾಮರಸ್ಯ ಕೆಡಿಸುವ ಪ್ರಯತ್ನ ಮಾಡಿಲ್ಲ ಎರಡು ಮತೀಯ ವಾದಿ ಶಕ್ತಿಗಳು ಜಿಲ್ಲೆಯಲ್ಲಿ ನಡೆಯು ತ್ತಿರುವ ಘರ್ಷಣೆ ಗಳಲ್ಲಿದ್ದಾರೆ. ಇವರ ನಡುವಣ ಮೇಲಾಟಕ್ಕೆ ಅಮಾಯಕರು ಬಲಿಯಾಗುತ್ತಿದ್ದಾರೆ ಎಂದು ಸಚಿವರಾದ ರಮಾನಾಥ ರೈ ಹಾಗೂ ಖಾದರ್‌ ಅವರು ಹೇಳಿದರು.

ನಿಯೋಜಿತ ಕೊಲೆಗಳಾಗುತ್ತಿವೆ
ಜಿಲ್ಲೆಯಲ್ಲಿ ನಿಯೋಜಿತ ಹತ್ಯೆಗಳಾಗುತ್ತಿವೆ. ಉದ್ದೇಶಪೂರ್ವಕವಾಗಿ ಇಂತಹ ಕೃತ್ಯ ಗಳು ನಡೆಯುತ್ತಿವೆ. ಕೊಲೆ ಗಾರರ ಜತೆಗೆ ಇದರ ಹಿಂದಿರುವ ಪಿತೂರಿದಾರ ರಿಗೂ ಶಿಕ್ಷೆ ಯಾಗ ಬೇಕು. ಈ ಬಗ್ಗೆ ಮುಖ್ಯಮಂತ್ರಿಯವರಿಗೂ ಮನವಿ ಮಾಡಲಾಗಿದೆ ಎಂದು ಸಚಿವ ರೈ ಹೇಳಿದರು.

ಜಿಲ್ಲೆಯಲ್ಲಿ 144 ಸೆಕ್ಷನ್‌ ಪ್ರಕಾರ ನಿಷೇಧಾಜ್ಞೆ ಇದ್ದರೂ ಅದನ್ನು ಉಲ್ಲಂಘಿಸಿ ಸಭೆ, ಮೆರವಣಿಗೆಗಳನ್ನು ಮಾಡಲಾಗಿದೆ. ಕಾಂಗ್ರೆಸ್‌ ಪಕ್ಷದ ಯುವ ಮುಖಂಡ ಜಲೀಲ್‌ ಕರೋ ಪಾಡಿ ಅವರ ಹತ್ಯೆಯಾದಾಗ ಕಾಂಗ್ರೆಸ್‌ ಅವರ ಪಾರ್ಥಿವ ಶರೀರದ ಮೆರವಣಿಗೆ ಮಾಡಲಿಲ್ಲ. ಯಾರಿಂದಲೂ ಕಾನೂನು ಮುರಿಯುವ ಕಾರ್ಯ ಆಗಬಾರದು. ಅಂತಹವರ ವಿರುದ್ಧ ಕಠಿನ ಕ್ರಮಗಳು ಆಗಬೇಕು. ಕಾನೂನು ಮುರಿ ದವರ ವಿರುದ್ಧ ಕೇಸು ಹಾಕಲಾಗುತ್ತಿದೆ ಎಂದು ಸಚಿವ ರೈ ಹೇಳಿದರು.

ಸಚಿವ ಖಾದರ್‌ ಅವರು ಮಾತನಾಡಿ, ಜವಾಬ್ದಾರಿ ಸ್ಥಾನದಲ್ಲಿರುವವರು ಬೇಜವಾ ಬ್ದಾರಿ ಹೇಳಿಕೆಗಳನ್ನು ನೀಡುವುದು ಖಂಡ ನೀಯ. ಬಿಜೆಪಿಯ ಕೆಲವು ನಾಯಕರು ಅವರ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸಾವಿನ ಮನೆಯಲ್ಲಿ ಯಾರೂ ಕೂಡ ರಾಜಕೀಯ ಮಾಡಬಾರದು ಎಂದರು. ಶರತ್‌ ಅವರನ್ನು ಆಸ್ಪತ್ರೆಗೆ ಕೊಂಡೊಯ್ದ ರವೂಫ್‌ ಹಾಗೂ ಮೆರವಣಿಗೆ ಸಂದರ್ಭದಲ್ಲಿ ಹಲ್ಲೆಯಿಂದ ಗಾಯಗೊಂಡಿದ್ದ ರಿಯಾಜ್‌ ಅವರಿಗೆ ಚಿಕಿತ್ಸೆ ಕೊಡಿಸಿದ ಹಿಂದೂ ಯುವಕನನ್ನು ಕಾಂಗ್ರೆಸ್‌ ವತಿಯಿಂದ ಗೌರವಿಸಲಾಗುವುದು ಎಂದವರು ಹೇಳಿದರು.

ಡಿ.ವಿ., ಶೋಭಾ ಸ್ಪರ್ಧೆ ಮಾಡಲಿ
ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಅವರು ನನ್ನ ಬಂಟ್ವಾಳ ಕ್ಷೇತ್ರದಲ್ಲಿ ಅಥವಾ ಸಚಿವ ಯು.ಟಿ. ಖಾದರ್‌ ಅವರ ಮಂಗಳೂರು ಕ್ಷೇತ್ರದಲ್ಲಿ ನಮ್ಮ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿ. ಕೋಮುವಾದ ಗೆಲ್ಲುತ್ತೂ… ಸಾಮರಸ್ಯಕ್ಕೆ ಜಯವಾಗುತ್ತದೋ ಎಂದು ನೋಡೋಣ. ನಮ್ಮ ಈ ಸವಾಲನ್ನು ಅವರು ಸ್ವೀಕರಿಸಲಿ ಎಂದು ಸಚಿವ ರಮಾನಾಥ ರೈ ಹೇಳಿದರು.

ಶರತ್‌, ಅಶ್ರಫ್‌ ಕುಟುಂಬಕ್ಕೆ  ಪರಿಹಾರ
ಇತ್ತೀಚೆಗೆ ಹತ್ಯೆಯಾದ ಅಶ್ರಫ್‌ ಹಾಗೂ ಶರತ್‌ ಅವರು ಅಮಾಯಕರು. ಯಾವುದೇ ಪ್ರಕರಣಗಳಲ್ಲಿ ಭಾಗಿಯಾದವರಲ್ಲ. ಅವರ ಕುಟುಂಬಗಳಿಗೆ ಸರಕಾರದ ವತಿಯಿಂದ ಪರಿಹಾರ ನೀಡಲಾಗುವುದು. ಹಲ್ಲೆಗಳಲ್ಲಿ ಗಾಯಗೊಳಗಾದವರ ಚಿಕಿತ್ಸೆಯ ವೆಚ್ಚವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಭರಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಖಾದರ್‌ ತಿಳಿಸಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.