ಹತ್ಯೆಗೀಡಾದ RSS ಕಾರ್ಯಕರ್ತ ಶರತ್ ಮನೆಗೆ ಸಚಿವ ರೈ,ಸಾಂತ್ವನ
Team Udayavani, Jul 12, 2017, 11:57 AM IST
ಬಂಟ್ವಾಳ : ಬಿ.ಸಿ.ರೋಡ್ನಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಆರ್ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಪಡ್ಪು ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ, ಬಂಟ್ವಾಳ ಕ್ಷೇತ್ರದ ಶಾಸಕ ರಮನಾಥ ರೈ ಅವರು ಬುಧವಾರ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.
ಶರತ್ ತಂದೆ ತನಿಯಪ್ಪ ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿ ಕೆಲ ಕಾಲ ಮಾತುಕತೆ ನಡೆಸಿದರು. ಈ ವೇಳೆ ತನಿಯಪ್ಪ ಕಣ್ಣೀರಿಟ್ಟರು.
ರಾಜಕೀಯ ಬದಿಗೊತ್ತಿ ರೈ ಅವರ ಭೇಟಿಗೆ ಸಾಮಾಜಿಕ ತಾಣಗಳಲ್ಲಿ ಪ್ರಶಂಸೆ ವ್ಯಕ್ತವಾಗಿದೆ.
ತನಿಯಪ್ಪ ಅವರು ಪುತ್ರ ಶೋಕದಲ್ಲಿ ನಾನು ಹಿಂದೆ 20 ವರ್ಷ ರೈ ಅವರ ಬಟ್ಟೆ ಒಗೆದು ಕೊಟ್ಟಿದ್ದೆ ಮಗ ಸತ್ತಾಗ ಅವರು ಸಾಂತ್ವನ ಹೇಳಲು ಬರಲಿಲ್ಲ ಎಂದು ನೋವು ತೋಡಿಕೊಂಡಿದ್ದರು.
ಭೇಟಿ ವೇಳೆ ಸುದ್ದಿಗಾರರಿಗೆ ಫೋಟೋಗಳನ್ನು ಕ್ಲಿಕ್ಕಿಸದಂತೆ ರೈ ಮನವಿ ಮಾಡಿರುವ ಬಗ್ಗೆ ವರದಿಯಾಗಿದೆ.
ಮಂಗಳವಾರ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಶರತ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದರು. ಈ ವೇಳೆ ರೈ ವಿರುದ್ಧ ಕಿಡಿ ಕಾರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ