ರೈಲು ನಿಲ್ದಾಣ ವಾಹನ ನಿಲುಗಡೆ ವ್ಯವಸ್ಥೆ
Team Udayavani, Jan 3, 2018, 2:57 PM IST
ನಗರ: ಕಬಕ -ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ನಿತ್ಯ ರೈಲು ಪ್ರಯಾಣಿಕರ ವಾಹನಗಳಿಗೆ ಮಾಡಲಾಗಿರುವ ಪಾರ್ಕಿಂಗ್ ವ್ಯವಸ್ಥೆಯಲ್ಲಿ ವಾಹನಗಳ ಸುರಕ್ಷತೆಯ ಕುರಿತು ಸಾರ್ವಜನಿಕ ವಲಯದಿಂದ ಅಸಮಾಧಾನ ವ್ಯಕ್ತವಾಗಿದೆ. ಮಂಗಳೂರು ಸಹಿತ ವಿವಿಧ ಕಡೆಗಳಿಗೆ ಉದ್ಯೋಗಕ್ಕೆ ಹೋಗುವವರು ವಾಹನಗಳನ್ನು ಇಲ್ಲಿ ನಿಲ್ಲಿಸುತ್ತಾರೆ. ದಿನಂಪ್ರತಿ ಸುಮಾರು 50 ವಾಹನಗಳು ನಿಲುಗಡೆಗೊಳಿಸುತ್ತಿದ್ದು, ಪಾರ್ಕಿಂಗ್ ಶುಲ್ಕವನ್ನೂ ಪಾವತಿಸುತ್ತಾರೆ.
ಬೆಳಗ್ಗೆ ಶುಲ್ಕ ಸ್ವೀಕರಿಸುವ ಗುತ್ತಿಗೆದಾರರು ಮತ್ತೆ ಅಲ್ಲಿ ಇರುವುದಿಲ್ಲ. ವಾಹನಗಳ ಸುರಕ್ಷತೆಯ ಕುರಿತೂ ನಿಗಾ ವಹಿಸುವುದಿಲ್ಲ ಎನ್ನುವುದು ಪ್ರಯಾಣಿಕರ ಅಳಲು. ಕೆಲವು ದಿನಗಳ ಹಿಂದೆ ಇಲ್ಲಿ ನಿಲ್ಲಿಸಿದ ವಾಹನಗಳಿಂದ ಪೆಟ್ರೋಲ್ ಕಳವು ಮಾಡುವ, ವಾಹನವನ್ನೂ ಕಳವು ಮಾಡಿದ ಘಟನೆಗಳು ನಡೆದಿವೆ. ಆದರೆ ಪಾರ್ಕಿಂಗ್ ಶುಲ್ಕ ಸಂಗ್ರಹಿಸುವ ಗುತ್ತಿಗೆದಾರರು ವಾಹನಗಳ ಸುರಕ್ಷತೆಯ ಕುರಿತು ನಿರ್ಲಕ್ಷ್ಯವಹಿಸುತ್ತಿದ್ದಾರೆ ಎನ್ನುವುದು ಆರೋಪ.
ಹಿಂದೆ ಸುರಕ್ಷಿತವಾಗಿತ್ತು
ಕಬಕ ಪುತ್ತೂರು ರೈಲ್ವೇ ನಿಲ್ದಾಣ ಆದರ್ಶ ರೈಲ್ವೇ ನಿಲ್ದಾಣವಾಗಿ ಮೇಲ್ದರ್ಜೆಗೇರಿದ ಸಂದರ್ಭ ಅಭಿವೃದ್ಧಿ ಕೆಲಸಗಳನ್ನು ನಡೆಸಿದಾಗ ಪ್ರಯಾಣಿಕರ ವಾಹನಗಳನ್ನು ಪಾರ್ಕಿಂಗ್ ಮಾಡಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಅದಕ್ಕೆ ಮೊದಲು ನಿಲ್ದಾಣದ ಬಳಿಯ ಅಶ್ವತ್ಥಕಟ್ಟೆಯ ಸುತ್ತಲೂ ವಾಹನಗಳನ್ನು ನಿಲ್ಲಿಸಲಾಗುತ್ತಿತ್ತು. ಪಕ್ಕದಲ್ಲೇ ಅಂಗಡಿಗಳೂ ಇರುವುದರಿಂದ ವಾಹನಗಳು ಸುರಕ್ಷಿತವಾಗಿರುತ್ತಿದ್ದವು. ಆದರೆ ಪ್ರತ್ಯೇಕ ವ್ಯವಸ್ಥೆ ಮಾಡಿದರೂ ಆ ಸುರಕ್ಷತೆ ಇಲ್ಲ ಎನ್ನುವುದು ಸಾರ್ವಜನಿಕರ ಅಹವಾಲು.
ಸುರಕ್ಷತೆಯ ಆತಂಕ
ಬೆಳಗ್ಗಿನ ಪ್ಯಾಸೆಂಜರ್ ರೈಲಿನಲ್ಲಿ ಮಂಗಳೂರಿಗೆ ಉದ್ಯೋಗಕ್ಕಾಗಿ ತೆರಳುವುದರಿಂದ ವಾಹನವನ್ನು ನಿಲ್ಲಿಸುತ್ತೇವೆ. ಶುಲ್ಕ ಪಾವತಿಗೆ ಸಂಬಂಧಿಸಿದಂತೆ ತಮ್ಮದು ಯಾವುದೇ ಆಕ್ಷೇಪಣೆ ಇಲ್ಲ. ಆದರೆ ಶುಲ್ಕ ಪಾವತಿಸಿಯೂ ನಮ್ಮ ವಾಹನಗಳು ಸುರಕ್ಷಿತವಾಗಿರುತ್ತವೆಯೇ? ಎಂಬ ಕುರಿತು ಆತಂಕ ಇದೆ. ಈ ಕುರಿತು ರೈಲ್ವೇ ಇಲಾಖೆ ಗುತ್ತಿಗೆದಾರರಿಗೆ ಸೂಚನೆ ನೀಡಬೇಕು.
– ಶ್ಯಾಮ ಶಾಸ್ತ್ರಿ
ದೈನಂದಿನ ರೈಲು ಪ್ರಯಾಣಿಕ, ಪುತ್ತೂರು
ಸಿಸಿ ಕೆಮರಾ ಇಲ್ಲ
ರೈಲ್ವೇ ನಿಲ್ದಾಣದ ಬಳಿ ಸಿಸಿ ಕೆಮರಾ ವ್ಯವಸ್ಥೆ ಇದ್ದರೂ ಪಾರ್ಕಿಂಗ್ ಏರಿಯಾಗೆ ಈ ಕೆಮರಾದ ದೃಷ್ಟಿ ಹರಿಯುವುದಿಲ್ಲ. ಪಾವತಿ ಪಾರ್ಕಿಂಗ್ ಸ್ಥಳವನ್ನು ಬಿಟ್ಟು ನಿಲ್ದಾಣದ ಎದುರು ವಾಹನ ನಿಲ್ಲಿಸಿದರೆ ರೈಲ್ವೇ ಅಧಿಕಾರಿಗಳು ದಂಡ ವಿಧಿಸುತ್ತಾರೆ. ತತ್ಕ್ಷಣದ ನಿಲುಗಡೆಗೆ ಅವಕಾಶ ಇಲ್ಲದಿರುವುದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ