ಮಳೆ,ಗಾಳಿ: ಮೆಸ್ಕಾಂಗೆ 2 ಲಕ್ಷ ರೂ. ನಷ್ಟ


Team Udayavani, Jul 21, 2017, 5:15 AM IST

DSC06262.gif

ಹಳೆಯಂಗಡಿ: ಎರಡು ದಿನಗಳಿಂದ ಸುರಿದ ಮಳೆ ಹಾಗೂ ಗಾಳಿಯಿಂದ ಹಳೆಯಂಗಡಿ ಹಾಗೂ ಪಡುಪಣಂಬೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಹಲವೆಡೆ ಮರಗಳು ಉರುಳಿ ಅಪಾರ ಹಾನಿ ಯುಂಟಾಗಿದೆ.

ಹಳೆಯಂಗಡಿ ಗ್ರಾ.ಪಂ.ನ ಕೊಪ್ಪಳದಲ್ಲಿ ಬೃಹತ್‌ ಆಲದ ಮರವೊಂದು ಬುಧವಾರ ರಾತ್ರಿ ಉರುಳಿ ಬಿದ್ದು, ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಂಡು, ವಿದ್ಯುತ್‌ ಕಂಬಗಳಿಗೂ ಹಾನಿಯಾಗಿದೆ. ಗುರುವಾರ ಮರವನ್ನು ತೆರವುಗೊಳಿಸಲಾಯಿತು.ಇಂದಿರಾನಗರದ ಅಂಗನವಾಡಿ ಕೇಂದ್ರದ ಆವರಣ ಗೋಡೆಗೂ ಮರ ಬಿದ್ದು ಭಾಗಶಃ ಹಾನಿಯಾಗಿದೆ. ಸ್ಥಳಕ್ಕೆ ಪಂಚಾಯತ್‌ ಅಧ್ಯಕ್ಷೆ ಜಲಜಾ, ಉಪಾಧ್ಯಕ್ಷೆ ಪದ್ಮಾವತಿ ಶೆಟ್ಟಿ ಸಹಿತ ಸದಸ್ಯರು ಹಾಗೂ ಪಿಡಿಒ ಅಬೂಬಕ್ಕರ್‌ ಭೇಟಿ ನೀಡಿದ್ದಾರೆ.

ಪಡು ಪಣಂಬೂರು ಗ್ರಾ.ಪಂ.ವ್ಯಾಪ್ತಿಯ ಬೆಳ್ಳಾಯರು ಕೆರೆ ಕಾಡಿನ ನಿವಾಸಿ ಗಿರಿಜಾ ಲೋಕಯ್ಯ ದೇವಾಡಿಗ ಅವರ ಮನೆಗೆ ಮಾವಿನ ಮರ ಬಿದ್ದಿದೆ.

ಪರಿಣಾಮ ಸುಮಾರು 50 ಸಾವಿರ ರೂ.ನಷ್ಟವಾಗಿದೆ ಎಂದು ಗ್ರಾಮ ಕರಣಿಕ ಮೋಹನ್‌ ತಿಳಿಸಿದ್ದಾರೆ. ಪಡು ಪ ಣಂಬೂರು ಗ್ರಾ.ಪಂ.ಬಳಿಯ ರಸ್ತೆಗೆ ಮರ ಬಿದ್ದು ಸಂಚಾರಕ್ಕೆ ಅಡ್ಡಿಯುಂಟಾಯಿತು.ಸ್ಥಳಕ್ಕೆ ಗ್ರಾ.ಪಂ.ಅಧ್ಯಕ್ಷ ಮೋಹನ್‌ ದಾಸ್‌,ಉಪಾಧ್ಯಕ್ಷೆ ಸುರೇಖಾ,ಸದಸ್ಯರು,ಹಾಗೂ ಪಿಡಿಒ ಅನಿತಾ ಕ್ಯಾಥರಿನ್‌, ಕಾರ್ಯದರ್ಶಿ ಲೋಕನಾಥ ಭಂಡಾರಿ ಭೇಟಿ ನೀಡಿದ್ದಾರೆ.

ಕಿನ್ನಿಗೋಳಿ: ಮೆಸ್ಕಾಂಗೆ ನಷ್ಟ
ಕಿನ್ನಿಗೋಳಿ ಮೆಸ್ಕಾಂ ಸೆಕ್ಷನ್‌ ಕಚೇರಿ ವ್ಯಾಪ್ತಿಯಲ್ಲಿ  ಗುರುವಾರ ಸುರಿದ ಮಳೆ ಗಾಳಿಗೆ 10ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳ ಮೇಲೆ ಮರ ಬಿದ್ದು  ಸುಮಾರು 2 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ಮೆಸ್ಕಾಂ ಅಧಿಕಾರಿ ಚಂದ್ರಹಾಸ ತಿಳಿಸಿದ್ದಾರೆ. ಕೆರೆಕಾಡು  ಬಸ್‌ ನಿಲ್ದಾಣ, ಕಟೀಲು, ಎಕ್ಕಾರು ಕೃಷ್ಣ ಮಠ ಹಾಗೂ ಪೊಂಪೈ ಕಾಲೇಜು ಬಳಿ ವಿದ್ಯುತ್‌ ತಂತಿ ಹಾಗೂ ಕಂಬಗಳ ಮೇಲೆ ಮರ ಬಿದ್ದಿದೆ. ಇದರಿಂದ ವಿದ್ಯುತ್‌ ಸರಬರಾಜು ಸ್ಥಗಿತಗೊಂಡಿತ್ತು. ಕೂಡಲೇ ದುರಸ್ತಿ ಕಾರ್ಯ ನಡೆಸಿದ್ದರಿಂದ ಮಧ್ಯಾಹ್ನದ ವೇಳೆಗೆ ವಿದ್ಯುತ್‌ ಸರಬರಾಜು ಮಾಡಲಾಯಿತು.ಕೆಂಚನಕೆರೆ ಬಳಿ ಸರಸ್ವತಿ ಅವರ ಮನೆಯ ಹತ್ತಿರದ ದೂಪದ ಮರವು ಅರ್ಧ  ತುಂಡಾಗಿ  ಮನೆಯ ಸಮೀಪದ ಬಚ್ಚಲು ಶೆಡ್‌ ಮೇಲೆ ಬಿದ್ದಿದ್ದು, ಭಾರೀ ಅನಾಹತವೊಂದು ತಪ್ಪಿದೆ.

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.