ವರ್ಷದ ಮೊದಲ ಮಳೆ : ಮಂಗಳೂರು ನಗರದ ವಿವಿಧೆಡೆ ನೀರು ನಿಂತು ಅವಾಂತರ


Team Udayavani, Mar 10, 2022, 1:17 PM IST

ವರ್ಷದ ಮೊದಲ ಮಳೆ : ಮಂಗಳೂರು ನಗರದ ವಿವಿಧೆಡೆ ನೀರು ನಿಂತು ಅವಾಂತರ

ಮಹಾನಗರ : ಮಂಗಳೂರು ನಗರ, ನಗರದ ಹೊರ ವಲಯದಲ್ಲಿ ಬುಧವಾರ ಬೆಳಗ್ಗೆ ಸಾಧಾರಣ ಮಳೆ ಸುರಿದಿದೆ. ಸುಮಾರು 3 ತಿಂಗಳುಗಳ ಬಳಿಕ ಸುರಿದ ಈ ಮೊದಲ ಮಳೆಯ ಪರಿಣಾಮ ನಗರದಲ್ಲಿ ಕೆಲವೊಂದು ಅವಾಂತರಗಳು ಸಂಭವಿಸಿವೆ.

ಮಳೆ ನೀರು ಸರಾಗವಾಗಿ ಹರಿಯಲು ಅವಕಾಶ ಇಲ್ಲದ ಕಾರಣ ಅಂಗಡಿ ಮುಂಗಟ್ಟುಳಿಗೆ, ಕಚೇರಿಗಳ ಆವರಣಕ್ಕೆ ನೀರು ನುಗ್ಗಿದೆ; ರಸ್ತೆ ಮೇಲೆ ಬೃಹತ್‌ ಗಾತ್ರದ ಮರ ಉರುಳಿ ಬಿದ್ದ ಘಟನೆಯೂ ಸಂಭವಿಸಿದೆ.

ಬೆಳಗ್ಗೆ 4.30ರಿಂದ 7 ಗಂಟೆ ತನಕ ಮಂಗಳೂರಿನಾದ್ಯಂತ ಕೆಲವು ಕಡೆ ಉತ್ತಮ, ಕೆಲವು ಕಡೆ ಸಾಧಾರಣ ಮಳೆಯಾಗಿದೆ. ಗುಡುಗು, ಮಿಂಚು ಸಹಿತ ಉತ್ತಮ ಮಳೆ ಬಂದಿದ್ದು, ಇದರಿಂದ ಕೆಲವು ಭಾಗಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡಿತ್ತು.

ಅಂಗಡಿ ಮುಂಗಟ್ಟುಗಳ ಒಳಗೆ ನೀರು
ನಗರದ ಕೆಲವು ಭಾಗಗಳಲ್ಲಿ ಸ್ಮಾರ್ಟ್‌ ಸಿಟಿ ಕಾಮಗಾರಿಗಳು ನಡೆ ಯುತ್ತಿದ್ದು, ಮಳೆಯಿಂದಾಗಿ ಈ ಕಾಮಗಾರಿಗೆ ಕೆಲವು ಕಡೆ ತೊಂದರೆ ಉಂಟಾಗಿದೆ. ಚರಂಡಿ, ಪೈಪ್‌ಲೈನ್‌, ಒಳ ಚರಂಡಿ ನಿರ್ಮಾಣ ಇತ್ಯಾದಿ ಕಾಮಗಾರಿಗಾಗಿ ಅಗೆದ ಜಾಗಗಳಲ್ಲಿ ಮಳೆ ನೀರು ತುಂಬಿ ನಿಂತಿತ್ತು. ಬಹಳಷ್ಟು ಕಡೆ ಅಗೆದು ಹಾಕಿದ್ದರಿಂದ ಮಳೆ ನೀರು ಸರಿಯಾಗಿ ಹರಿಯಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಅಂಗಡಿ ಮುಂಗಟ್ಟುಗಳ ಒಳಗೆ ನೀರು ತುಂಬಿ ಕೊಂಡಿತ್ತು.

ಪುರಭವನದ ಎದುರಿರುವ ಮಿನಿ ವಿಧಾನ ಸೌಧ, ಮಂಗಳೂರು ತಾಲೂಕು ಕಚೇರಿ ಆವರಣಕ್ಕೆ ಮಳೆ ನೀರು ನುಗ್ಗಿತ್ತು. ಕ್ಲಾಕ್‌ ಟವರ್‌ ಬಳಿ ಅಂಗಡಿಯ ಒಳಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು. ಬಿಜೈ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಭಾರತ್‌ ಮಾಲ್‌ ಎದುರು ರಸ್ತೆ ತಿರುವಿನಲ್ಲಿ ಮಳೆ ನೀರು ತುಂಬಿ ನಿಂತಿತ್ತು.

ಇದನ್ನೂ ಓದಿ : ನಾಗಮಂಗಲ: ಗ್ರಾಮದೇವತೆ ಹಬ್ಬದಲ್ಲಿ ನಂಗಾನಾಚ್‌; ಅಪ್ರಾಪ್ತನಿಗೆ ಚುಂಬಿಸಿ ಅಶ್ಲೀಲವಾಗಿ ನೃತ್ಯ

ರಸ್ತೆ ಬದಿ ಅಲ್ಲಲ್ಲಿ ಅಗೆದು ಹಾಕಿದ್ದರಿಂದ ಮಣ್ಣಿನ ರಾಶಿಯ ಮೇಲೆ ಮಳೆ ನೀರು ಬಿದ್ದಾಗ ಕೆಸರುಮಯ ವಾತಾವರಣ ಸೃಷ್ಟಿಯಾಗಿ ಕಾಲೂರಿದರೆ ಜಾರುವ ಸ್ಥಿತಿ ನಿರ್ಮಾಣವಾಗಿತ್ತು. ವಾಹನ ಚಾಲಕರು ಅದರಲ್ಲೂ ಮುಖ್ಯವಾಗಿ ದ್ವಿಚಕ್ರ ವಾಹನ ಸವಾರರು ಬಹಳಷ್ಟು ಎಚ್ಚರಿಕೆಯಿಂದ ಚಾಲನೆ ಮಾಡ ಬೇಕಾಯಿತು.

ಲಾರಿಯ ಮೇಲೆ ಬಿದ್ದ ಮರ
ಸ್ಟೇಟ್‌ಬ್ಯಾಂಕ್‌- ರೊಜಾರಿಯೊ ರಸ್ತೆಯಲ್ಲಿ ಬಿಎಸ್‌ಎನ್‌ಎಲ್‌ ಕಚೇರಿ ಆವರಣದಿಂದ ಕಾಂಪೌಂಡ್‌, ಭಾರೀ ಗಾತ್ರದ ಮರ ಬುಡ ಸಮೇತ ಉರುಳಿ ರಸ್ತೆ ಬದಿ ನಿಲ್ಲಿಸಲಾಗಿದ್ದ ಲಾರಿ ಮೇಲೆ ಬಿದ್ದಿದೆ. ಲಾರಿಯಲ್ಲಿದ್ದ ಚಾಲಕ ಪುರುಷೋತ್ತಮ ಅವರು ಮರ ಬೀಳುತ್ತಿರುವ ಸದ್ದು ಕೇಳಿ ತತ್‌ಕ್ಷಣ ಎಚ್ಚೆತ್ತುಕೊಂಡು ಲಾರಿಯಿಂದ ರಸ್ತೆಗೆ ಹಾರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿಗೆ ಭಾರೀ ಹಾನಿಯಾಗಿದೆ.

ರೊಜಾರಿಯೊ, ಸೈಂಟ್‌ ಆ್ಯನ್‌ ಶಿಕ್ಷಣ ಸಂಸ್ಥೆಗಳನ್ನು ಸಂಪರ್ಕಿಸುವ ಪ್ರಮುಖ ರಸ್ತೆ ಇದಾಗಿದ್ದು, ಮರ ಬೀಳುವ ಸಂದರ್ಭದಲ್ಲಿ ರಸ್ತೆ ಖಾಲಿ ಇದ್ದುದರಿಂದ ಯಾವುದೇ ಅಪಾಯ ಸಂಭವಿಸಿಲ್ಲ.

ಪಾಂಡೇಶ್ವರ ಅಗ್ನಿ ಶಾಮಕ ದಳದವರು ಕಾರ್ಯಾಚರಣೆ ನಡೆಸಿ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಿದರು. ಸಂಚಾರ ಪಶ್ಚಿಮ ಠಾಣೆಯ ಪೊಲೀಸರು ಸಂಚಾರ ನಿಯಂತ್ರಣಕ್ಕೆ ಸಹಕರಿಸಿದರು. ಮೆಸ್ಕಾಂ ಅಧಿಕಾರಿ ಮತ್ತು ಸಿಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು, ವಿದ್ಯುತ್‌ ಸಂಪರ್ಕವನ್ನು ಕಡಿತಗೊಳಿಸಿ ಮರ ತೆರವು ಕಾರ್ಯಾಚರಣೆ ನೆರವಾದರು.

ಟಾಪ್ ನ್ಯೂಸ್

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.