Rain ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ: ಕೆಲವೆಡೆ ಮಳೆ

ಸುಳ್ಯ, ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ

Team Udayavani, Jan 7, 2024, 12:16 AM IST

Rain ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ: ಕೆಲವೆಡೆ ಮಳೆ

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧೆಡೆ ಶನಿವಾರ ಸಂಜೆ, ರಾತ್ರಿ ವೇಳೆ ಮತ್ತೆ ಮಳೆಯಾಗಿದೆ. ಉಭಯ ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣ ಕಂಡು ಬಂದಿತ್ತು.

ಸಂಜೆಯಾಗುತ್ತಲೇ ಬಂಟ್ವಾಳ ಸುತ್ತಮುತ್ತ ಹನಿಮಳೆಯಾಗಿದ್ದು, ಸುಳ್ಯ ತಾಲೂಕಿನ ವಿವಿಧೆಡೆ ಧಾರಾಕಾರ ಮಳೆ ಸುರಿದಿದೆ. ಉಡುಪಿ, ಕುಂದಾಪುರ, ಕಾರ್ಕಳ, ಬೆಳ್ತಂಗಡಿಯಲ್ಲಿಯೂ ಮಳೆ ಸುರಿದಿದೆ.

ಅರಬಿ ಸಮುದ್ರದಲ್ಲಿ ಲಕ್ಷದ್ವೀಪ ಭಾಗದಲ್ಲಿ ಉಂಟಾಗಿರುವ ಕಡಿಮೆ ಒತ್ತಡ ಪ್ರದೇಶದ ಹಿನ್ನೆಲೆಯಲ್ಲಿ ಆಕಾಶದಲ್ಲಿ ಮೋಡದ ಚಲನೆ ಜೋರಾಗಿದೆ. ಇನ್ನು ಕೆಲವು ದಿನ ಮಳೆ ವಾತಾವರಣ ಕಂಡು ಬರುವ ಸಾಧ್ಯತೆಯಿದೆ. ಜತೆಗೆ ಸಮುದ್ರದಲ್ಲಿ 1.5ಮೀ ವರೆಗಿನ ಅಲೆಗಳ ಉಬ್ಬರವಿಳಿತವಿರುವುದರಿಂದ ತೀರದ ಪ್ರದೇಶದಲ್ಲಿ ಕಡಲು ಪ್ರಕ್ಷಬ್ಧವಾಗಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಂಗಳೂರಿನಲ್ಲಿ ದಿನದ ಗರಿಷ್ಠ ತಾಪಮಾನ 32.4 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ ತಾಪಮಾನ 23.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಸುಳ್ಯ, ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ
ಸುಳ್ಯ/ಸುಬ್ರಹ್ಮಣ್ಯ: ಸುಳ್ಯ ತಾಲೂಕಿನಾದ್ಯಂತ ಹಾಗೂ ಸುಬ್ರಹ್ಮಣ್ಯ ಪರಿಸರದಲ್ಲಿ ಶನಿವಾರ ಸಂಜೆಯಿಂದ ಭಾರೀ ಮಳೆಯಾಗಿದೆ.

ಸಂಜೆ 6 ಗಂಟೆಯ ಬಳಿಕ ಧಾರಾಕಾರ ಮಳೆ ಸುರಿದಿದೆ. ಸುಳ್ಯ ನಗರದಲ್ಲಿ ಸುಮಾರು ಎರಡು ಗಂಟೆಗೂ ಅಧಿಕ ಮಳೆಯಾಗಿದೆ. 70 ಮಿಮಿಗಿಂತ ಅಧಿಕ ಮಳೆಯಾಗಿದೆ.

ಸುಳ್ಯ ತಾಲೂಕಿನ ವಿವಿಧೆಡೆ ಶನಿವಾರ ಸಂಜೆ ಭಾರೀ ಮಳೆಯಾಗಿದೆ. ಕಡಬ ಹಾಗೂ ಸುಬ್ರಹ್ಮಣ್ಯದಲ್ಲಿಯೂ ಭರ್ಜರಿ ಮಳೆ ಸುರಿದಿದೆ. ಶನಿವಾರ ಸಂಜೆ ವರೆಗೆ ಬಿಸಿಲ ವಾತಾವಾರಣ ಇದ್ದ ಸುಳ್ಯ ತಾಲೂಕಿನಲ್ಲಿ ಶನಿವಾರ ಸಂಜೆ ವೇಳೆ ಮಳೆ ಆರಂಭಗೊಂಡಿದೆ. ರಾತ್ರಿಯೂ ವಿವಿಧಡೆ ಭಾರೀ ಮಳೆ ಮುಂದುವರಿದಿದೆ. ವಿವಿಧ ಭಾಗಗಳಲ್ಲಿ ಸುಮಾರು ಎರಡು ಗಂಟೆಗೂ ಅಧಿಕ ಕಾಲ ಮಳೆಯಾಗಿದೆ.

ಸುಳ್ಯ ತಾಲೂಕಿನ ಎಲಿಮಲೆ, ಮರ್ಕಂಜ, ವಳಲಂಬೆ ಮತ್ತಿತರ ಕಡೆಗಳಲ್ಲಿ ಧಾರಕಾರ ಮಳೆಯಾಗಿದೆ. ಸುಳ್ಯ ನಗರ, ಜಾಲೂÕರು, ಮಂಡೆಕೋಲು, ಬೆಳ್ಳಾರೆ, ಐವರ್ನಾಡು, ಕೊಲ್ಲಮೊಗ್ರು, ಅರಂತೋಡು ಪರಿಸರದಲ್ಲೂ ಉತ್ತಮ ಮಳೆಯಾಗಿದೆ.

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.