ರಾಜ್ಯದಲ್ಲಿ ನೆರೆ ಹಾವಳಿ: “ಆಳ್ವಾಸ್ ನುಡಿಸಿರಿ ವಿರಾಸತ್” ಮುಂದೂಡಿಕೆ
Team Udayavani, Aug 28, 2019, 6:05 PM IST
ಮೂಡಬಿದರೆ : ರಾಜ್ಯದಲ್ಲಿ ನೆರೆ ಹಾವಳಿಯಿಂದ ಜನ ಸಂಕಷ್ಟಕ್ಕೆ ಒಳಗಾಗಿದ್ದು, ಸಾವಿರಾರು ಕುಟುಂಬಗಳು ಕಣ್ಣೀರಿನಲ್ಲಿ ಕೈತೊಳೆಯುತ್ತಿವೆ. ಸ್ವಾಭಿಮಾನದಿಂದ ಬದುಕಿದ ನಮ್ಮ ಬಂಧುಗಳು ಸಂಕಷ್ಟವನ್ನು ಎದುರಿಸುತ್ತಿರಬೇಕಾದರೆ ನಾವು ಸಂಭ್ರಮಿಸುವುದರಲ್ಲಿ ಅರ್ಥವಿಲ್ಲ. ಹೀಗಾಗಿ ನವೆಂಬರ್ ನಲ್ಲಿ ನಡೆಯಬೇಕಿದ್ದ ಈ ಬಾರಿಯ ಆಳ್ವಾಸ್ ನುಡಿಸಿರಿ ವಿರಾಸತ್ ಕಾರ್ಯಕ್ರಮವನ್ನು ಮುಂದೂಡಲು ನಿರ್ಧರಿಸಲಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮುಖ್ಯಸ್ಥ ಡಾ ಎಂ ಮೋಹನ್ ಆಳ್ವ ತಿಳಿಸಿದ್ದಾರೆ .
ಸಂಸ್ಥೆಯು ಕಳೆದ 25 ವರ್ಷಗಳಿಂದ ”ಆಳ್ವಾಸ್ ವಿರಾಸತ್” ಮತ್ತು 15 ವರ್ಷದಿಂದ ‘ಆಳ್ವಾಸ್ ನುಡಿಸಿರಿ’ ಎನ್ನುವ ಎರಡು ಬೃಹತ್ ಕಾರ್ಯಕ್ರಮಗಳನ್ನು ಸಾಂಗವಾಗಿ ನೆರವೇರಿಸುತ್ತಾ ಬಂದಿದ್ದು, ಈ ಬಾರಿಯ “ಆಳ್ವಾಸ್ ನುಡಿಸಿರಿ ವಿರಾಸತ್” ಆಚರಿಸಲು ದಿನಾಂಕ ನಿಗದಿಪಡಿಸಲಾಗಿದ್ದರೂ, ನಮ್ಮ ಜನ ದುಃಖದಲ್ಲಿ ಮುಳುಗಿರುವಾಗ ಉತ್ಸವಗಳ ಮೂಲಕ ನಾವು ಸಂಭ್ರಮಿಸಿದರೆ ಅರ್ಥವಿಲ್ಲ. ಆ ಹಿನ್ನಲೆಯಲ್ಲಿ ಅವರ ಕಷ್ಟಗಳಲ್ಲಿ ಭಾಗಿಯಾಗಬೇಕೆಂದು ಯೋಚಿಸಿ, ಸಹಾಯ ಹಸ್ತ ನೀಡಲು ಸಂಸ್ಥೆ ಮುಂದಾಗಿದ್ದು, ಸಂಸ್ಥೆ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸೇರಿ ದೊಡ್ಡ ಮೊತ್ತವನ್ನು ಮುಖ್ಯಮಂತ್ರಿಯ ನೆರೆ ಪರಿಹಾರ ನಿಧಿಗೆ ನೀಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ