ಮಳೆ: ಮುಂಜಾಗ್ರತೆ ಕೈಗೊಳ್ಳುವಲ್ಲಿ ಸರಕಾರ ವಿಫ‌ಲ: ಕಾಂಗ್ರೆಸ್‌ ನಾಯಕರ ಆರೋಪ


Team Udayavani, Jul 13, 2022, 1:23 AM IST

ಮಳೆ: ಮುಂಜಾಗ್ರತೆ ಕೈಗೊಳ್ಳುವಲ್ಲಿ ಸರಕಾರ ವಿಫ‌ಲ: ಕಾಂಗ್ರೆಸ್‌ ನಾಯಕರ ಆರೋಪ

ಮಂಗಳೂರು: ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದೆ ಜಿಲ್ಲೆಯಲ್ಲಿ ಮಳೆ ಅನಾಹುತಗಳನ್ನು ನಿರ್ವಹಿಸುವಲ್ಲಿ ಸರಕಾರ ವಿಫ‌ಲವಾಗಿದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ, ವಿಧಾನಪರಿಷತ್‌ ಸದಸ್ಯ ಹರೀಶ್‌ ಕುಮಾರ್‌ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿದರೂ ಸಚಿವರು ಪೂರ್ವಭಾವಿ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಂಡಿರಲಿಲ್ಲ. ಅನಾಹುತಗಳು ಸಂಭವಿಸಿದಾಗ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಿ ಪರಿಹಾರ ಕ್ರಮಗಳನ್ನು ಕೈಗೊಂಡಿಲ್ಲ. ಸಿಎಂ ಸೂಚಿಸಿದರೂ ಸಚಿವರು ಕ್ಷೇತ್ರಕ್ಕೆ ಭೇಟಿ ಕೊಟ್ಟಿಲ್ಲ. ಸಚಿವರ ವೈಫ‌ಲ್ಯದಿಂದಾಗಿ ಖುದ್ದು ಸಿಎಂ ಅವರೇ ಭೇಟಿ ನೀಡುವಂತಾಗಿದೆ. ಜಿಲ್ಲೆಯಲ್ಲಿ ಕೃಷಿ ಭೂಮಿ, ತೋಟಕ್ಕೆ ಹಾನಿಯಾಗಿದೆ. ಐವರು ಮೃತಪಟ್ಟಿದ್ದಾರೆ. ಕಡಲ್ಕೊರೆತ, ಗುಡ್ಡ ಕುಸಿತ, ಮನೆಕುಸಿತ, ಕಟ್ಟಡ, ರಸ್ತೆಗಳಿಗೆ ಹಾನಿ ಮೊದಲಾದವು ಸಂಭವಿಸಿವೆ. ಸರಕಾರ ಶೀಘ್ರ ಪರಿಹಾರ ನೀಡಬೇಕು, ದುರಸ್ತಿ ಕೆಲಸ ಮಾಡಬೇಕು ಎಂದರು.

“ಪಠ್ಯಪುಸ್ತಕದ ತಪ್ಪು
ಒಪ್ಪಿಕೊಂಡ ಸರಕಾರ’
ಸಂಸದರು, ಸಚಿವರು ಮಾಡಿದ ಮನವಿಯಂತೆ ನಾರಾಯಣ ಗುರುಗಳ ಪಠ್ಯವನ್ನು ಮರುಸೇರ್ಪಡೆಗೊಳಿಸಲು ಶಿಕ್ಷಣ ಸಚಿವರು ಸೂಚಿಸಿದ್ದಾರೆಂದು ವರದಿಯಾಗಿದೆ. ಇದು ಪಠ್ಯ ಕೈಬಿಟ್ಟಿರುವ ವಿಚಾರವನ್ನು ಸರಕಾರ ಒಪ್ಪಿಕೊಂಡಂತೆ. ಸರಕಾರದ ಮುಂದಿನ ಕ್ರಮಗಳನ್ನು ನಿರೀಕ್ಷಿಸುತ್ತಿದ್ದೇವೆ. ಈ ಗೊಂದಲವನ್ನು ಕೂಡ ಮುಖ್ಯಮಂತ್ರಿಯವರು ನಿವಾರಿ ಸಬೇಕು ಎಂದು ಹೇಳಿದರು.

ಕಡಲ್ಕೊರೆತ ತಡೆಗೆ ಕಲ್ಲು ಹಾಕಿಲ್ಲ
ಶಾಸಕ ಯು.ಟಿ. ಖಾದರ್‌ ಮಾತನಾಡಿ, ಸಿಎಂ ಭೇಟಿ ಸ್ವಾಗತಾರ್ಹ. ಆದರೆ ಸಚಿವರು ಇದುವರೆಗೆ ಏನು ಮಾಡಿದ್ದಾರೆ ಎಂಬುದನ್ನು ತಿಳಿಸಬೇಕು. ಕಂದಾಯ ಸಚಿವರು ಭೇಟಿ ನೀಡಿ ಹಲವು ದಿನಗಳಾದರೂ ಕಡಲ್ಕೊರೆತ ತಡೆಗೆ ಒಂದು ಕಲ್ಲನ್ನೂ ಹಾಕಿಲ್ಲ. ಶೀಘ್ರ ಪರಿಹಾರ ವಿತರಿಸುವುದಾಗಿ ನೀಡಿರುವ ಭರವಸೆಯೂ ಈಡೇರಿಲ್ಲ. ಮಳೆಗಾಲದ ಮೊದಲು ಚರಂಡಿಗಳ ಹೂಳೆತ್ತಿಲ್ಲ. ಜನಪ್ರತಿನಿಧಿಗಳ ಜತೆ ಸಭೆಯನ್ನು ಕೂಡ ನಡೆಸಿಲ್ಲ ಎಂದರು.

ರಕ್ಷಣೆಯಲ್ಲಿ ವಿಫ‌ಲ
ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದಲ್ಲಿ ಗುಡ್ಡ ಕುಸಿತದಿಂದ ಕಾರ್ಮಿಕರು ನಾಲ್ಕು ತಾಸು ಮನೆಯೊಳಗಿದ್ದರೂ ಅವರನ್ನು ರಕ್ಷಿಸಲು ಜಿಲ್ಲಾಡಳಿತದಿಂದ ಸಾಧ್ಯವಾಗಲಿಲ್ಲ. ಊರಿನವರೇ ಜೆಸಿಬಿ ತಂದು ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳ ಚಿಕಿತ್ಸೆಗೂ ಸಮರ್ಪಕ ವ್ಯವಸ್ಥೆ ಮಾಡಿಲ್ಲ. ಗಾಯಾಳುವನ್ನು ಬಂಟ್ವಾಳದ ಆಸ್ಪತ್ರೆಗೆ ಅನಂತರ ಮಂಗಳೂರಿನಲ್ಲಿಯೂ ಬಿಲ್‌ ಪಾವತಿ ವಿಚಾರವಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿಸಿದರು. ಆಸ್ಪತ್ರೆಗೆ ಸಹಾಯಕ ಆಯುಕ್ತರು ಕರೆ ಮಾಡಿದರೂ ಪ್ರಯೋಜನವಾಗಲಿಲ್ಲ ಎಂದು ದೂರಿದರು.

ವಿಧಾನಪರಿಷತ್‌ ಸದಸ್ಯ ಡಾ| ಮಂಜುನಾಥ ಭಂಡಾರಿ, ಮುಖಂಡ ರಾದ ಕೋಡಿಜಾಲ್‌ ಇಬ್ರಾಹಿಂ, ಸಾಹುಲ್‌ ಹಮೀದ್‌, ಲಾರೆನ್ಸ್‌, ಝೋಕಿಂ, ಸದಾಶಿವ ಉಳ್ಳಾಲ, ನೀರಜ್‌ಪಾಲ್‌, ಶುಭೋದಯ ಆಳ್ವ, ಟಿ.ಕೆ. ಸುಧೀರ್‌, ವರದೇಶ್‌ ಅಮೀನ್‌, ಸುರೇಂದ್ರ ಕಾಂಬ್ಳಿ, ಮೆಲ್ವಿನ್‌ ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

100 ಕೋ.ರೂ. ವಿಶೇಷ ಪ್ಯಾಕೇಜ್‌: ಸಿಎಂಗೆ ಮನವಿ
ದ.ಕ. ಮತ್ತು ಉಡುಪಿ ಜಿಲ್ಲೆಗಳನ್ನು ಪ್ರವಾಹ ಪೀಡಿತವೆಂದು ಘೋಷಿಸಿ 100 ಕೋ.ರೂ. ವಿಶೇಷ ಪ್ಯಾಕೇಜ್‌ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಗಿದೆ. ರಸ್ತೆ, ಕಿರು ಸೇತುವೆ ಕೂಡಲೇ ದುರಸ್ತಿ ಮಾಡಿಸಬೇಕು, ಹಾನಿಗೊಳಗಾದ ಶಾಲೆ-ಅಂಗನವಾಡಿಗಳ ಕಟ್ಟಡವನ್ನು ಶೀಘ್ರ ದುರಸ್ತಿಗೊಳಿಸಬೇಕು, ಪೂರ್ಣ ಹಾನಿಗೊಳಗಾದ ಮನೆಗಳಿಗೆ ಬದಲಾಗಿ ಹೊಸ ಮನೆ ನಿರ್ಮಿಸಬೇಕು, ಭಾಗಶಃ ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡಬೇಕು, ಕೃಷಿ ಭೂಮಿ ಹಾನಿಗೊಳಗಾದ ರೈತರಿಗೆ, ತೆಂಗು ಮತ್ತು ಅಡಿಕೆ ಬೆಳೆಗಾರರಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು, ಮೃತರ ಕುಟುಂಬಕ್ಕೆ ಕನಿಷ್ಠ ತಲಾ 10 ಲ.ರೂ. ಶೀಘ್ರ ಪರಿಹಾರ ನೀಡಬೇಕು, ಕಡಲ್ಕೊರೆತ ಪ್ರದೇಶಕ್ಕೆ ವೈಜ್ಞಾನಿಕ ರೀತಿ ಯಲ್ಲಿ ತಡೆಗೋಡೆ ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಲಾಗಿದೆ.

 

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.