ಮಳೆಕೊಯ್ಲು ಅಳವಡಿಕೆ: ಸುತ್ತಲಿನ 100 ಮನೆಗಳಿಗೆ ನೀರಿನ ಪ್ರಯೋಜನ

"ಮನೆ ಮನೆಗೆ ಮಳೆಕೊಯ್ಲು' ಉದಯವಾಣಿ ಅಭಿಯಾನದ ಯಶಸ್ಸು

Team Udayavani, Aug 14, 2019, 5:07 AM IST

s-12

ಕುಲಶೇಖರ ಕೊರ್ಡೆಲ್‌ ಹಾಲ್‌ನಲ್ಲಿ ವಿಭಿನ್ನ ರೀತಿಯಲ್ಲಿ ಮಳೆಕೊಯ್ಲು ವ್ಯವಸ್ಥೆ ಅಳವಡಿಸಿ ಚರ್ಚ್‌ ಸಮಿತಿ ಮಾದರಿಯಾಗಿದೆ. ಹಾಲ್‌ನಲ್ಲಿ ಸಮಾರಂಭಗಳು ನಡೆದಾಗ ಅವರಿಗೆ ಉತ್ತಮ ನೀರು ಕಲ್ಪಿಸುವ ಆಶಯದೊಂದಿಗೆ ಎರಡು ಬಾವಿ ಹಾಗೂ ಎರಡು ಬೋರ್‌ವೆಲ್‌ಗೆ ಮಳೆಕೊಯ್ಲು ಅಳವಡಿಸಲಾಗಿದೆ.

ಹಾಲ್‌ ಆವರಣದಲ್ಲಿ ಕಳೆದೊಂದು ತಿಂಗಳಲ್ಲಿ ಸುಮಾರು ಏಳೆಂಟು ಲಕ್ಷ ರೂ. ಖರ್ಚು ಮಾಡಿ ಎರಡು ಬಾವಿ ಕೊರೆಯಲಾಗಿದೆ. “ಉದಯವಾಣಿ’ ಮಳೆಕೊಯ್ಲು ಅಭಿಯಾನ ನೋಡಿದ ಬಳಿಕ, ಹೊಸದಾಗಿ ಕೊರೆದ ಬಾವಿಗಳಲ್ಲಿ ಮುಂದೆ ನೀರಿನ ಸಮಸ್ಯೆ ಆಗದೇ ಇರಲೆಂದು ಮಳೆಕೊಯ್ಲು ಅಳವಡಿಸುವ ಚಿಂತನೆಯೊಂದಿಗೆ ಚರ್ಚ್‌ ಸಂಬಂಧಪಟ್ಟವರು ಕಾರ್ಯೋನ್ಮುಖರಾದರು. ಅಂತೆಯೇ ಎರಡು ಬಾವಿ, ಸನಿಹದಲ್ಲೇ ಇರುವ ಇನ್ನೊಂದು ಬೋರ್‌ವೆಲ್‌ಗೆ ಮಳೆಕೊಯ್ಲು ಅಳವಡಿಸಲಾಗಿದೆ. ಇಡೀ ಹಾಲ್‌ನ ಛಾವಣಿ ನೀರನ್ನು ಹಿಡಿದಿಟ್ಟು ಶುದ್ಧಗೊಳಿಸಿ ಬಾವಿ, ಬೋರ್‌ವೆಲ್‌ಗೆ ಬಿಡಲಾಗುತ್ತಿದೆ.

ವಿಶೇಷವೆಂದರೆ, ಹಾಲ್‌ನ ಪ್ರವೇಶದ್ವಾರದ ಬಳಿ ಇರುವ ಇನ್ನೊಂದು ಬೋರ್‌ವೆಲ್‌ಗ‌ೂ ಮಳೆಕೊಯ್ಲು ಮಾದರಿಯಲ್ಲಿ ನೀರು ಇಂಗುವಂತೆ ವ್ಯವಸ್ಥೆ ಮಾಡಲಾಗಿದೆ. ವ್ಯರ್ಥವಾಗಿ ಹೊರಗೆ ಹರಿದು ಹೋಗುವ ನೀರನ್ನು ವೃತ್ತಾಕಾರದ ಜಾಗದಲ್ಲಿ ಬೀಳುವಂತೆ ಮಾಡಿ ಅದನ್ನು ಬೋರ್‌ವೆಲ್‌ಗೆ ಇಂಗಿಸುವ ಕೆಲಸವಾಗಿದೆ. “ಚರ್ಚ್‌ ಧರ್ಮಗುರು ವಂ| ವಿಕ್ಟರ್‌ ಮಚಾದೋ ಅವರ ಮನೆಯ ಬಾವಿಗೂ ಮಳೆಕೊಯ್ಲು ಅಳವಡಿಸಲಾಗಿದೆ. ಈ ಎಲ್ಲ ಮಳೆ ನೀರಿಂಗಿಸುವ ವ್ಯವಸ್ಥೆಯಿಂದಾಗಿ ಸನಿಹದಲ್ಲಿರುವ ಸೈಂಟ್‌ ಜೋಸೆಫ್‌ ಶಾಲೆ ಸಹಿತ ಸನಿಹದ ಸುಮಾರು 100 ಮನೆಗಳಿಗೆ ನೀರಿನ ಪ್ರಯೋಜನ ಮಳೆಗಾಲದಲ್ಲಿ ಸಿಗಬಹುದು’ ಎನ್ನುತ್ತಾರೆ ಚರ್ಚ್‌ ಹಣಕಾಸು ಸಮಿತಿಯ ಸದಸ್ಯ ಬೆನೆಟ್‌ ಡಿ’ಸಿಲ್ವ.

ವಂ| ವಿಕ್ಟರ್‌ ಮಚಾದೋ ಅವರ ಮುಂದಾಳತ್ವದಲ್ಲಿ ಮಳೆಕೊಯ್ಲು ಅಳವಡಿಕೆ ಕಾರ್ಯ ನಡೆದಿದೆ. ಚರ್ಚ್‌ ವ್ಯಾಪ್ತಿಯ ಜನರು ಚರ್ಚ್‌ಗೆ ಆಗಮಿಸುವ ವೇಳೆ ಮಳೆಕೊಯ್ಲು ವ್ಯವಸ್ಥೆಯನ್ನು ನೋಡಿ, ತಮ್ಮ ಮನೆಗಳಲ್ಲೂ ಅಳವಡಿಸಲು ಪ್ರೇರಣೆ ಪಡೆಯುತ್ತಾರೆ. ಆಸಕ್ತರಿಗೆ ಮಾಹಿತಿ ನೀಡುವ ಕೆಲಸವನ್ನೂ ಮಾಡಲಿದ್ದೇವೆ ಎನ್ನುತ್ತಾರೆ ಅವರು.

ಮಾಹಿತಿ ಪಡೆದು ಮಳೆಕೊಯ್ಲು ಅಳವಡಿಕೆ
ಮೂಡುಬಿದಿರೆ ಆಲಂಗಾರು ನಿವಾಸಿ ಗಿಲ್ಬರ್ಟ್‌ ಮಿರಾಂದ ಅವರು ವಾರದ ಹಿಂದಷ್ಟೇ ತಮ್ಮ ಮನೆಯ ಬೋರ್‌ವೆಲ್‌ಗೆ ಮಳೆಕೊಯ್ಲು ಅಳವಡಿಸಿಕೊಂಡಿದ್ದಾರೆ. ಮನೆಯ ಛಾವಣಿ ನೀರನ್ನು ಪೈಪ್‌ ಮುಖಾಂತರ ತಂದು ಬೋರ್‌ವೆಲ್‌ಗೆ ಬೀಳುವಂತೆ ನೋಡಿಕೊಂಡಿದ್ದಾರೆ. ನೆಟ್‌ ಅಳವಡಿಸಿರುವುದರಿಂದ ಶುದ್ಧ ನೀರು ಬೋರ್‌ವೆಲ್‌ಗೆ ಬೀಳುತ್ತದೆ. “ಮಳೆಕೊಯ್ಲು ಅಳವಡಿಸುವ ಬಗ್ಗೆ ಮಾಹಿತಿ ಕೊರತೆ ಇತ್ತು. ಬಳಿಕ “ಉದಯವಾಣಿ’ ಅಭಿಯಾನದಲ್ಲಿ ಮಳೆಕೊಯ್ಲು ಮಾಹಿತಿ ಓದಿದ ಬಳಿಕ ಅದನ್ನು ಅಳವಡಿಸುವ ಕ್ರಮ ತಿಳಿದುಕೊಂಡು ಅಳವಡಿಸಿದ್ದೇನೆ’ ಎನ್ನುತ್ತಾರೆ ಗಿಲ್ಬರ್ಟ್‌.

 ಪ್ರಯೋಜನ ಪಡೆಯಬೇಕು
ಇಂದಿನ ಡಿಜಿಟಲ್‌, ವಾಟ್ಸಪ್‌ ಯುಗದಲ್ಲಿ ಉದಯವಾಣಿ ಸುದಿನವು ಮನೆ ಮನೆಗೆ ಮಳೆಕೊಯ್ಲು ಅಭಿಯಾನದ ಮುಖೇನ ನೀರಿನ ಉಳಿ ತಾಯದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕು.
 - ಸೂರಜ್‌ ಸಾಲ್ಯಾನ್‌, ಕಾವೂರು

ನೀವೂ ಅಳವಡಿಸಿ, ವಾಟ್ಸಪ್‌ ಮಾಡಿ
ಉದಯವಾಣಿಯ ಅಭಿಯಾನದಿಂದ ಪ್ರೇರಣೆಗೊಂಡು ಕಾರ್ಯಾಗಾರದಲ್ಲಿ ಭಾಗವಹಿಸಿದವರು ಈಗ ಕಾರ್ಯೋನ್ಮುಖರಾಗಿ ಮಳೆ ನೀರು ಕೊಯ್ಲು ಪದ್ಧತಿಯನ್ನು ತಮ್ಮ ಮನೆ, ಸಂಘ- ಸಂಸ್ಥೆ, ಧಾರ್ಮಿಕ ಕೇಂದ್ರಗಳ ಲ್ಲಿ ಅಳವಡಿಸುತ್ತಿದ್ದಾರೆ. “ಮನೆ ಮನೆಗೆ ಮಳೆಕೊಯ್ಲು’ ಅಭಿಯಾನದಿಂದ ಪ್ರೇರಿತರಾಗಿ ನೀವೂ ನಿಮ್ಮ ಮನೆ, ಮಳೆ ಕೊಯ್ಲು ಪದ್ಧತಿ ಅಳವಡಿಸಿಕೊಂಡಿದ್ದರೆ ಫೋಟೋ ಸಮೇತ ನಮಗೆ ವಿವರವನ್ನು ವಾಟ್ಸಪ್‌ ಮಾಡಿ. ಅವುಗಳನ್ನು ಪತ್ರಿಕೆಯಲ್ಲಿ ಪ್ರಕಟಿಸಿ ಮತ್ತಷ್ಟು ಜನರನ್ನು ಉತ್ತೇಜಿಸೋಣ. 9900567000

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.