ಮಳೆ ಕೊಯ್ಲು : ಮನೆ ಮನೆಯಲ್ಲೂ ಮೂಡುತ್ತಿದೆ ಜಾಗೃತಿ

ಮನೆಮನೆಗೆ ಮಳೆಕೊಯ್ಲು' ಉದಯವಾಣಿ ಅಭಿಯಾನ ಪರಿಣಾಮ

Team Udayavani, Jul 2, 2019, 5:00 AM IST

32

ಮಹಾನಗರ: ನಗರ ಮಾತ್ರವಲ್ಲದೆ, ನಗರದ ಹೊರ ವಲಯಗಳಲ್ಲಿಯೂ ಜನರು ಜಲಜಾಗೃತಿ ಕಾರ್ಯದಲ್ಲಿ ತೊಡಗಿದ್ದಾರೆ. ಮಳೆಕೊಯ್ಲು ವ್ಯವಸ್ಥೆ ಅಳವಡಿಸಿ ಭವಿಷ್ಯದಲ್ಲಿ ನೀರಿನ ಭವಣೆ ತಪ್ಪಿಸಲು ಈಗಿಂದಲೂ ಸನ್ನದ್ಧರಾಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ.

‘ಮನೆಮನೆಗೆ ಮಳೆಕೊಯ್ಲು’ ಉದಯವಾಣಿ ಅಭಿಯಾನದ ಬಳಿಕದಿನದಿಂದ ದಿನಕ್ಕೆ ಮಳೆಕೊಯ್ಲು ಅಳವಡಿಸುವವರ ಸಂಖ್ಯೆ ಜಾಸ್ತಿಯಾಗುತ್ತಿರುವುದು ಈ ನಿಟ್ಟಿನಲ್ಲಿ ಗಮನಾರ್ಹ.

ಕೊಳವೆ ಬಾವಿಗೆ ಮಳೆ ನೀರು
ಹಲವು ವರ್ಷಗಳಿಂದ ನೀರಿನ ಸಮಸ್ಯೆ ಎದುರಾಗುತ್ತಿರುವುದರಿಂದ ಮಳೆಕೊಯ್ಲು ಅಳವಡಿಸುವ ಬಗ್ಗೆ ಯೋಚಿಸಿದೆವು. ಅದರಂತೆ ತಿಳಿದವರಿಂದ ಮಾಹಿತಿ ಕಲೆ ಹಾಕಿ ಮಳೆಕೊಯ್ಲು ಅಳವಡಿಸಿದೆವು. ಈಗ ನೀರಿನ ಸಮಸ್ಯೆ ಅಷ್ಟಾಗಿ ಕಾಣಿಸಿಕೊಂಡಿಲ್ಲ ಎನ್ನುತ್ತಾರೆ ಸೂರಿಂಜೆಯ ದಾಮೋದರ ಅಂಚನ್‌.

ಮನೆ 8 ಸೆಂಟ್ಸ್‌ ಜಾಗದಲ್ಲಿದ್ದು, ಮನೆಯ ಟೆರೇಸ್‌ಗೆ ಪೈಪ್‌ ಅಳವಡಿಸಿ ಅಲ್ಲಿಂದ ನೀರನ್ನು ನೇರವಾಗಿ ಬೋರ್‌ವೆಲ್ಗೆ ಬಿಟ್ಟಿದ್ದೇವೆ. ಹಿಂದೆ ಬೋರ್‌ವೆಲ್ನಲ್ಲಿ ಇದ್ದ ನೀರಿನ ಮಟ್ಟಕ್ಕಿಂತ ಮಳೆಕೊಯ್ಲು ಅಳವಡಿಸಿದ ಬಳಿಕ ನೀರಿನ ಮಟ್ಟ ಹೆಚ್ಚಾಗಿದೆ. ಮಳೆಕೊಯ್ಲು ಅಳವಡಿಕೆಯಿಂದ ನೀರಿನ ಸಮಸ್ಯೆ ಬಹಳ ಕಡಿಮೆಯಾಗಿದೆ. ಎಲ್ಲ ಮನೆಗಳಲ್ಲೂ ಮಳೆಕೊಯ್ಲು ಅಳವಡಿಕೆ ಮಾಡಿದರೆ ಉತ್ತಮ ಎನ್ನುತ್ತಾರೆ ಅವರು.

ಹಳೆ ಬಾವಿಗೆ ಮಳೆಕೊಯ್ಲು

ಕಿನ್ನಿಗೋಳಿಯ ಸಚ್ಚಿದಾನಂದ ಭಟ್ ಅವರು ನಾಲ್ಕು ದಿನಗಳ ಹಿಂದಷ್ಟೇ ತಮ್ಮ ಮನೆಯಲ್ಲಿ ಮಳೆಕೊಯ್ಲು ವ್ಯವಸ್ಥೆಯನ್ನು ಅಳವಡಿಸಿಕೊಂಡಿದ್ದಾರೆ.

ಸಚ್ಚಿದಾನಂದ ಅವರ ಮನೆಯಲ್ಲಿ 40 ವರ್ಷಗಳ ಹಳೆಯ ಬಾವಿ ಇದ್ದು, ಕಳೆದ ವರ್ಷದವರೆಗೂ ನೀರಿನ ಸಮಸ್ಯೆ ಉಂಟಾಗಿರಲಿಲ್ಲ. ಆದರೆ ಕಳೆದ ಬೇಸಗೆಯಲ್ಲಿ ಬಾವಿಯಲ್ಲಿ ನೀರು ಬತ್ತಿ ನೀರಿಗೆ ತೀವ್ರ ತೊಂದರೆ ಎದುರಿಸಬೇಕಾಯಿತು. ಹೀಗಾಗಿ ಮಳೆಕೊಯ್ಲು ಮೂಲಕ ನೀರು ಪಡೆಯಲು ಮುಂದಾದರು. ಛಾವಣಿ ನೀರನ್ನು ಟ್ಯಾಂಕ್‌ಗೆ ಬಿಟ್ಟು ಶುದ್ಧೀಕರಣ ಮಾಡಿ, ಶುದ್ಧೀಕೃತ ನೀರನ್ನು ಬಾವಿಗೆ ಬಿಡುತ್ತಿದ್ದಾರೆ.

‘ಉದಯವಾಣಿ’ ಪತ್ರಿಕೆಯಲ್ಲಿ ಮಳೆಕೊಯ್ಲು ವ್ಯವಸ್ಥೆ ಬಗ್ಗೆ ಬರುವ ಮಾಹಿತಿಗಳನ್ನು ತಪ್ಪದೇ ಓದುತ್ತಿದ್ದೆ. ಆ ಮಾಹಿತಿಯನುಸಾರ ನಾಲ್ಕು ದಿನಗಳ ಹಿಂದೆ ಮಳೆಕೊಯ್ಲು ವ್ಯವಸ್ಥೆ ಅಳವಡಿಸಿಕೊಂಡಿದ್ದೇನೆ ಎನ್ನುತ್ತಾರೆ ಅವರು.

ಉದಯವಾಣಿಯಿಂದ ಪ್ರೇರಣೆ
ಅತ್ತಾವರ ಮೇಲಿನಮೊಗರು ಸುಧಾಕರ ಕೊಟ್ಟಾರಿ ಅವರು ‘ಉದಯವಾಣಿ’ಯಲ್ಲಿ ಪ್ರಕಟವಾದ ಮಳೆಕೊಯ್ಲು ಅಳವಡಿಕೆ ಮಾಹಿತಿಯನ್ನು ಪಡೆದುಕೊಂಡು ಎರಡು ವಾರಗಳ ಹಿಂದೆ ತಮ್ಮ ಮನೆಯಲ್ಲಿಯೂ ಅಳವಡಿಸಿಕೊಂಡಿದ್ದಾರೆ. ಮನೆಯ ಛಾವಣಿ ನೀರನ್ನು ಪೈಪ್‌ ಮುಖಾಂತರ ಬಾವಿಗೆ ಬೀಳುವಂತೆ ನೋಡಿಕೊಂಡಿದ್ದಾರೆ. ನೀರು ಬಾವಿಗೆ ಬೀಳುವ ಮುನ್ನ ಕಸಕಡ್ಡಿ ಬೇರ್ಪಡಿಸಲು ಪೈಪ್‌ನ ಕೆಳಭಾಗದಲ್ಲಿ ನೆಟ್ ಹಾಕಿದ್ದಾರೆ. ಈ ಬೇಸಗೆಯಲ್ಲಿ ಮೇ ತಿಂಗಳಲ್ಲಿ ನೀರಿನ ಅಭಾವ ಬಂದಿತ್ತು. ಹೀಗಾಗಿ ಮಳೆಕೊಯ್ಲು ಅಳವಡಿಸಿಕೊಂಡಿದ್ದೇನೆ ಎನ್ನುತ್ತಾರೆ ಅವರು.ಜಲ ಸಾಕ್ಷರತೆ ಬಗ್ಗೆ ನಗರ ಪಾಲಿಕೆಯೊಂದಿಗೆ ದೊಡ್ಡ ಮಟ್ಟದಲ್ಲಿ ಕೈ ಜೋಡಿಸಬೇಕಾಗಿದೆ. ಪ್ರತಿ ಗ್ರಾಮದಲ್ಲಿ ಹರಿಯುವ ಎರಡು- ಮೂರು ಕಿ.ಮೀ. ಉದ್ದದ ಚರಂಡಿಯ ತಳಭಾಗಕ್ಕೆ ಕಾಂಕ್ರೀಟ್ ಹಾಕದೆ ಬಾವಿಗಳಿಗೆ, ಗಿಡ ಮರಗಳಿಗೆ ನೀರು ಇಂಗುವಂತೆ ನೋಡಿಕೊಳ್ಳಬೇಕು ಎಂದು ಅವರು ಸಲಹೆ ಮಾಡಿದ್ದಾರೆ.

ಟಾಪ್ ನ್ಯೂಸ್

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.