ಸರಳ ವಿಧಾನ ಅನುಸರಿಸಿ ಮನೆಗಳಲ್ಲಿ ಮಳೆಕೊಯ್ಲು ಅಳವಡಿಕೆ
"ಮನೆ ಮನೆಗೆ ಮಳೆಕೊಯ್ಲು' ಉದಯವಾಣಿ ಅಭಿಯಾನದ ಯಶಸ್ಸು
Team Udayavani, Sep 10, 2019, 5:15 AM IST
ಬಪ್ಪನಾಡಿನಲ್ಲಿ ಮಳೆಕೊಯ್ಲು ಕಾರ್ಯಾಗಾರ
ಬಪ್ಪನಾಡು ಸಾರ್ವಜನಿಕ ಶ್ರೀ ಗಣೇ ಶೋತ್ಸವ ಸಮಿತಿ ವತಿಯಿಂದ ನಡೆದ 44ನೇ ಸಾರ್ವಜನಿಕ ಗಣೇ ಶೋತ್ಸವ ಕಾರ್ಯ ಕ್ರಮದಲ್ಲಿ ಮಳೆ ಕೊಯ್ಲು ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಎಂಜಿನಿಯರ್ ಭರತ್ ಜೆ. ಮೇರಿಹಿಲ್, ಮಳೆಕೊಯ್ಲು ಅಳವಡಿಕೆಯ ಅಗತ್ಯ, ಇದರಿಂದ ಭವಿಷ್ಯದಲ್ಲಾಗುವ ಪ್ರಯೋಜನ ಮತ್ತು ಮಳೆಕೊಯ್ಲು ಅಳವಡಿಕೆಯ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು. ಸುಮಾರು 250 ಮಂದಿ ಭಾಗವಹಿಸಿದ್ದರು.
ನೀರಿನ ಮಟ್ಟ ಹೆಚ್ಚಳ
ಕುಂಪಲದ ಸುಮಂಗಲಾ ಅವರ ಮನೆಯಲ್ಲಿ ಮಳೆಕೊಯ್ಲು ಅಳವಡಿಸಿದ ಬಳಿಕ ಕಳೆದ ವರ್ಷಕ್ಕಿಂತ ಹೆಚ್ಚು ನೀರು ಈಬಾರಿ ಸಂಗ್ರಹವಾಗಿದೆ. ಎಪ್ರಿಲ್ನಲ್ಲೇ ನೀರಿನ ಸಮಸ್ಯೆ ತಲೆದೋರಿದ್ದರಿಂದ ಸುಮಂಗಲಾ ಅವರು, ಮನೆಯ ಬಾವಿಗೆ ಮಳೆಕೊಯ್ಲು ಅಳವಡಿಸಿದರು. ಛಾವಣಿ ನೀರನ್ನು ಪೈಪ್ ಮುಖಾಂತರ ಬಾವಿಗೆ ಬಿಡುವ ಮೂಲಕ ಸರಳ ವಿಧಾನವನ್ನು ಅನುಸರಿಸಿ ಮಳೆಕೊಯ್ಲು ಮಾಡಿದ್ದಾರೆ. ನೀರು ಶುದ್ಧೀಕರಣಗೊಳ್ಳಲು ನಡುವೆ ಫಿಲ್ಟರ್ ವ್ಯವಸ್ಥೆ ಅಳವಡಿಸಲಾಗಿದೆ. ಮಳೆಕೊಯ್ಲು ಅಳವಡಿಕೆ ಮಾಡಿದ ಅನಂತರ ಅವರ ಮನೆಯ ಬಾವಿಯಲ್ಲಿ ಹಿಂದಿನ ಮಳೆಗಾಲಕ್ಕಿಂತ ಹೆಚ್ಚಿನ ನೀರು ಸಂಗ್ರಹವಾಗಿರುವುದನ್ನು ಗಮನಿಸಿದ್ದಾರೆ. “ಉದಯವಾಣಿ’ಯ ಮಳೆಕೊಯ್ಲು ಅಭಿಯಾನ ಪ್ರತಿಯೊಬ್ಬರಿಗೂ ಮಳೆಕೊಯ್ಲು ವ್ಯವಸ್ಥೆ ಮಾಡಲು ಪ್ರೇರಣೆಯಾಗಿದೆ. ಇಬ್ಬರು ಸಂಬಂಧಿಕರೂ ಈ ಅಭಿಯಾನ ನೋಡಿ ಮಳೆಕೊಯ್ಲು ಅಳವಡಿಸಿದ್ದಾರೆ’ ಎನ್ನುತ್ತಾರೆ ಸುಮಂಗಲಾ. ಸರಳ ವಿಧಾನದಲ್ಲಿ ಮಳೆಕೊಯ್ಲು ವ್ಯವಸ್ಥೆಯನ್ನು ಮನೆಯಲ್ಲಿ ಮಾಡಿದ್ದೇವೆ. ಆದರೆ ಇದೀಗ ನೀರು ಹೆಚ್ಚಳವಾಗಿರುವುದನ್ನು ನೋಡಿ ಮನೆಮಂದಿಗೆಲ್ಲ ಖುಷಿಯಾಗುತ್ತಿದೆ. ಭವಿಷ್ಯದಲ್ಲಿ ನೀರಿನ ಸಮಸ್ಯೆ ಬಾರದು ಎಂಬ ವಿಶ್ವಾಸವಿದೆ ಎನ್ನುತ್ತಾರೆ ಅವರು.
ನೀವೂ ಅಳವಡಿಸಿ, ವಾಟ್ಸಪ್ ಮಾಡಿ
ಉದಯವಾಣಿಯ ಅಭಿಯಾನದಿಂದ ಪ್ರೇರಣೆಗೊಂಡು ಕಾರ್ಯಾಗಾರದಲ್ಲಿ ಭಾಗವಹಿಸಿದವರು ಈಗ ಕಾರ್ಯೋನ್ಮುಖರಾಗಿ ಮಳೆ ನೀರು ಕೊಯ್ಲು ಪದ್ಧತಿಯನ್ನು ತಮ್ಮ ಮನೆ, ಸಂಘ- ಸಂಸ್ಥೆ, ಧಾರ್ಮಿಕ ಕೇಂದ್ರಗಳ ಲ್ಲಿ
ಅಳವಡಿಸುತ್ತಿದ್ದಾರೆ. “ಮನೆ ಮನೆಗೆ ಮಳೆಕೊಯ್ಲು’ ಅಭಿಯಾನದಿಂದ ಪ್ರೇರಿತರಾಗಿ ನೀವೂ ನಿಮ್ಮ ಮನೆ, ಮಳೆ ಕೊಯ್ಲು ಪದ್ಧತಿ ಅಳವಡಿಸಿಕೊಂಡಿದ್ದರೆ ಫೋಟೋ ಸಮೇತ ನಮಗೆ ವಿವರವನ್ನು ವಾಟ್ಸಪ್ ಮಾಡಿ. ಅವುಗಳನ್ನು ಪತ್ರಿಕೆಯಲ್ಲಿ ಪ್ರಕಟಿಸಿ ಮತ್ತಷ್ಟು ಜನರನ್ನು ಉತ್ತೇಜಿಸೋಣ. 9900567000
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ