ಕರಾವಳಿಯಲ್ಲಿ ಸಾಧಾರಣ ಮಳೆ
Team Udayavani, Mar 20, 2023, 6:02 AM IST
ಮಂಗಳೂರು/ ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ರವಿವಾರ ಬೆಳಗ್ಗೆ ಸಾಧಾರಣ ಮಳೆಯಾಗಿದೆ.
ಮಂಗಳೂರು ನಗರದ ವಿವಿಧ ಕಡೆಗಳಲ್ಲಿ ಬೆಳಗ್ಗೆ ಸಾಧಾರಣ ಮಳೆ ಸುರಿದಿದೆ. ಪರಿಣಾಮವಾಗಿ ದಿನವಿಡೀ ಉರಿ ಸೆಕೆ ತುಸು ಕಡಿಮೆ ಇತ್ತು. ಉಳಿದಂತೆ ಬಂಟ್ವಾಳ ತಾಲೂಕಿನ ಬಹುತೇಕ ಕಡೆಗಳಲ್ಲಿ ಮಳೆಯಾಗಿದೆ. ಹಲವೆಡೆ ಮೋಡದಿಂದ ಕೂಡಿದ ವಾತಾವರಣ ಇತ್ತು. ಹವಾಮಾನ ಇಲಾಖೆ ಮಾಹಿತಿಯಂತೆ ರವಿವಾರ ಮಂಗಳೂರಿನಲ್ಲಿ 33 ಡಿ.ಸೆ. ಗರಿಷ್ಠ ಮತ್ತು 23.2 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು. ವಾಡಿಕೆಗಿಂತ 1 ಡಿ.ಸೆ. ಕಡಿಮೆ ಇತ್ತು.
ಮಾ. 23, 24ರಂದು ವಿವಿಧ ಕಡೆಗಳಲ್ಲಿ ಮಳೆ ಸುರಿಯುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉಡುಪಿಯಲ್ಲೂ ಮಳೆ
ಉಡುಪಿ: ಉಡುಪಿ ನಗರ ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ರವಿವಾರ ಮುಂಜಾನೆ ಸಾಧಾರಣ ಮಳೆ ಸುರಿದಿದೆ. ಮಧ್ಯಾಹ್ನದ ವರೆಗೆ ಮೋಡ ಕವಿದ ವಾತಾವರಣ ಇತ್ತಾದರೂ ಮಳೆ ಸುರಿಯಲಿಲ್ಲ. ಮಣಿಪಾಲ, ಪರ್ಕಳ, ಬ್ರಹ್ಮಾವರ, ಕೋಟ, ಮಧುವನ, ಶಿರಿಯಾರ, ಕಟಪಾಡಿ ಹಾಗೂ ಉದ್ಯಾವರ ಭಾಗದಲ್ಲಿಯೂ ಬೆಳಗ್ಗಿನ ವೇಳೆ ಮಳೆ ಸುರಿದಿತ್ತು. ಉಳಿದಂತೆ ಹಲವೆಡೆ ಮೋಡ ಕವಿದ ವಾತಾವರಣವಿದ್ದು, ಹನಿಹನಿ ಮಳೆಯಾಗಿತ್ತು.
ಬಂಟ್ವಾಳ: ಸಾಧಾರಣ ಮಳೆ
ಬಂಟ್ವಾಳ: ಬಂಟ್ವಾಳ ತಾಲೂಕಿನ ಬಹುತೇಕ ಕಡೆ ರವಿವಾರ ಮುಂಜಾನೆ ಸಾಧಾರಣ ಮಳೆಯಾಗಿದೆ. ತಾಲೂಕಿನ ಹೆಚ್ಚಿನ ಕಡೆ ಈ ಬೇಸಗೆಯಲ್ಲಿ ಇದೇ ಮೊದಲ ಬಾರಿಗೆ ಮಳೆಯಾಗಿದ್ದು, ಬೆಳ್ಳಂಬೆಳಗ್ಗೆ ಮೋಡ ಕವಿದ ವಾತಾವರಣವಿತ್ತು. ಆದರೆ ಕೆಲವು ಕಡೆ ಒಂದೆರಡು ಹನಿ ಬಿದ್ದು ಮಳೆ ದೂರವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು