ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಡುವು ನೀಡಿದ ಮಳೆ :ಉಡುಪಿ; 39 ಮನೆಗಳಿಗೆ ಹಾನಿ
Team Udayavani, Jul 18, 2022, 1:23 AM IST
ಮಂಗಳೂರು: ಕೆಲವು ದಿನಗಳಿಂದ ಬಿರುಸು ಪಡೆದಿದ್ದ ಮಳೆ ತುಸು ಬಿಡುವು ನೀಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರವಿವಾರ ಬಿಟ್ಟು ಬಿಟ್ಟು ಸಾಧಾರಣ ಮಳೆಯಾಗಿದೆ.
ಮಂಗಳೂರು ನಗರದಲ್ಲಿ ದಿನವಿಡೀ ಆಗಾಗ್ಗೆ ಸಾಧಾರಣ ಮಳೆಯಾಗಿದೆ. ಮಳೆಯ ಜತೆ ಗಾಳಿಯ ಅಬ್ಬರ ಹೆಚ್ಚಿತ್ತು. ಪುತ್ತೂರು, ಉಪ್ಪಿನಂಗಡಿ, ಕಡಬ, ಸುಬ್ರಹ್ಮಣ್ಯ, ಸುಳ್ಯ, ಕಲ್ಮಕಾರು, ಬೆಳ್ತಂಗಡಿ, ಧರ್ಮಸ್ಥಳ, ನಾರಾವಿ, ಮಡಂತ್ಯಾರು, ಬಂಟ್ವಾಳ, ಕನ್ಯಾನ, ಸುರತ್ಕಲ್, ಉಳ್ಳಾಲ, ಮೂಡುಬಿದಿರೆ ಸೇರಿದಂತೆ ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದೆ.
ಚಾರ್ಮಾಡಿ ಘಾಟಿ: ಸಂಚಾರ ದಟ್ಟಣೆ
ಬೆಳ್ತಂಗಡಿ: ಶಿರಾಡಿ ಘಾಟಿಯಲ್ಲಿ ಸಂಚಾರ ತಡೆಹಿಡಿದಿದ್ದರಿಂದ ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಹೆಚ್ಚಿವೆ. ಕಳೆದ ಎರಡು ದಿನಗಳಲ್ಲಿ ಅಪಘಾತಗಳೂ ಹೆಚ್ಚಾಗಿವೆ. ನಿರಂತರ ಮಳೆಯಿಂದ ಚಾರ್ಮಾಡಿ ತಿರುವು ರಸ್ತೆಗಳು ಬಹಳಷ್ಟು ನಯವಾದ ಪರಿಣಾಮ ಬ್ರೇಕ್ ಸಿಗದೆ ಅಪಘಾತ ಸಂಭವಿಸುತ್ತಿವೆ. ಸವಾರರು ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಸಂಚಾರಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜು. 18 ಮತ್ತು 19ರಂದು ಕರಾವಳಿ ಭಾಗದಲ್ಲಿ ಉತ್ತಮ ಮಳೆ ಸುರಿಯುವ ನಿರೀಕ್ಷೆ ಇದ್ದು, ಎಲ್ಲೋ ಅಲರ್ಟ್ ಘೋಷಿಸಿದೆ. ಈ ವೇಳೆ ಗಾಳಿ-ಮಳೆ ಇರಲಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರವೂ ಹೆಚ್ಚು ಇರುವ ನಿರೀಕ್ಷೆ ಇದೆ.
ಉಡುಪಿ ಜಿಲ್ಲೆಯಲ್ಲಿ 39 ಮನೆಗಳಿಗೆ ಹಾನಿ
ಉಡುಪಿ: ಜಿಲ್ಲೆಯಲ್ಲಿ ಮಳೆ ಮತ್ತೆ ಚುರುಕು ಪಡೆದಿದ್ದು, ಶನಿವಾರ ತಡರಾತ್ರಿ ಹಾಗೂ ರವಿವಾರ ಬಿಟ್ಟುಬಿಟ್ಟು ಉತ್ತಮ ಮಳೆ ಸುರಿದಿದೆ. ಗಾಳಿ, ಮಳೆಯಿಂದಾಗಿ ಒಟ್ಟು 39 ಮನೆಗಳಿಗೆ ಹಾನಿ ಸಂಭವಿಸಿದೆ. ಕುಂದಾಪುರ ಭಾಗದಲ್ಲಿ ಅತೀ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.
ಬೈಂದೂರು, ಸಿದ್ದಾಪುರ, ಬ್ರಹ್ಮಾವರ, ಕಾಪು, ಉಡುಪಿ, ಹೆಬ್ರಿ, ಅಜೆಕಾರು, ಕಾರ್ಕಳ, ಪಡುಬಿದ್ರಿ, ಪೆರ್ಡೂರು ಸುತ್ತಮುತ್ತ ಬಿಟ್ಟುಬಿಟ್ಟು ವ್ಯಾಪಕ ಮಳೆಯಾಗಿದೆ. ಕಳೆದ ಕೆಲವು ದಿನಗಳಿಂದ ಮಳೆ ಪ್ರಮಾಣ ಕಡಿಮೆ ಇರುವ ಹಿನ್ನೆಲೆಯಲ್ಲಿ ತಗ್ಗು ಮತ್ತು ಕೃಷಿ ಭೂಮಿಯಲ್ಲಿ ತಗ್ಗಿದ್ದ ನೆರೆ ನೀರಿನ ಪ್ರಮಾಣ ಮತ್ತೆ ಏರಿಕೆಯಾಗುವ ಸಾಧ್ಯತೆ ಇದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ನಿರ್ಮಾಣವಾಗದ ಪರಿಣಾಮ ಮಳೆ ನೀರಿನ ಅವಾಂತರ ಮುಂದುವರಿದಿದ್ದು, ಬ್ರಹ್ಮಾವರ, ಕಾಪು, ಉಡುಪಿ ಕರಾವಳಿ ಬೈಪಾಸ್ ಬಳಿ ವಾಹನಗಳ ಸುಗಮ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ.
ಬ್ರಹ್ಮಾವರ ತಾಲೂಕಿನಲ್ಲಿ 3, ಕಾಪು 4, ಬೈಂದೂರು 5, ಕಾರ್ಕಳ 1, ಕುಂದಾಪುರ 26 ಮನೆಗಳಿಗೆ ಹಾನಿ ಸಂಭವಿಸಿದೆ.
ಉಡುಪಿ 66.3, ಬ್ರಹ್ಮಾವರ 57.4, ಕಾಪು 116.8, ಕುಂದಾಪುರ 70.8, ಬೈಂದೂರು 109.2, ಕಾರ್ಕಳ 119.7, ಹೆಬ್ರಿ 116.8 ಮಿ. ಮೀ ಮಳೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 96.14 ಮಿ. ಮೀ. ಸರಾಸರಿ ಮಳೆ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?