ಹವಾಮಾನ ಮಾಪಕ ಅಂತೂ ಸ್ಥಳಾಂತರ
Team Udayavani, May 18, 2018, 8:20 AM IST
ಉಪ್ಪಿನಂಗಡಿ: ನಿರ್ಲಕ್ಷ್ಯಕ್ಕೆ ತುತ್ತಾಗಿ ಅತಂತ್ರವಾಗಿದ್ದ ಹವಾಮಾನ ಮಾಪಕದ ಬಗ್ಗೆ ‘ಸುದಿನ’ದಲ್ಲಿ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ಜಲಾನಯನ ಇಲಾಖೆಯು ಉಪಕರಣವನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಿದೆ. ಹಲವು ವರ್ಷಗಳಿಂದ ಉಪ್ಪಿನಂಗಡಿಯ ಸರಕಾರಿ ಆಸ್ಪತ್ರೆ ವಠಾರದಲ್ಲಿ ಅಳವಡಿಸಲಾದ ಮಳೆ ಮಾಪಕ ಹಾಗೂ ಹವಾಮಾನ ಮಾಪಕಗಳನ್ನು ಆಸ್ಪತ್ರೆ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿ ಕಟ್ಟಡ ಕಾಮಗಾರಿ ನಡೆದಾಗ ಸ್ಥಳಾಂತರಿಸುವ ಅನಿವಾರ್ಯತೆ ಮೂಡಿತ್ತು. ಆದರೆ ಮಳೆ ಮಾಪಕವನ್ನು ಸ್ಥಳಾಂತರಿಸಲು ಇಲಾಖೆ ನಿರ್ಲಕ್ಷ್ಯ ತೋರಿದಾಗ ಪತ್ರಿಕೆ ಸಚಿತ್ರ ವರದಿ ಪ್ರಕಟಿಸಿ, ಇಲಾಖೆಯ ಗಮನ ಸೆಳೆದಿತ್ತು.
ವರದಿಗೆ ಸ್ಪಂದಿಸಿದ ಇಲಾಖೆ, ಮಳೆ ಮಾಪಕವನ್ನು ಮಾತ್ರ ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯ ಕಂದಾಯ ಇಲಾಖೆ ನಿವೇಶನಕ್ಕೆ ಸ್ಥಳಾಂತರಿಸಿತ್ತು. ಆದರೆ ಹವಾಮಾನ ಹಾಗೂ ವಾಯುಭಾರ ಮಾಪಕದ ಸಾಧನಗಳೆಲ್ಲವೂ ಆಸ್ಪತ್ರೆಯ ಆವರಣದಲ್ಲಿ ಅತಂತ್ರವಾಗಿ ಉಳಿದಿದ್ದವು. ಇದು ಗುಜರಿ ಹೆಕ್ಕುವವರ ಕೈವಶವಾಗುವ ಸಾಧ್ಯತೆಯನ್ನು ಮನಗಂಡು ಪತ್ರಿಕೆಯಲ್ಲಿ ವರದಿ ಪ್ರಕಟಿಸಲಾಗಿತ್ತು. ಇದರಿಂದ ಎಚ್ಚೆತ್ತ ಜಲಾನಯನ ಇಲಾಖೆ, ನಿರ್ಲಕ್ಷ್ಯಕ್ಕೆ ತುತ್ತಾಗಿದ್ದ ಹವಾಮಾನ ಹಾಗೂ ವಾಯುಭಾರ ಮಾಪಕವನ್ನು ಉಪ್ಪಿನಂಗಡಿ ಬಸ್ ನಿಲ್ದಾಣ ಪರಿಸರದ ಮಳೆ ಮಾಪಕ ಕೇಂದ್ರಕ್ಕೆ ಸ್ಥಳಾಂತರಿಸಿ, ಮಾಪಕ ಸದ್ಬಳಕೆಯಾಗುವಂತೆ ನೋಡಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್