ಮಳೆಹಾನಿ: ಶಾಸಕ ಭರತ್ ಶೆಟ್ಟಿ ಭೇಟಿ, ನೆರವು
Team Udayavani, May 31, 2018, 10:57 AM IST
ಸುರತ್ಕಲ್: ಮಂಗಳವಾರ ಸುರಿದ ಭಾರೀ ಮಳೆಯಿಂದಾಗಿ ಸುರತ್ಕಲ್ ಹೊಸ ಮಾರುಕಟ್ಟೆ ಕಾಮಗಾರಿ ನಡೆಯುವ ಸ್ಥಳ ಕೆರೆಯಂತಾದರೆ, ಸುರತ್ಕಲ್ ಬಂಟರ ಭವನದ ಹಿಂದಿನ ತೋಡು ತುಂಬಿ ಹರಿದು ಸುತ್ತಮುತ್ತಲಿನ ಮನೆಗಳು ಮುಳುಗಡೆಯಾಗಿದ್ದವು. ಅಗರಮೇಲು, ಚೊಕ್ಕಬೆಟ್ಟು, 7ನೇ ಬ್ಲಾಕ್ ಕೃಷ್ಣಾಪುರದಲ್ಲಿ ವರುಣಾಭರದಿಂದ ವಸತಿ ಬಡಾವಣೆಗಳು ಭಾಗಶಃ ಮುಳುಗಡೆಯಾಗಿ ಜನತೆ ತೀವ್ರ ಸಂಕಷ್ಟ ಅನುಭವಿಸಬೇಕಾಯಿತು.
ಮಂಗಳವಾರ ಮುಂಜಾನೆಯೇ ಕೃತಕ ನೆರೆಯ ಮುನ್ಸೂಚನೆ ಪಡೆದ ಡಾ| ವೈ. ಭರತ್ ಶೆಟ್ಟಿ ಅವರು ಭೇಟಿ ನೀಡಿ ಅಧಿಕಾರಿಗಳು, ಸ್ಥಳೀಯರೊಂದಿಗೆ ಪರಿಶೀಲನೆ ನಡೆಸಿದ್ದರು. ನಾರಾಯಣ ಗುರು ಶಾಲೆ ಕುಸಿದ ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳ ಮಾಹಿತಿ ಪಡೆದರು. ಶಾಲೆಯ ಪುನರ್ ನಿರ್ಮಾಣ, ಮನೆ ಕುಸಿತ ಸಹಿತ ವಿವಿಧ ಪ್ರಕೃತಿ ವಿಕೋಪದ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು ಮರು ನಿರ್ಮಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ದೂರವಾಣಿ ಮೂಲಕ ಸಹಾಯ ಅರಸಿ ಬಂದ ಕಡೆಗೆ ಧಾವಿಸಿ ನೆರವು ನೀಡಿದರು.
ಕಾರ್ಯಕರ್ತರು, ಸ್ಥಳೀಯರೊಂದಿಗೆ ಜಡಿ ಮಳೆಯನ್ನೂ ಲೆಕ್ಕಿಸದೆ ಸಂತ್ರಸ್ತರ ರಕ್ಷಣೆಯಲ್ಲಿ ತಾನೂ ಕೈಜೋಡಿಸಿ ಶ್ಲಾಘನೆಗೆ ಪಾತ್ರರಾದರು. ಬಿಜೆಪಿಯ ಕಾರ್ಪೊರೇಟರ್, ಪದಾಧಿಕಾರಿಗಳು, ಕಾರ್ಯಕರ್ತರು ಜತೆಗಿದ್ದರು.
ಪಂಜಿಮೊಗರು: ಮನೆ ಕುಸಿದ ಸ್ಥಳಕ್ಕೆ ಭೇಟಿ
ಪಣಂಬೂರು: ಪಂಜಿಮೊಗರುವಿನಲ್ಲಿ ಮಂಗಳವಾರ ಮನೆ ಕುಸಿದು ಮೂವರಿಗೆ ಗಾಯವಾಗಿದ್ದು, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಡಾ| ವೈ. ಭರತ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮನೆಯವರೊಂದಿಗೆ ಮಾತುಕತೆ ನಡೆಸಿದ ಅವರು ಪರಿಹಾರ ಒದಗಿಸುವ ಭರವಸೆ ನೀಡಿದರು. ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಂಡರೂ ಪಾಲಿಕೆಯ ಎಡವಟ್ಟಿನಿಂದ ಕೃತಕ ನೆರೆ ಹಾವಳಿ ಉಂಟಾಗಿದೆ. ಇದನ್ನು ಅಧಿ ಕಾರಿಗಳೇ ಸರಿಪಡಿಸಬೇಕು ಎಂದು ತಾಕೀತು ಮಾಡಿದರು.
ಶಾಸಕ ಭರತ್ ಶೆಟ್ಟಿ ಮಾತನಾಡಿ, ಪಾಲಿಕೆ ವೈಫಲ್ಯದಿಂದ ಸಮಸ್ಯೆ ಗಂಭೀರವಾಯಿತು. ರಾಜ್ಯ ಸರಕಾರ ವಿಶೇಷ ತಂಡ ಕಳಿಸಿ ನಷ್ಟವನ್ನು ಕೂಡಲೇ ಬಿಡುಗಡೆ ಮಾಡಬೇಕು. ರಸ್ತೆ, ಸೇತುವೆ, ಮನೆ, ಶಾಲೆಗಳಿಗೆ ಹಾನಿಯಾಗಿದೆ. ಮಂಗಳೂರು ಉತ್ತರ ಕ್ಷೇತ್ರದ ಪ್ರತೀ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಪರಿಹಾರ ನೀಡುವ ಕುರಿತಂತೆ ಅಧಿಕಾರಿಗಳಲ್ಲಿ ಮಾತುಕತೆ ನಡೆಸಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್