Rain ; ಮುಂಗಾರು ಮುನ್ನೆಚ್ಚರ: ಮೆಸ್ಕಾಂ ಸೂಚನೆ

ತುಂಡಾದ, ಇನ್ಸುಲೇಷನ್‌ ಇಲ್ಲದ ವಿದ್ಯುತ್‌ ತಂತಿಗಳನ್ನು ಮುಟ್ಟಬೇಡಿ!

Team Udayavani, May 24, 2024, 6:28 AM IST

current

ಮಂಗಳೂರು: ಜನರು ಸ್ವತಃ ವಿದ್ಯುತ್‌ ಸಂಪರ್ಕದ ದುರಸ್ತಿ ಕಾರ್ಯ ನಡೆಸುವುದು, ವಿದ್ಯುತ್‌ ಕಂಬಗಳಿಗೆ ಹತ್ತಿ ದುರಸ್ತಿ ನಡೆಸುವುದು, ಬಳಕೆ ಸಂದರ್ಭದಲ್ಲಿ ನಿರ್ಲಕ್ಷé ಮುಂತಾದವುಗಳಿಂದ ಅವಘಡ ಗಳಾಗುತ್ತಿವೆ. ಆದ್ದರಿಂದ ಬಳಕೆದಾರರು ವಿದ್ಯುತ್‌ ಬಗ್ಗೆ ನಿರ್ಲಕ್ಷé ತೋರದೆ ಮುನ್ನಚ್ಚರಿಕೆ ಹಾಗೂ ಸುರಕ್ಷಾ ಕ್ರಮಗಳನ್ನು ಪಾಲಿಸುವಂತೆ ಮೆಸ್ಕಾಂ ತಿಳಿಸಿದೆ.

ತುಂಡಾದ ಅಥವಾ ಇನ್ಸುಲೇಷನ್‌ ಇಲ್ಲದ ವಿದ್ಯುತ್‌ ತಂತಿಗಳನ್ನು ಮುಟ್ಟ ಬಾರದು. ವಿದ್ಯುತ್‌ ಕಂಬಗಳನ್ನು ಹತ್ತ ಬಾರದು ಮತ್ತು ದುರಸ್ತಿ ಮಾಡುವುದು ಅಪಾಯಕಾರಿ. ವಿದ್ಯುತ್‌ ಉಪಕರಣಗಳನ್ನು ಪರಿಣಿತರಿಂದ ದುರಸ್ತಿಗೊಳಿಸಬೇಕು. ಸ್ವಿಚ್‌ ಹಾಗೂ ಉಪಕರಣಗಳನ್ನು ಒದ್ದೆ ಕೈಗಳಿಂದ ಮುಟ್ಟಬಾರದು. ವಿದ್ಯುತ್‌ ತಂತಿಗಳ ಮೇಲೆ ಬಿದ್ದಿರುವ ಮರದ ರೆಂಬೆಗಳನ್ನು ತೆಗೆಯಲು ಪ್ರಯತ್ನಿಸಬಾರದು. ಇಂತಹ ಸಂದರ್ಭದಲ್ಲಿ ಕೂಡಲೇ ಸ್ಥಳೀಯ ಮೆಸ್ಕಾಂ ಕಚೇರಿಗೆ ಅಥವಾ ಮೆಸ್ಕಾಂ ಲೈನ್‌ಮ್ಯಾನ್‌ಗಳಿಗೆ ತಿಳಿಸಬೇಕು.

ವಿದ್ಯುತ್‌ ತಂತಿಗಳ ಸಮೀಪ ಆಟ ಆಡಬಾರದು. ವಿದ್ಯುತ್‌ ತಂತಿಗಳ ಸನಿಹದಲ್ಲಿ ಬಟ್ಟೆಗಳನ್ನು ಒಣಗಲು ಹಾಕಬಾರದು ಮತ್ತು ಟ್ರಾನ್ಸ್‌ಫಾರ್ಮರ್‌ಗಳ ಸುತ್ತಲಿನ ತಂತಿ ಬೇಲಿ ಮುಟ್ಟಬಾರದು. ಒಂದೇ ಸಕೀìಟ್‌ಗೆ ಹಲವಾರು ಉಪಕರಣಗಳನ್ನು ಜೋಡಿಸ ಬಾರದು. ಸ್ವಿಚ್‌ ಬೋರ್ಡ್‌ ಗಳು ಮಕ್ಕಳ ಕೈಗೆ ಸಿಗದಂತೆ ಎಚ್ಚರ ವಹಿಸಬೇಕು. ಎಲೆಕ್ಟ್ರಿಕಲ್‌ ಉಪಕರಣಗಳ/ಸಾಕೆಟ್‌ಗಳ ಹತ್ತಿರ ಸುಲಭವಾಗಿ ಬೆಂಕಿ ಹತ್ತಿಕೊಳ್ಳುವಂತಹ ಸಾಮಗ್ರಿಗಳನ್ನು ಇಡಬಾರದು. ನೀರು ಕಾಯಿಸಲು ತೆರೆದ ಕಾಯ್ಲ ಬಳಸಬಾರದು.

ವಿದ್ಯುತ್‌ ಲೈನ್‌ಗಳ ಕೆಳಗೆ ಸರಕು ಸಾಗಾಣಿಕೆ ಸಮಯದಲ್ಲಿ ಸೂಕ್ತ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಕಟ್ಟಡ ಕಾಮಗಾರಿಯ ವೇಳೆಯಲ್ಲಿ ಕಬ್ಬಿಣದ ಸರಳುಗಳನ್ನು ಸಾಗಿಸುವಾಗ ವಿದ್ಯುತ್‌ ಲೈನ್‌ಗೆ ತಾಗದಂತೆ ಎಚ್ಚರ ವಹಿಸಬೇಕು. ತಂತಿ ಬೇಲಿಗಳಿಗೆ ವಿದ್ಯುತ್‌ ಹಾಯಿಸಬಾರದು.

ಅನಧಿಕೃತವಾಗಿ ವಿದ್ಯುತ್‌ ಸಂಪರ್ಕ ಪಡೆಯಬಾರದು. ವಿದ್ಯುತ್‌ ಮಾರ್ಗದ ಕೆಳಗೆ ಅಥವಾ ಪಕ್ಕದಲ್ಲಿರುವ ಕೊಳವೆ ಬಾವಿ ದುರಸ್ತಿ ಕೆಲಸವನ್ನು ಮಾಡುವ ಮುನ್ನ ಮಸ್ಕಾಂ ಕಚೇರಿಗೆ ತಿಳಿಸಬೇಕು. ಐಎಸ್‌ಐ ಗುರುತನ್ನು ಹೊಂದಿರುವ ವಿದ್ಯುತ್‌ ಉಪಕರಣಗಳನ್ನು ಬಳಸಬೇಕು. ಕಟ್ಟಡ ನಿರ್ಮಾಣ ಮಾಡುವ ನಿಯಮಗಳ ಪ್ರಕಾರ ವಿದ್ಯುತ್‌ ಮಾರ್ಗ ಹಾಗೂ ಕಟ್ಟಡದ ನಡುವೆ ಅಂತರವನ್ನು ಕಾಯ್ದುಕೊಳ್ಳಬೇಕು. 3ನೇ ಪಿನ್‌ ಅರ್ಥಿಂಗ್‌ ಆಗಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ಅಲ್ಯುಮಿನಿಯಂ ಏಣಿಗಳನ್ನು ಹಾಗೂ ಕೋಲುಗಳನ್ನು ಬಳಸುವಾಗ ಮುಂಜಾಗ್ರತೆ ಕ್ರಮಗಳನ್ನು ಅನುಸರಿಸಬೇಕು.

ವಿದ್ಯುತ್‌ ಸಂಬಂಧಿತ ದೂರು ಮತ್ತು ಸಹಾಯಕ್ಕಾಗಿ ಉಚಿತ ದೂರವಾಣಿ ಸಂಖ್ಯೆ 1912ಕ್ಕೆ ಕರೆ ಮಾಡಬಹುದು ಎಂದು ಮೆಸ್ಕಾಂ ತಿಳಿಸಿದೆ.

ಟಾಪ್ ನ್ಯೂಸ್

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Amit Shah

Jammu ಪ್ರದೇಶ ಪ್ರಾಬಲ್ಯ ಶೂನ್ಯ-ಉಗ್ರ ಯೋಜನೆ ಜಾರಿಗೆ ತರಲು ಶಾ ಆದೇಶ

1-asasasa

Darshan; ರೇಣುಕಾಸ್ವಾಮಿ ಕೇಸ್: ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್

15

Road mishap: ಕುಂಬ್ರ ಸಮೀಪದ ಶೇಖಮಲೆ ಬಳಿ ಕಾರುಗಳ ನಡುವೆ ಢಿಕ್ಕಿ; ಇಬ್ಬರು ಸಾವು

1-sasdsa-d

ST ಗೆ ಕೋಳಿ ಬೆಸ್ತ ಸಮಾಜ ಸೇರಿಸಲು ಸಂಸತ್ತಿನಲ್ಲಿ ಧ್ವನಿ ಎತ್ತುತ್ತೇನೆ: ಸಂಸದೆ ಪ್ರಿಯಂಕಾ

Road Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯುRoad Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

Road Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-bantwala

Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

ಕಡಲಿಗಿಳಿಯುವ ನಾಡದೋಣಿಗಳಿಗೆ ಎನ್‌ಎಂಪಿಎ “ಆಶ್ರಯ’!

ಕಡಲಿಗಿಳಿಯುವ ನಾಡದೋಣಿಗಳಿಗೆ ಎನ್‌ಎಂಪಿಎ “ಆಶ್ರಯ’!

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Amit Shah

Jammu ಪ್ರದೇಶ ಪ್ರಾಬಲ್ಯ ಶೂನ್ಯ-ಉಗ್ರ ಯೋಜನೆ ಜಾರಿಗೆ ತರಲು ಶಾ ಆದೇಶ

ದಾಂಡೇಲಿಯ ಟೌನಶಿಪ್’ನ ಮನೆಯೊಂದರಲ್ಲಿ ಕಳ್ಳತನದಾಂಡೇಲಿಯ ಟೌನಶಿಪ್’ನ ಮನೆಯೊಂದರಲ್ಲಿ ಕಳ್ಳತನ

Theft Case ದಾಂಡೇಲಿಯ ಟೌನ್ ಶಿಪ್’ನ ಮನೆಯೊಂದರಲ್ಲಿ ಕಳ್ಳತನ

Dandeli ಜಾನುವಾರು ಅಕ್ರಮ ಸಾಗಾಟ: ವಾಹನ ಸಹಿತ ಜಾನುವಾರು ವಶ

Dandeli ಜಾನುವಾರು ಅಕ್ರಮ ಸಾಗಾಟ: ಪೊಲೀಸರಿಂದ ವಾಹನ, ಜಾನುವಾರು ವಶಕ್ಕೆ

1-asasasa

Darshan; ರೇಣುಕಾಸ್ವಾಮಿ ಕೇಸ್: ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.