ಅಪಾಯ ಮಟ್ಟ ಮೀರಿದ ನೇತ್ರಾವತಿ-ಕುಮಾರಧಾರೆ
ಮಳೆಗೆ ತತ್ತರಿಸಿದ ದಕ್ಷಿಣ ಕನ್ನಡ ಜಿಲ್ಲೆ
Team Udayavani, Aug 10, 2019, 5:00 AM IST
ಮಂಗಳೂರು/ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ವರುಣನ ಆರ್ಭಟ ಜೋರಾಗಿದ್ದು, ನೇತ್ರಾವತಿ, ಕುಮಾರಧಾರೆ ಸೇರಿ ದಂತೆ ಬಹುತೇಕ ಎಲ್ಲ ನದಿ ಗಳು ಅಪಾಯದ ಮಟ್ಟ ಮೀರಿವೆ. ನದಿ ತೀರದ ಬಹಳಷ್ಟು ಕಡೆಗಳ ಮನೆಗಳು ಸಂಪೂರ್ಣ ಜಲಾವೃತಗೊಂಡಿವೆ.
ಶುಕ್ರವಾರ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಎರಡೂ ನದಿ ಸಂಗಮವಾಗಿದೆ. ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿರುವುದರಿಂದ ಪಾಣೆ ಮಂಗಳೂರು ಪೇಟೆ, ಆಲಡ್ಕ ಸೇರಿ ದಂತೆ ಹಲವು ಕಡೆ ಮನೆಗಳು ಜಲಾವೃತವಾಗಿದ್ದು, ರಾತ್ರಿಯೂ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ಇನ್ನಷ್ಟು ಜನವಾಸ ಪ್ರದೇಶಗಳಿಗೆ ನೀರು ನುಗ್ಗುವ ಅಪಾಯವಿದೆ.
ನೇತ್ರಾವತಿ ನದಿ ತೀರದಲ್ಲಿ ವಾಸಿಸುತ್ತಿರುವ ಎಲ್ಲ ನಾಗರಿಕರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ನದಿ ತೀರದ ಪ್ರಮುಖ ಸಂಭಾವ್ಯ ಅಪಾಯ ಸ್ಥಳಗಳಲ್ಲಿ ಅಧಿಕಾರಿಗಳು ಇದ್ದು ಯಾವುದೇ ಪರಿಸ್ಥಿತ ಎದುರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ.
ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಿಂದ ಚಾರ್ಮಾಡಿ ಮುಖೇನ ತೆರಳುವ ಬಸ್ಗಳು ಕೊಕ್ಕಡ, ಗುಂಡ್ಯ ಶಿರಾಡಿ ಘಾಟಿ ಮುಖೇನ ಬೆಂಗಳೂರಿಗೆ ಸಂಚರಿಸಿದವು. ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಿಂದ ಮುಂಬಯಿ, ಕೊಲ್ಲಾಪುರ, ಪುಣೆ ಸಂಚಾರ ರದ್ದು ಗೊಂಡಿದೆ. ಅಂಕೋಲಾ, ಯಲ್ಲಾಪುರ ಕಡೆ ತೆರಳುವ ಬಸ್ ಸಂಚಾರವೂ ಮೊಟಕುಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!