ಎ.1ರಿಂದ ಮಳೆ ನೀರು ಕೊಯ್ಲು ಕಡ್ಡಾಯ 


Team Udayavani, Mar 21, 2017, 5:12 PM IST

male-koylu.jpg

ಮಹಾನಗರ: ಎಪ್ರಿಲ್‌ 1ರಿಂದಲೇ ಜಿಲ್ಲಾದ್ಯಂತ ಮಳೆ ಕೊಯ್ಲು ಯೋಜನೆಯನ್ನು ಕಡ್ಡಾಯ ಗೊಳಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌, ಮುಂಬರುವ ಮಳೆಗಾಲವನ್ನು ಸಮೃದ್ಧವಾಗಿ ಹಿಡಿದಿಟ್ಟು ಕೊಳ್ಳಲು ಮುಂದಾಗಿದೆ.

ಅಂತರ್ಜಲ ಮಟ್ಟ ಹೆಚ್ಚಿಸುವಲ್ಲಿ ಹಾಗೂ ಮುಂಬ ರುವ ದಿನದಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ. ಜಿಲ್ಲೆ ಯಲ್ಲಿ ಇಂಗುಗುಂಡಿಗಳ ರಚನೆ ಹಾಗೂ ತೆರೆದ ಬಾವಿಗೆ ಜಲ ಮರುಪೂರಣ ಯೋಜನೆಯನ್ನು ನರೇಗಾ ಯೋಜನೆಯಡಿ ಕೈಗೊಳ್ಳಲು ಸಿದ್ಧತೆ ನಡೆದಿದೆ.

ಎರಡು-ಮೂರು ತಿಂಗಳೊಳಗೆ ಸುರಿಯುವ ಮಳೆಯ ನೀರನ್ನು ಪೋಲಾಗದಂತೆ ಸಂಗ್ರಹಿಸಿಡಲು ಮಳೆನೀರು ಕೊಯ್ಲು ಜಾರಿ ತರಲಾಗುತ್ತಿದೆ. ಇದ ರೊಂದಿಗೆ ಅಂತರ್ಜಲ ಹೆಚ್ಚಳ ಮಾಡುವ ಈ ಯೋಜನೆ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಜಾರಿಗೆ ಬರಲಿದೆ. 

ಮೊದಲ ಹಂತದಲ್ಲಿ ಜಿಲ್ಲೆಯ ಎಲ್ಲಾ ಸರಕಾರಿ ಶಾಲೆಗಳು, ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾ.ಪಂ./ಪೊಲೀಸ್‌ ಠಾಣೆಗಳಲ್ಲಿ ಕಡ್ಡಾಯವಾಗಿ ಮಳೆನೀರು ಕೊಯ್ಲು ಯೋಜನೆ ಅನುಷ್ಠಾನ‌ಗೊಳಿಸುವಂತೆ ಜಿ.ಪಂ. ಎಲ್ಲ ಗ್ರಾ.ಪಂಗಳಿಗೆ ಶೀಘ್ರವೇ ಸೂಚಿಸಲಿದೆ.

ಬೊಟ್ಟು ಮಾಡಿದರೆ ಆಗದು..
ಮಳೆ ನೀರನ್ನು ಹಿಡಿದಿಟ್ಟುಕೊಳ್ಳುವ ನಿಟ್ಟಿನಲ್ಲಿ ಸರಕಾರ /ಆಡಳಿತ ವ್ಯವಸ್ಥೆಗಳು ಯಾವುದೇ ನಿಯಮ/ಕಾನೂನು ಜಾರಿಗೊಳಿಸಿದರೂ ಸಾರ್ವಜನಿಕರ ಸಹಭಾಗಿತ್ವ ಅವಶ್ಯ. ಸರಕಾರವೇ ಎಲ್ಲಾ ಪರಿಹಾರವನ್ನು ಒದಗಿಸಬೇಕೆಂದು ಕುಳಿತುಕೊಳ್ಳುವಂತಿಲ್ಲ. ಪ್ರತೀ ವ್ಯಕ್ತಿ, ಖಾಸಗಿ ಸಂಸ್ಥೆಗಳು ನೀರಿನ ಸಮರ್ಪಕ ಸಂಗ್ರಹ ಮತ್ತು ಬಳಕೆಯತ್ತ ಗಮನಹರಿಸಬೇಕಿದೆ ಎನ್ನುತ್ತಾರೆ ಪರಿಣ ತರು. ಅದರಲ್ಲೂ ಕಟ್ಟಡ ನಿರ್ಮಾಣಗಾರರು, ವಸತಿ ಸಂಕೀರ್ಣ ನಿರ್ಮಿಸುವವರು ಮಳೆ ನೀರು ಸಂಗ್ರಹ ವ್ಯವಸ್ಥೆಯನ್ನು ತಮ್ಮ-ತಮ್ಮ ಕಟ್ಟಡಗಳಲ್ಲಿ ಕಡ್ಡಾಯವಾಗಿ ಅಳವಡಿಸಬೇಕಾಗಿದೆ.

ಮನೆ ನಂಬರ್‌ ಸಿಗಬೇಕಾದರೆ ಮಳೆಕೊಯ್ಲು ಕಡ್ಡಾಯ
ಜಿ.ಪಂ. ವ್ಯಾಪ್ತಿಯಲ್ಲಿ 2,000 ಚದರ ಅಡಿಗಳಿಗಿಂತ ಹೆಚ್ಚಿನ ವಿಸ್ತೀರ್ಣದ ಮನೆ/ಕಟ್ಟಡ ನಿರ್ಮಿಸುವಾಗ ಮಳೆ ನೀರು ಕೊಯ್ಲು ಹಾಗೂ ಶೌಚಾಲಯ ಕಡ್ಡಾಯವಾಗಿ ಮಾಡಲೇಬೇಕು ಎಂಬ ನಿಯಮವಿದೆ. 

ಮನೆ ನಂಬರ್‌/ ಕಟ್ಟಡ ಸಂಖ್ಯೆ ನೀಡುವ ಸಂದರ್ಭದಲ್ಲಿ ಇದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂಬ ನಡಾವಳಿಯನ್ನು ಕಳೆದ ವರ್ಷ ಜಿ.ಪಂ. ಕೈಗೊಂಡಿತ್ತು. ಪ್ರಸಕ್ತ ಇದು ಕೆಲವು ಗ್ರಾ.ಪಂ.ನಲ್ಲಿ ಮಾತ್ರ ಅನುಷ್ಠಾನವಾಗುತ್ತಿದ್ದು, ಬಹುತೇಕರು ಇದರ ಬಗ್ಗೆ ಕಾಳಜಿ ವಹಿಸಿದಂತಿಲ್ಲ.

ಕೊಯ್ಲು-ಮಾಡುವುದು ಹೇಗೆ?
ಮಳೆ ಬರುವ ಮೊದಲು, ಅಂದರೆ ಈಗಲೇ ಮಳೆಕೊಯ್ಲು ವ್ಯವಸ್ಥೆಯನ್ನು ಅಳವಡಿಸಿದರೆ ಸುಲಭ. ಇದಕ್ಕಾಗಿ ಸರಕಾರ/ಪಾಲಿಕೆಯನ್ನು ಕಾಯಬೇಕಾಗಿಲ್ಲ. ಮನೆ-ಕಟ್ಟಡದಲ್ಲಿ ಮಳೆ ನೀರು ಕೊಯ್ಲು ಯೋಜನೆ ಅಳವಡಿಸಿಕೊಳ್ಳುವುದು ಭಾರೀ ಕಷ್ಟವಲ್ಲ. ಹೆಚ್ಚು ಖರ್ಚೂ ಇಲ್ಲ. ಮನೆ/ಕಟ್ಟಡದ ಛಾವಣಿ ಅಥವಾ ತಾರಸಿ, ಕಿಟಕಿ, ಬಾಗಿ ಲಿನ ಸಜ್ಜಾದ ಮೇಲೆ ಬೀಳುವ ಮಳೆ ನೀರು ಎಲ್ಲಿಯೂ ಸೋರಿ ಹೋಗದಂತೆ ಮೊದಲು ವ್ಯವಸ್ಥೆ ಮಾಡಬೇಕು. ಬಳಿಕ ಈ ಎಲ್ಲಾ ನೀರೂ ಕೊಳವೆ ಗಳ ಮೂಲಕ ಒಂದೆಡೆ ಸಂಗ್ರಹವಾಗುವಂತೆ ಮಾಡಬೇಕು. ನೀರು ಸಂಗ್ರಹ ಗೊಳ್ಳುವ ಜಾಗವನ್ನು ಸೂಕ್ತ ರೀತಿ ವ್ಯವಸ್ಥೆ ಮಾಡಿಕೊಳ್ಳಬೇಕು. ಮನೆಯ ಅಂಗಳದಲ್ಲಿ ಒಂದು ದೊಡ್ಡ ತೊಟ್ಟಿ ನಿರ್ಮಿಸಿ ಅದರಲ್ಲಿ ಮಳೆ ನೀರು ನೇರವಾಗಿ ಸಂಗ್ರಹವಾಗುವಂತೆ ಮಾಡಬಹುದು. (ನೀರು ಬಳಕೆಗೂ ಮೊದಲು ಶೋಧಿಸುವ ವ್ಯವಸ್ಥೆ ಮಾಡಬೇಕು).

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.