ಅಂತರ್ಜಲ ವೃದ್ಧಿಗೆ ಮನೆಗಳಲ್ಲಿ ಮಳೆಕೊಯ್ಲು ಅಳವಡಿಕೆ
Team Udayavani, Sep 6, 2019, 3:49 AM IST
ಭೂಮಿಯಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಬೇಕು ಎಂಬ ಉದ್ದೇಶದಿಂದ ಕುಂಟಿಕಾನದ ಗೊಲ್ಲಚಿಲ್ನ ಕೆ. ಮಹಾಲಿಂಗ ಪಾಟಾಲಿ ಅವರು ಸುಮಾರು 4 ವರ್ಷಗಳ ಹಿಂದೆ ತಮ್ಮ ಮನೆಯಲ್ಲಿನ ಬೋರ್ವೆಲ್ಗೆ ಮಳೆಕೊಯ್ಲು ವ್ಯವಸ್ಥೆಯನ್ನು ಅಳವಡಿಸಿದ್ದರು.
ಮಹಾಲಿಂಗ ಅವರ ಮನೆಯಲ್ಲಿ ಕೆಲವು ವರ್ಷಗಳ ಹಿಂದೆ ನೀರಿನ ಸಮಸ್ಯೆ ಉಂಟಾಗಿತ್ತು. ಒಂದೆಡೆ ಅಂತರ್ಜ ಮಟ್ಟ ಏರುತ್ತದೆ. ಅಲ್ಲದೆ, ನೀರಿನ ಸಮಸ್ಯೆಗೂ ಮುಕ್ತಿ ದೊರಕುತ್ತದೆ ಎಂಬ ಉದ್ದೇಶದಿಂದ ಮನೆಯಲ್ಲಿ ಮಳೆಕೊಯ್ಲು ವ್ಯವಸ್ಥೆ ಅಳವಡಿಸಿದ್ದಾರೆ.
ಇದೀಗ ಅವರ ಮನೆಯಲ್ಲಿ ನೀರಿನ ಸಮಸ್ಯೆ ತಲೆದೋರುವುದಿಲ್ಲ. ಅಗತ್ಯಕ್ಕೆಂದು ಪಾಲಿಕೆ ನೀರಿನ ಸರಬರಾಜು ಕೂಡ ಇದೆ. ಒಂದು ವೇಳೆ ಪಾಲಿಕೆ ನೀರು ನಿಂತು ಹೋದರೆ ತಮ್ಮ ಮನೆಯ ಬೋರ್ವೆಲ್ನಿಂದ ನೀರು ಉಪಯೋಗಿಸುತ್ತಾರೆ.
ಮಳೆ ನೀರು ಪೋಲಾಗಬಾರದು ಎಂಬ ಉದ್ದೇಶದಿಂದ ಟೆರೇಸ್ ಮನೆಯ ಮೇಲ್ಛಾವಣಿಗೆ ಪೈಪ್ ಅಳವಡಿಸಿ ಅದರನ್ನು ಕೊಳವೆ ಬಾವಿಗೆ ಸಂಪರ್ಕ ಕಲ್ಪಿಸಿದ್ದಾರೆ. ಕಸ, ಕಡ್ಡಿಗಳು ನೀರಿನ ಜತೆ ಬೋರ್ವೆಲ್ಗೆ ಹೋಗಬಾರದೆಂದು ಫಿಲ್ಟರ್ ವ್ಯವಸ್ಥೆಯನ್ನು ಅಳವಡಿಸಿದ್ದಾರೆ.
ಅಭಿಯಾನದಿಂದ ಪ್ರೇರಣೆ
ಉಳ್ಳಾಲದ ಮಾಸ್ತಿಕಟ್ಟೆಯ ಅಬ್ದುಲ್ ರೆಹಮಾನ್ ಅವರು ತಮ್ಮ ಮನೆಯಲ್ಲಿ ಕೆಲವು ದಿನಗಳ ಹಿಂದೆ ಮಳೆಕೊಯ್ಲು ಅಳವಡಿಸಿದ್ದಾರೆ. ‘ಉದಯವಾಣಿ ಸುದಿನ’ದಲ್ಲಿ ಪ್ರಕಟವಾಗುತ್ತಿರುವ ಮನೆಮನೆಗೆ ಮಳೆಕೊಯ್ಲು ಅಭಿಯಾನದಿಂದ ಪ್ರೇರಣೆಗೊಂಡು ಮಳೆಕೊಯ್ಲು ವ್ಯವಸ್ಥೆ ಅಳವಡಿಸಿದ್ದಾರೆ.
ಮನೆಯ ಛಾವಣಿ ನೀರನ್ನು ಪೈಪ್ ಮುಖೇನ ಟ್ಯಾಂಕ್ಗೆ ಬಿಟ್ಟು, ಶುದ್ಧೀಕೃತ ನೀರನ್ನು ಟ್ಯಾಂಕ್ನಿಂದ ಬಾವಿಗೆ ಬೀಳುವಂತೆ ಸಂಪರ್ಕ ಕಲ್ಪಿಸಿದ್ದಾರೆ. ಈ ಹಿಂದೆ ತಮ್ಮ ಮನೆಯಲ್ಲಿ ಮಳೆಕೊಯ್ಲು ಅಳವಡಿಸಿದ್ದ ಸುಧಾಕರ್ ಬಂಡಿಕೋಟ್ಯ ಅವರು ಇವರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಉದಯವಾಣಿಗೆ ಪ್ರತಿಕ್ರಿಯೆ ನೀಡಿದ ಅವರು ‘ಸುದಿನ’ದಲ್ಲಿ ಮಳೆಕೊಯ್ಲು ಬಗ್ಗೆ ಪ್ರಕಟಿಸುತ್ತಿರುವ ಮಾಹಿತಿಯಿಂದ ಪ್ರೇರಿತನಾಗಿ ಮಳೆಕೊಯ್ಲು ಅಳವಡಿಸಿದೆ. ವೆಲೆನ್ಸಿಯಾ ಚರ್ಚ್ನಲ್ಲಿ ಉದಯವಾಣಿ ಮತ್ತು ನಿರ್ಮಿತಿ ಕೇಂದ್ರ ಸಹಯೋಗದಲ್ಲಿ ನಡೆದ ಮಳೆಕೊಯ್ಲು ಮಾಹಿತಿ ಕಾರ್ಯಾಗಾರವೂ ಸಹಕಾರಿಯಾಯಿತು.ಈ ಅಭಿಯಾನ ಜನಸಮಾನ್ಯರಿಗೆ ಮತ್ತಷ್ಟು ಪ್ರೇರಣೆಯಾಗಲಿ ಎನ್ನುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ