ಸೇತುವೆ ಮೇಲೆ ಸಂಚರಿಸಿದರೆ ಕೆಸರು ನೀರಿನ ಸ್ನಾನ!
Team Udayavani, Jun 20, 2018, 3:20 AM IST
ಉಪ್ಪಿನಂಗಡಿ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ನಿರ್ವಹಣೆ ಮಾಡದಿರುವುದು ಮಳೆಗಾಲದಲ್ಲಿ ಹಲವು ಸಮಸ್ಯೆಗಳಿಗೆ ಕಾರಣವಾಗಿದ್ದು, ಇಲ್ಲಿನ ಸೇತುವೆಗಳ ಮೇಲೆ ಸಂಚರಿಸುವ ಪಾದಚಾರಿಗಳು ಕೆಸರು ನೀರಿನಿಂದ ಸ್ನಾನ ಮಾಡಬೇಕಾದ ಸ್ಥಿತಿ ಬಂದೊದಗಿದೆ. ಈ ರಾಷ್ಟ್ರೀಯ ಹೆದ್ದಾರಿಯು ಮೇಲ್ದರ್ಜೆಗೇರಿದ್ದು, ಚತುಷ್ಪಥವಾಗಿ ಬದಲಾಗುತ್ತಿದೆ. ಇದರ ಕಾಮಗಾರಿ ನಡೆಯುತ್ತಿದ್ದು, ಅಲ್ಲಲ್ಲಿ ಅಗೆದು ಹಾಕಲಾಗಿದೆ. ಇನ್ನೊಂದೆಡೆ ಈಗಿದ್ದ ಹೆದ್ದಾರಿಯನ್ನು ನಿರ್ವಹಣೆ ಮಾಡುವವರೇ ಇಲ್ಲದೆ ಹೆದ್ದಾರಿಯ ಇಕ್ಕೆಲಗಳಲ್ಲಿ ಗಿಡ- ಗಂಟಿಗಳು, ಪೊದೆಗಳು ಹುಲುಸಾಗಿ ಬೆಳೆದು, ಹೆದ್ದಾರಿಯನ್ನು ಆವರಿಸಿವೆ. ಇದ್ದ ಚರಂಡಿಯು ಹೂಳು ತುಂಬಿ ಮುಚ್ಚಿದ್ದು, ಇವುಗಳ ಮೇಲೆ ಹುಲ್ಲು, ಗಿಡಗಂಟಿಗಳು ಆವರಿಸಿವೆ.
ಕೆಸರಿನ ಅಭಿಷೇಕ!
ಉಪ್ಪಿನಂಗಡಿಯಲ್ಲಿರುವ ಕುಮಾರಧಾರಾ ನದಿಯ ಸೇತುವೆ ಮೇಲೆ ಪಾದಚಾರಿಗಳಿಗೆ ನಡೆದಾಡಲು ಕಷ್ಟಕರವಾದ ಸ್ಥಿತಿ ನಿರ್ಮಾಣಗೊಂಡಿದೆ. ಸೇತುವೆಯಲ್ಲಿ ನೀರು ಹೋಗಲು ಮಾಡಲಾದ ರಂಧ್ರಗಳು ಮಣ್ಣು, ಕಸಕಡ್ಡಿಗಳಿಂದ ತುಂಬಿ ಮುಚ್ಚಿ ಹೋಗಿದ್ದು, ನೀರಿನ ಹರಿಯುವಿಕೆಗೆ ತಡೆಯಾಗಿ, ಮಳೆ ಬಂದ ಸಂದರ್ಭ ನೀರು ಸೇತುವೆಯ ಮೇಲೆಯೇ ನಿಂತು ಸೇತುವೆಯೇ ದೊಡ್ಡ ಹಳ್ಳವಾಗಿ ಮಾರ್ಪಾಡಾಗುತ್ತದೆ. ಇದರ ಮೇಲೆ ವಾಹನಗಳು ಸಂಚರಿಸಿದರೆ ಬದಿಯಲ್ಲಿ ನಡೆದುಕೊಂಡು ಹೋಗುವವರ, ದ್ವಿಚಕ್ರ ವಾಹನ ಸವಾರರ ಮೈಮೇಲೆಲ್ಲ ಕೆಸರು ನೀರಿನ ಪ್ರೋಕ್ಷಣೆಯಾಗುತ್ತದೆ. ಇದರಿಂದ ಪಾದಚಾರಿಗಳು, ಶಾಲಾ ಮಕ್ಕಳು, ದ್ವಿಚಕ್ರ, ಅಟೋರಿಕ್ಷಾ ಸವಾರರು ಸಮಸ್ಯೆಗೆ ಸಿಲುಕುವಂತಾಗಿದೆ. ಇದು ಒಂದೇ ಸೇತುವೆಯ ಕಥೆಯಲ್ಲ. ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದ ಹೆಚ್ಚಿನ ಎಲ್ಲ ಸೇತುವೆಗಳಲ್ಲೂ ಇದೇ ಅವಸ್ಥೆ.
ಆದರೆ ಇಕ್ಕೆಲಗಳಲ್ಲಿ ತುದಿಯಿಂದ ಕೊನೆಯವರೆಗೆ ಬೆಳೆದಿರುವ ಹುಲ್ಲುಗಳು ಹಾಗೆಯೇ ಇರುವುದರಿಂದ ಹಾಗೂ ಸೇತುವೆಯಲ್ಲಿ ಮಣ್ಣು ತುಂಬಿರುವುದರಿಂದ ರಂಧ್ರಗಳ ಮಣ್ಣು ತೆರವುಗೊಳಿಸಿದ ನಾಲ್ಕೈದು ದಿನದಲ್ಲೇ ಮತ್ತೆ ಸೇತುವೆಯ ಮೇಲಿನ ನೀರು ಹರಿದು ಹೋಗಲು ತಡೆಯಾಗಿ ಮೊದಲಿನ ಹಾಗೆ ಸಮಸ್ಯೆಗೆ ಕಾರಣವಾಗಿದೆ. ಆದ್ದರಿಂದ ಇನ್ನಾದರೂ ಹೆದ್ದಾರಿ ಪ್ರಾಧಿಕಾರ ಎಚ್ಚೆತ್ತುಕೊಂಡು ಸೇತುವೆ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆ ಮುಂದಾಗಬೇಕೆನ್ನುವುದೇ ಸಾರ್ವಜನಿಕರ ಆಗ್ರಹ.
ಯುವಕರಿಂದ ಶ್ರಮದಾನ!
ಈ ಬಾರಿ ಮಳೆ ಬಂದು ಹಲವು ಮಂದಿ ಕೆಸರು ನೀರಿನಲ್ಲಿ ಸ್ನಾನ ಮಾಡಿದ ಬಳಿಕವೂ ಹೆದ್ದಾರಿ ಪ್ರಾಧಿಕಾರ ಎಚ್ಚೆತ್ತುಕೊಳ್ಳದಿದ್ದಾಗ ಬೇಸತ್ತ ನೆಕ್ಕಿಲಾಡಿಯ ಕೆಲ ಯುವಕರು ಕುಮಾರಧಾರಾ ನದಿಯ ಸೇತುವೆಯ ಇಕ್ಕೆಲಗಳಲ್ಲಿ ಹೂಳು ತುಂಬಿ ಮುಚ್ಚಿಹೋಗಿದ್ದ ರಂಧ್ರಗಳನ್ನು ಸ್ವಚ್ಛಗೊಳಿಸುವ ಕೆಲಸ ಮಾಡುವ ಸಾಮಾಜಿಕ ಕಳಕಳಿ ತೋರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?