ರಾಜ್ಯದ 28 ಜಿಲ್ಲೆಗಳಲ್ಲಿ ಮಳೆ ಕೊರತೆ
ಕೈಕೊಟ್ಟ ಪೂರ್ವ ಮುಂಗಾರು
Team Udayavani, May 19, 2019, 6:00 AM IST
ಮಂಗಳೂರು: ಸಾಮಾನ್ಯವಾಗಿ ಮಾರ್ಚ್ನಿಂದ ಮೇ ಅಂತ್ಯದವರೆಗೆ ರಾಜ್ಯದಲ್ಲಿ ಸುರಿಯುವ ಪೂರ್ವ ಮುಂಗಾರು ಮಳೆ ಪ್ರಸಕ್ತ ವರ್ಷ ತೀರಾ ಕಡಿಮೆಯಾಗಿದೆ. ರಾಜ್ಯದ 28 ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಶೇ. 44ರಷ್ಟು ಕೊರತೆಯಾಗಿದೆ. ಇದರಿಂದಾಗಿ ಬರದ ತೀವ್ರತೆ ಮತ್ತಷ್ಟು ಹೆಚ್ಚಿದೆ.
ಪ್ರತೀ ವರ್ಷ ಕರಾವಳಿ ಸಹಿತ ಮಲೆನಾಡು ಪ್ರದೇಶಗಳಲ್ಲಿ ಪೂರ್ವ ಮುಂಗಾರು, ಮುಂಗಾರು ಮತ್ತು ಹಿಂಗಾರು ಉತ್ತಮವಾಗಿರುತ್ತದೆ. ಆದರೆ ಈ ಬಾರಿ ಇಡೀ ರಾಜ್ಯದಲ್ಲಿಯೇ ಪೂರ್ವ ಮುಂಗಾರು ದುರ್ಬಲವಾಗಿದ್ದು, ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆ ಗಳಾದ ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆ ಹೊರತುಪಡಿಸಿದರೆ ಉಳಿದ ಎಲ್ಲ ಜಿಲ್ಲೆಗಳಲ್ಲಿ ಮಳೆ ಪ್ರಮಾಣದಲ್ಲಿ ಕೊರತೆ ಇದೆ.
ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಾರ್ಚ್ ನಿಂದ ಮೇ 19ರ ವರೆಗೆ ವಾಡಿಕೆಗಿಂತ ಶೇ. 5ರಷ್ಟು ಮಳೆ ಪ್ರಮಾಣ ಹೆಚ್ಚಳವಾಗಿದೆ. 88.3 ಮಿ.ಮೀ. ವಾಡಿಕೆ ಮಳೆಯಾಗ ಬೇಕಾಗಿದ್ದು, 92.6 ಮಿ.ಮೀ. ಸುರಿದಿದೆ. ಅದೇ ರೀತಿ ಕೋಲಾರ ಜಿಲ್ಲೆಯಲ್ಲಿ 66 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. 73.9 ಮಿ.ಮೀ. ಮಳೆ ಯಾಗಿ ಶೇ. 12ರಷ್ಟು ಮಳೆ ಪ್ರಮಾಣ ಹೆಚ್ಚಾಗಿದೆ.
2018ರಲ್ಲಿ ಕರಾವಳಿ ಭಾಗದಲ್ಲಿಯೇ ಅತೀ ಹೆಚ್ಚು ಪೂರ್ವ ಮುಂಗಾರು ಮಳೆ ಸುರಿದಿತ್ತು. 178.8 ಮಿ.ಮೀ. ವಾಡಿಕೆ ಮಳೆಯಾಗಬೇಕಿದ್ದು, 334.9 ಮಿ.ಮೀ. ಮಳೆಯಾಗಿ ಶೇ. 87ರಷ್ಟು ಮಳೆ ಪ್ರಮಾಣ ಹೆಚ್ಚಳವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಶೇ. 172 ಹೆಚ್ಚುವರಿ ಮಳೆಯಾಗಿತ್ತು. ರಾಯಚೂರಿನಲ್ಲಿ ಶೇ. 45ರಷ್ಟು ಮಳೆ ಕೊರತೆ ಉಂಟಾಗಿತ್ತು.
ನಾಲ್ಕನೇ ಸ್ಥಾನದಲ್ಲಿದೆ ಉಡುಪಿ ಜಿಲ್ಲೆ
ಈ ವರ್ಷ ಪೂರ್ವ ಮುಂಗಾರು ಮಳೆ ಕೊರತೆ ಉಂಟಾಗಿರುವ ರಾಜ್ಯದ ಜಿಲ್ಲೆಗಳ ಪೈಕಿ ಉಡುಪಿ ಜಿಲ್ಲೆ ನಾಲ್ಕನೇ ಸ್ಥಾನದಲ್ಲಿದೆ. ಉತ್ತರ ಒಳನಾಡಿನ ಬೀದರ್ ಜಿಲ್ಲೆ ಮೊದಲನೇ ಸ್ಥಾನದಲ್ಲಿದ್ದು, 41.4 ಮಿ.ಮೀ. ವಾಡಿಕೆ ಮಳೆಯಾಗುವಲ್ಲಿ ಕೇವಲ 11.7 ಮಿ.ಮೀ. ಮಳೆಯಾಗಿ ಶೇ.72ರಷ್ಟು ಮಳೆ ಕೊರತೆ ಇದೆ. ಎರಡನೇ ಸ್ಥಾನದಲ್ಲಿ ಬೆಳಗಾವಿ ಜಿಲ್ಲೆ ಇದ್ದು, 58.4 ಮಿ.ಮೀ. ವಾಡಿಕೆ ಮಳೆಯಾಗಬೇಕು. ಆದರೆ ಸುರಿದದ್ದು ಕೇವಲ 17 ಮಿ.ಮೀ. ಇದರಿಂದ ಶೇ 71 ರಷ್ಟು ಮಳೆ ಕೊರತೆ ಇದೆ. ಮೂರನೇ ಸ್ಥಾನದಲ್ಲಿ ರಾಯಚೂರು ಜಿಲ್ಲೆ ಇದ್ದು, 35.1 ಮಿ.ಮೀ. ವಾಡಿಕೆ ಮಳೆಯಲ್ಲಿ 10.5 ಮಿ.ಮೀ. ಮಳೆ ಸುರಿದು ಶೇ 70ರಷ್ಟು ಮಳೆ ಕೊರತೆ ಇದೆ. ಉಡುಪಿ ಜಿಲ್ಲೆ ನಾಲ್ಕನೇ ಸ್ಥಾನದಲ್ಲಿದ್ದು, ಇಲ್ಲಿ 66.8 ಮಿ.ಮೀ. ವಾಡಿಕೆ ಮಳೆಯಾಗಬೇಕು. ಕೇವಲ 21.8 ಮಿ.ಮೀ. ಮಳೆ ಸುರಿದು ಶೇ. 67ರಷ್ಟು ಮಳೆ ಕೊರತೆ ಉಂಟಾಗಿದೆ.
ಗರಿಷ್ಠ ಉಷ್ಣಾಂಶದಿಂದ ಮೀನುಗಾರಿಕೆಗೆ ತೊಂದರೆ
“ಈಗಿನ ಹವಾಮಾನ ವೈಪರೀತ್ಯದಿಂದಾಗಿ ಮೀನುಗಾರಿಕೆಗೂ ಪೆಟ್ಟು ಬಿದ್ದಿದೆ. ಬಿಸಿಲಿನ ಬೇಗೆಯಿಂದ ಆಳ ಸಮುದ್ರದಲ್ಲಿ ಅಂದು ಕೊಂಡಷ್ಟು ಮೀನು ಸಿಗುತ್ತಿಲ್ಲ. ಉಷ್ಣಾಂಶದ ಏರಿಕೆಯಿಂದ ಆಳದಲ್ಲಿರುವ ಮೀನು ಮೇಲೆ ಬರುತ್ತಿಲ್ಲ. ಇದರಿಂದಾಗಿ ಮೀನುಗಾರರು ಸಂಕಷ್ಟ ಅನುಭವಿಸುತ್ತಿದ್ದಾರೆ ಎನ್ನುತ್ತಾರೆ ಮೀನುಗಾರ ಮುಖಂಡರು.
ಮುಂಗಾರು ಕ್ಷೀಣ
ಈ ಬಾರಿಯ ಪೂರ್ವ ಮುಂಗಾರು ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಕ್ಷೀಣಿಸಿದೆ. ದಕ್ಷಿಣ ಒಳನಾಡಿನಲ್ಲಿ ಮೇಲ್ಮೆ ç ಸುಳಿಗಾಳಿ ಇದ್ದು, ಗಾಳಿಯ ಒತ್ತಡ ಕಡಿಮೆ ಇರುವ ಕಾರಣದಿಂದಾಗಿ ಬೆಂಗಳೂರು ಸಹಿತ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಸುರಿಯುತ್ತಿದೆ.
– ಶ್ರೀನಿವಾಸ ರೆಡ್ಡಿ,
ಕೆಎಸ್ಎನ್ಡಿಎಂಸಿ ನಿರ್ದೇಶಕ
– ನವೀನ್ ಭಟ್ ಇಳಂತಿಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ