ಗ್ರಾಮಾಂತರ ಪ್ರದೇಶದಲ್ಲಿ ಮಳೆ: ವಿವಿಧೆಡೆ ಹಾನಿ

ಗುರುಪುರ ಮನೆ ಮೇಲೆ ಬಿದ್ದ ಬೃಹತ್‌ ಆಲದಮರ

Team Udayavani, Jun 13, 2019, 6:00 AM IST

1206MALALI4

ರಾ.ಹೆ.169ರಲ್ಲಿ ರಸ್ತೆಯಲ್ಲಿ ಮಳೆ ನೀರು ನಿಂತಿದ್ದು ಸಂಚಾರ ಅಸ್ತವ್ಯಸ್ತವಾಯಿತು.

ಗುರುಪುರ: ಗುರುಪುರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮೂಳೂರು ಗ್ರಾಮದ ಬಳ್ಳಿಯಲ್ಲಿ ಬುಧವಾರ ಮಧ್ಯಾಹ್ನನ ಬೀಸಿದ ಭಾರೀ ಪ್ರಮಾಣದ ಗಾಳಿಯಿಂದ ಚಂದ್ರಶೇಖರ ಪೂಜಾರಿಯವರ ಮನೆ ಮೇಲೆ ಭಾರೀ ಗಾತ್ರದ ಆಲದ(ಗೋಳಿ) ಮರವೊಂದು ಬಿದ್ದು, ಮನೆ ಸಂಪೂರ್ಣ ಜಖಂಗೊಂ ಡಿದ್ದು, ಇದರಿಂದ ಅವರಿಗೆ ಸುಮಾರು ಐದು ಲಕ್ಷದಷ್ಟು ನಷ್ಟ ಸಂಭವಿಸಿದೆ.

ಘಟನೆ ನಡೆದ ಸಂದ ರ್ಭಮನೆಯಲ್ಲಿ ಚಂದ್ರಶೇಖರರ ಸಹೋದರಿ ಪುಷ್ಪಾ ಎಂಬವರು ಮಾತ್ರ ಇದ್ದರು. ಮನೆಗೆ ಮರ ಮುರಿದು ಬೀಳುತ್ತಲೇ ಅವರು ಹೊರಗೆ ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯಿಂದ ಮನೆಯ ಗೋಡೆ ಸಂಪೂರ್ಣ ಜಖಂಗೊಂಡಿದ್ದು ಎರಡು ಕೊಠಡಿಯ ಸೊತ್ತುಗಳು ಪುಡಿಯಾಗಿವೆ. ಸದ್ಯ ಮಳೆ ನೀರು ಮನೆಯೊಳಗೆ ಸುರಿಯುತ್ತಿದೆ. ಮರ ತೆರವುಗೊಳಿಸಿ, ಮನೆಗೆ ಟರ್ಪಾಲು ಹಾಸಲಾಗಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಬಿಜೆಪಿ ಮುಖಂಡ ರಾಜೇಶ್‌ ಸುವರ್ಣ, ಗ್ರಾಮ ಪಂಚಾ ಯತ್‌ ಪಿಡಿಒ ಹಾಗೂ ಇತರ ಸಿಬಂದಿ ಆಗಮಿಸಿ, ಪರಿಶೀಲಿಸಿದರು.

ರಾ.ಹೆದ್ದಾರಿಯಲ್ಲಿ ನಿಂತ ನೀರು
ಕೈಕಂಬದ ರಾ.ಹೆ. 169ರಲ್ಲಿ ಚರಂಡಿಯನ್ನು ಅರ್ಧಕ್ಕೆ ಸ್ಥಗಿತಗೊಳಿಸಿದ ಹಿನ್ನೆಲೆ ಯಲ್ಲಿ ಬುಧ ವಾರ ಮಧ್ಯಾಹ್ನ ಸುರಿದ ಭಾರೀ ಮಳೆಯಿಂದ ಮಳೆ ನೀರು ರಸ್ತೆ ಯಲ್ಲೇ ನಿಂತಿದೆ. ಸಮೀಪದ ವಿಕಾಸ್‌ನಗರ ಸಮೀಪದ ರಸ್ತೆಯಲ್ಲಿ ಮಳೆ ನೀರು ಕೊಳಚೆ ತ್ಯಾಜ್ಯದೊಂದಿಗೆ ರಸ್ತೆಯಲ್ಲೇ ಹರಿದಾಡಿ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿದೆ.

ಲೈಟ್‌ ಕಂಬದ ಮೇಲೆ ಬಿದ್ದ ಮರದ ಕೊಂಬೆ
ಕಿನ್ನಿಗೋಳಿ: ಕಿನ್ನಿಗೋಳಿ- ಮೂಲ್ಕಿ ರಾಜ್ಯ ಹೆದ್ದಾರಿಯಲ್ಲಿ ಹೊಸಕಾವೇರಿಯಲ್ಲಿ ಜೂ. 12 ರಂದು ಗಾಳಿಮಳೆಗೆ ಮರದ ದೊಡ್ಡ ಮರದ ಕೊಂಬೆ ಮುರಿದು ಕಿನ್ನಿಗೋಳಿ – ಕಟೀಲು ವಿದ್ಯುತ್‌ ಮೈನ್‌ ಲೈನ್‌ ಬಿದ್ದು ಕೆಲವು ಹೊತ್ತು ವಿದ್ಯುತ್‌ ವ್ಯತ್ಯಯ ಉಂಟಾಯಿತು. ಕಿನ್ನಿಗೋಳಿ ಮೆಸ್ಕಾಂ ಹಿರಿಯ ಅಧಿಕಾರಿಯ ಮುತುವರ್ಜಿಯಲ್ಲಿ ದುರಸ್ತಿ ಮಾಡಿ ವಿದ್ಯುತ್‌ ಸರಬರಾಜು ನೀಡಲಾಯಿತು.

ಕಾಮಗಾರಿ ವಿಳಂಬ; ಚರಂಡಿ ನೀರು ರಸ್ತೆಗೆ
ಮೂಲ್ಕಿ: ಮೂಲ್ಕಿ ನಗರ ಪಂಚಾಯತ್‌ ವ್ಯಾಪ್ತಿಯಲ್ಲಿ ತಡವಾಗಿ ಆರಂಭವಾಗಿರುವ ಮುಂಗಾರು ಮಳೆಯಿಂದ ನಗರದ ಚರಂಡಿ ನೀರು ರಸ್ತೆಯಲ್ಲಿ ಹರಿದಾಡಿ ವಾಹನ ಸವಾರರು ಸಂಕಷ್ಟ ಅನುಭವಿಸುವಂತಾಯಿತು.

ನ.ಪಂ. ವ್ಯಾಪ್ತಿಯಲ್ಲಿ ಸುಮಾರು 80 ಕಿ.ಮೀ.ಶಾಶ್ವತ ಕುಡಿಯುವ ನೀರಿನ ಯೋಜನೆ ಕೊಳವೆ ಅಳವಡಿಸುವ ಕಾಮಗಾರಿಯೂ ಆಮೆಗತಿಯಾಗಿದ್ದ ಸಮಸ್ಯೆಗೆ ಮೂಲ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸುತ್ತಾರೆ.

ಟಾಪ್ ನ್ಯೂಸ್

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.