ರಾಮಕೃಷ್ಣ ಮಿಷನ್‌ ಸ್ವಚ್ಛ ಗ್ರಾಮ ಅಭಿಯಾನ ಉದ್ಘಾಟನೆ


Team Udayavani, Dec 30, 2018, 6:03 AM IST

30-december-7.jpg

ಮಂಗಳೂರು: ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಹಸಿ ತ್ಯಾಜ್ಯವನ್ನು ಗೊಬ್ಬರವಾಗಿ ಪರಿವರ್ತಿಸಿ ಅತಿ ಹೆಚ್ಚು ಲಾಭ ಗಳಿಸುವ ಗ್ರಾ.ಪಂ.ಗೆ ಜಿಲ್ಲಾಡಳಿತದ ವತಿಯಿಂದ ಬಹುಮಾನ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ತಿಳಿಸಿದರು.

ರಾಮಕೃಷ್ಣ ಮಿಷನ್‌ ಮಂಗಳೂರು ವತಿಯಿಂದ ದ.ಕ. ಮತ್ತು ಉಡುಪಿ ಜಿಲ್ಲಾ ಪಂಚಾಯತ್‌ ಸಹಯೋಗದೊಂದಿಗೆ ನಗರದ ರಾಮಕೃಷ್ಣ ಮಠದಲ್ಲಿ ಶನಿವಾರ ನಡೆದ ‘ರಾಮಕೃಷ್ಣ ಮಿಷನ್‌ ಸ್ವಚ್ಛ ಗ್ರಾಮ ಅಭಿಯಾನ’ ಉದ್ಘಾಟನ ಸಮಾರಂಭದಲ್ಲಿ ಅವರು ಮಾತನಾಡಿದರು.

ರಾಮಕೃಷ್ಣ ಮಿಷನ್‌ ಜನರಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸ್ವಚ್ಛತಾ ಅಭಿಯಾನ ನಡೆಸುತ್ತಿದೆ. ಇದರಿಂದಾಗಿ ಸ್ವಚ್ಛತೆಯ ಅರಿವು ಎಲ್ಲರಲ್ಲೂ ಮೂಡಿದೆ. ತ್ಯಾಜ್ಯದಿಂದಲೂ ಲಾಭ ಗಳಿಸಬಹುದು ಎಂಬ ಭಾವನೆ ಬೆಳೆದಾಗ ಜನರು ಸಹಜವಾಗಿ ಈ ಬಗ್ಗೆ ಜಾಗೃತರಾಗುತ್ತಾರೆ. ತ್ಯಾಜ್ಯದಿಂದ ಉತ್ಪಾದಿಸಿದ ಗೊಬ್ಬರವನ್ನು ಜಿಲ್ಲಾಡಳಿತ ಮತ್ತು ರಾಮಕೃಷ್ಣ ಮಠದ ಜತೆಗೂಡಿ ಸಂಗ್ರಹ ಮತ್ತು ಮಾರಾಟಕ್ಕೆ ಪ್ರಯತ್ನಿಸಲಾಗುವುದು ಎಂದರು.

ಸ್ವಚ್ಛ ಗ್ರಾಮ ಅಭಿಯಾನ
ಸ್ವಚ್ಛತಾ ಅಭಿಯಾನದ ಸಂಚಾಲಕ ಏಕಗಮ್ಯಾನಂದ ಸ್ವಾಮೀಜಿ ಮಾತನಾಡಿ, ರಾಮಕೃಷ್ಣ ಮಿಷನ್‌ ವತಿಯಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ತಲಾ 100ರಂತೆ 200 ಗ್ರಾಮಗಳಲ್ಲಿ ಸ್ವಚ್ಛ ಗ್ರಾಮ ಅಭಿಯಾನ ನಡೆಯಲಿದೆ. 2019ರ ಅಕ್ಟೋಬರ್‌ 2ರ ವರೆಗೆ ನಡೆಯುವ ಅಭಿಯಾನದಲ್ಲಿ ಸುಮಾರು ಎರಡು ಸಾವಿರ ಸ್ವಚ್ಛತಾ ಶ್ರಮದಾನ ನಡೆಯಲಿದೆ. ಶ್ರಮದಾನಕ್ಕೆ ಬೇಕಾದ ಪೊರಕೆ ಸಹಿತ ಉಪಕರಣಗಳು, ಭಾಗವಹಿಸುವ ಸದಸ್ಯರಿಗೆ ಟೀಶರ್ಟ್‌ಗಳು, ಜಾಗೃತಿ ಕರಪತ್ರ, ಬ್ಯಾನರ್‌ಗಳು, ತ್ಯಾಜ್ಯ ಸಾಗಿಸಲು ವಾಹನದ ವ್ಯವಸ್ಥೆ, ಉಪಾಹಾರದ ವ್ಯವಸ್ಥೆಗಳನ್ನು ಮಂಗಳೂರು ರಾಮಕೃಷ್ಣ ಮಿಷನ್‌ ಒದಗಿಸಲಿದೆ. ಕೇಂದ್ರ ಸರಕಾರದ ವಿನಂತಿಯಂತೆ ಜನರಿಂದ ಜನರಿಗಾಗಿ ರಾಮಕೃಷ್ಣ ಮಿಷನ್‌ ಸ್ವಚ್ಛ ಭಾರತ್‌ ಅಭಿಯಾನ ನಡೆಸುತ್ತಿದೆ ಎಂದರು. ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಮಹಾರಾಜ್‌ ಉದ್ಘಾಟಿಸಿದರು.

ದಕ್ಷಿಣ ಕನ್ನಡ ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಡುಪಿ ಜಿ.ಪಂ. ಅಧ್ಯಕ್ಷ ದಿನಕರ ಬಾಬು, ದ.ಕ. ಜಿಲ್ಲಾ ಪಂಚಾಯತ್‌ ಸಿಇಒ ಡಾ| ಆರ್‌. ಸೆಲ್ವಮಣಿ, ಉಡುಪಿ ಜಿಲ್ಲಾ ಪಂಚಾಯತ್‌ ಸಿಂಧು ಬಿ.ರೂಪೇಶ್‌, ಎಂ.ಆರ್‌.ಪಿ.ಎಲ್‌. ಜಿಜಿಎಂ ಬಿ.ಎಚ್‌.ವಿ. ಪ್ರಸಾದ್‌ ಉಪಸ್ಥಿತರಿದ್ದರು. ವಿಧಾನಪರಿಷತ್‌ ಮಾಜಿ ಸದಸ್ಯ ಕ್ಯಾ| ಗಣೇಶ್‌ ಕಾರ್ಣಿಕ್‌ ಸ್ವಾಗತಿಸಿದರು. ಉಪನ್ಯಾಸಕ ಸಂತೋಷ್‌ ನಿರೂಪಿಸಿದರು. ದ.ಕ., ಉಡುಪಿಯ ಇನ್ನೂರು ಗ್ರಾಮಗಳಿಂದ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಪಿಡಿಒ ಮೊದಲಾದವರು ಪಾಲ್ಗೊಂಡಿದ್ದರು.

ಸಮ್ಮಾನ  
ಕಳೆದ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಸ್ವಚ್ಛ ಗ್ರಾಮ ಅಭಿಯಾನದಲ್ಲಿ ಸಾಧನೆ ಮಾಡಿದ ಮಂಗಳೂರು ತಾಲೂಕಿನ ಬಜಪೆ, ಕೆಮ್ರಾಲ್‌, ಪಡುಪಣಂಬೂರು, ಕಿಲ್ಪಾಡಿ, ವಾಲ್ಪಾಡಿ, ಅತಿಕಾರಿಬೆಟ್ಟು, ಬಂಟ್ವಾಳ ತಾಲೂಕಿನ ಕೇಪು, ಮಂಚಿ, ಪುಣಚ, ಇರ್ವತ್ತೂರು ಗ್ರಾ.ಪಂ. ಪ್ರತಿನಿಧಿಗಳನ್ನು ಸಮ್ಮಾನಿಸಲಾಯಿತು.

ನಿರ್ವಹಣೆಗೆ ಯೋಜನೆ
ಬಯಲು ಶೌಚ ಮುಕ್ತವಾಗಿರುವ ಉಭಯ ಜಿಲ್ಲೆಗಳಲ್ಲಿ ಸಮರ್ಪಕ ಘನ ತ್ಯಾಜ್ಯ ನಿರ್ವಹಣೆ ನಡೆಯಬೇಕು. ಜಿಲ್ಲೆಯ 25 ಗ್ರಾ.ಪಂ.ಗಳಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಯೋಜನೆ ಹಾಕಲಾಗಿದೆ. ಜನವರಿಯಲ್ಲಿ ಇದು ಜಾರಿಯಾಗಲಿದೆ.
 -ಡಾ| ಆರ್‌. ಸೆಲ್ವಮಣಿ, ದ.ಕ. ಜಿಪಂ ಸಿಇಒ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.