ರಾಮಕೃಷ್ಣ ಮಿಷನ್‌ ಸ್ವಚ್ಛ ಮಂಗಳೂರು ಅಭಿಯಾನದ 33ನೇ ಶ್ರಮದಾನ 


Team Udayavani, May 28, 2018, 10:38 AM IST

28-may-3.jpg

ಮಹಾನಗರ: ರಾಮಕೃಷ್ಣ ಮಿಷನ್‌ ನೇತೃತ್ವದ ಸ್ವಚ್ಛ ಮಂಗಳೂರು ಅಭಿಯಾನದ 33ನೇ ಶ್ರಮದಾನ ಕದ್ರಿ ಪಾರ್ಕ್‌ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ರವಿವಾರ ಜರಗಿತು. ಶ್ರೀ ರಾಮಕೃಷ್ಣ ಮಠದ ಸ್ವಾಮಿ ಜಿತಕಾ ಮಾನಂದಜಿ ಸಮಕ್ಷಮದಲ್ಲಿ ಯೆನಪೋಯ ವಿವಿಯ ರಿಜಿಸ್ಟ್ರಾರ್‌ ಡಾ| ಶ್ರೀಕುಮಾರ್‌ ಮೆನನ್‌ ಹಾಗೂ ಡಾ| ಸುಬ್ರಹ್ಮಣ್ಯ ಶೆಟ್ಟಿ ಚಾಲನೆ ನೀಡಿದರು. 

ಡಾ| ಶ್ರೀಕುಮಾರ್‌ ಮೆನನ್‌ ಮಾತನಾಡಿ, ಸ್ವಚ್ಛ ಭಾರತ ಅಭಿಯಾನವು ಜನಾಂದೋಲನವಾಗಿ ಮಾರ್ಪಟ್ಟಿದೆ. ಈ ನಿಟ್ಟಿನಲ್ಲಿ ರಾಮಕೃಷ್ಣ ಮಿಷನ್‌ನ ಕಾರ್ಯ ಶ್ಲಾಘನೀಯ. ಈಗ ಯುಜಿಸಿ ಕೂಡ ಸ್ವಚ್ಛತಾ ಅಭಿಯಾನವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಈ ದಿಸೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಯೋಜನೆ ರೂಪಿಸಿರುವುದು ಸ್ವತ್ಛ ಭಾರತ ಅಭಿಯಾನಕ್ಕೆ ಮತ್ತಷ್ಟು ವೇಗ ದೊರಕಿದೆ ಎಂದರು.

ಶಿಸ್ತು, ನಿಯಮ ಪಾಲನೆ ಮುಖ್ಯ
ಡಾ| ಸುಬ್ರಹ್ಮಣ್ಯ ಶೆಟ್ಟಿ ಮಾತನಾಡಿ, ವಿನೂತನ ಭಾರತವನ್ನು ಕಾಣಬೇಕಾದರೆ ವಿದೇಶಗಳಲ್ಲಿರುವ ಸ್ವಚ್ಛತೆ, ಶಿಸ್ತು, ನಿಯಮ ಪಾಲನೆಗಳು ಪ್ರತಿ ಭಾರತೀಯರಲ್ಲಿ ಮೂಡಬೇಕು. ಹೊರದೇಶಕ್ಕೆ ಹೋದಾಗ ನಿಯಮಗಳನ್ನು ಪಾಲಿಸುವ ನಾವು ಭಾರತಕ್ಕೆ ಬಂದಾಗಲೂ ಅದನ್ನು ಅನುಸರಿಸುವಂತಾದಾಗ ಮಾತ್ರ ಸ್ವತ್ಛ ಭಾರತ ಸಾಕಾರಗೊಳ್ಳುತ್ತದೆ ಎಂದರು.

ಈ ಸಂದರ್ಭದಲ್ಲಿ ರಮೇಶ್‌ ರಾವ್‌, ಮಸಾ ಹಿರೊ, ನಾಗೇಶ್‌ ಕೆ., ಪುರುಷೋತ್ತಮ ಪೂಜಾರಿ, ವಿಭಾ ಪ್ರಭು, ಅನಿರುದ್ಧ ನಾಯಕ್‌ ಸೇರಿದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು. ಆರಂಭದಲ್ಲಿ ಕಾರ್ಯಕರ್ತರನ್ನು ಐದು ತಂಡಗಳಾಗಿ ವಿಂಗಡಿಸಿ ಜವಾಬ್ದಾರಿ ಹಂಚಲಾಯಿತು.

ಬಳಿಕ ಕದ್ರಿಪಾರ್ಕ್‌ ಮುಂಭಾಗ, ಕದ್ರಿ ಪಾರ್ಕ್‌ ಒಳಭಾಗ, ಪುಟಾಣಿ ರೈಲು ಟ್ರ್ಯಾಕ್ , ವಾಕಿಂಗ್‌ ಟ್ರ್ಯಾಕ್ ಹಾಗೂ ರೇಡಿಯೋ ಪೆವಿಲಿಯನ್‌ಗಳನ್ನು ಶುಚಿಗೊಳಿಸಲಾಯಿತು. ಮೆಹಬೂಬ್‌ ಖಾನ್‌ ಹಾಗೂ ಸ್ವಯಂಸೇವಕರ ಮತ್ತೂಂದು ತಂಡ ಕದ್ರಿ ಪಾರ್ಕ್‌ನಿಂದ ಪಾದುವಾ ರಸ್ತೆಯಲ್ಲಿ ಸ್ವತ್ಛತಾ ಕಾರ್ಯ ಕೈಗೊಂಡಿತು. 

ಡಾ| ಧನೇಶ ಕುಮಾರ್‌ ಹಾಗೂ ಕಾರ್ಯಕರ್ತರು ಉದ್ಯಾನವನದ ಮುಂಭಾಗದ ಕಾಲುದಾರಿಗಳನ್ನು ಶುಚಿಗೊಳಿಸಿದರು. ಜೆಸಿಬಿ ಯಂತ್ರ ಬಳಸಿಕೊಂಡು ಕಾಲುದಾರಿಯಲ್ಲಿ ಬಿದ್ದುಕೊಂಡಿದ್ದ ದೊಡ್ಡಕಲ್ಲು ಚಪ್ಪಡಿಗಳನ್ನು ತೆಗೆದು, ಬದಿಗೆ ಹಾಕಿ ಮಣ್ಣು ಸಮತಟ್ಟು ಮಾಡಲಾಯಿತು. ಶುಭೋದಯ ಆಳ್ವ ಮಾರ್ಗದರ್ಶನ ನೀಡಿದರು.

ಬ್ಯಾನರ್‌ ತೆರವು
ನಗರದಲ್ಲಿರುವ ಬ್ಯಾನರ್‌ಗಳು ನಗರದ ಸೌಂದರ್ಯಕ್ಕೆ ಧಕ್ಕೆ ತರುವುದು ಹಾಗೂ ವಾಹನ ಸವಾರರಿಗೆ ತೊಂದರೆ ನೀಡುವ ಹಿನ್ನೆಲೆಯಲ್ಲಿ ಕಾರ್ಯಕರ್ತರು ಎರಡು ತಂಡಗಳನ್ನು ರಚಿಸಿಕೊಂಡು ಬ್ಯಾನರ್‌ ತೆರವು ಕಾರ್ಯಾಚರಣೆ ನಡೆಸಿದರು. ಮುಖ್ಯವಾಗಿ ಕಂಕನಾಡಿ, ಜ್ಯೋತಿ, ಬಿಜೈ, ಆ್ಯಗ್ನೇಸ್‌, ಬೆಂದೂರವೆಲ್‌, ಪಂಪ್‌ ವೆಲ್‌, ನಂತೂರು, ಬಲ್ಮಠ ಮೊದಲಾದ ಪ್ರದೇಶಗಳಲ್ಲಿ ಬ್ಯಾನರ್‌ ತೆರವು ಕಾರ್ಯ ನಡೆಯಿತು.

ಬಸ್‌ ತಂಗುದಾಣದ ಸ್ವಚ್ಛತೆ
ಪ್ರಯಾಣಿಕರು ಪ್ರತಿನಿತ್ಯ ಉಪಯೋಗಿಸುವ ಕದ್ರಿ ಪೊಲೀಸ್‌ ಠಾಣಾ ಮುಂಭಾಗದ ಬಸ್‌ ತಂಗುದಾಣವನ್ನು ಈ ಹಿಂದೆ ಸ್ವಚ್ಛ ಮಂಗಳೂರಿನ ಕಾರ್ಯಕರ್ತರು ನವೀಕರಣ ಗೊಳಿಸಿ ದ್ದರು. ಅದೇ ತಂಗುದಾಣವನ್ನು ತೊಳೆದು ಸ್ವಚ್ಛಗೊಳಿಸಲಾಯಿತು. ಜತೆಗೆ ಅದರ ಸುತ್ತಮುತ್ತಲ ಪ್ರದೇಶ ವನ್ನೂ ಸ್ವತ್ಛಗೊಳಿಸಲಾಯಿತು. ಕಾರ್ಯ ಕರ್ತರಾದ ಗಣೇಶ್‌ ಪ್ರಸಾದ್‌ ಶೆಟ್ಟಿ, ಕೃಷ್ಣಪ್ರಸಾದ್‌ ಶೆಟ್ಟಿ, ಚೇತನಾ ಗಡಿಯಾರ್‌ ಪಾಲ್ಗೊಂಡಿದ್ದರು.

ಶ್ರೀಲತಾ ಉಳ್ಳಾಲ, ಉದಯ ಕೆ.ಪಿ., ಪಿ.ಎನ್‌.ಭಟ್‌, ಸಂದೀಪ ಕೋಡಿಕಲ್‌, ಸೌರಜ್‌ ಮಂಗಳೂರು, ಪ್ರೀತಮ್‌ ಮುಗಿಲ್‌, ಜಗನ್‌ ಕೋಡಿಕಲ್‌, ವಿಖ್ಯಾತ್‌ ಸವಿತಾ ಮರ್ನಾಡ, ಕೌಶಿಕ್‌ ಬೇಕಲ್‌, ಮಹಮದ್‌ ಆರೀಫ್‌ ಮತ್ತಿತರರು ಭಾಗವಹಿಸಿದ್ದರು. ಅಭಿಯಾನಕ್ಕೆ ಎಂಆರ್‌ ಪಿಎಲ್‌ ಹಾಗೂ ನಿಟ್ಟೆ ಸಂಸ್ಥೆಗಳು ಪ್ರಾಯೋಜಕತ್ವ ವಹಿಸಿದ್ದರು.

ಸ್ವಚ್ಛತಾ ಜಾಗೃತಿ
ಮ್ಯಾಪ್ಸ್‌ ಕಾಲೇಜಿನ ವಿದ್ಯಾರ್ಥಿಗಳು ಮಾಜಿ ಕಾರ್ಪೊರೇಟರ್‌ ಸುರೇಶ್‌ ಶೆಟ್ಟಿ ಅವರ ಜತೆಯಾಗಿ ಸ್ವಚ್ಛತಾ ಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಕದ್ರಿ ಉದ್ಯಾನವನದಲ್ಲಿದ್ದ ಸಾರ್ವಜನಿಕರನ್ನು ಭೇಟಿಯಾಗಿ ಕರಪತ್ರ ಹಂಚಿ, ಶುಚಿತ್ವದ ಮಹತ್ವ ತಿಳಿಸಿದರು. ಸ್ಥಳೀಯ ವರ್ತಕರನ್ನು ಸಂಪರ್ಕಿಸಿ ಕಸವನ್ನು ಬಿಸಾಡದಂತೆ ವಿನಂತಿಸಿದರು.

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.