ರಾಮಕೃಷ್ಣ ಮಿಷನ್‌ ವತಿಯಿಂದ ‘ಸ್ವಚ್ಛ ಮಂಗಳೂರು’ ಅಭಿಯಾನ


Team Udayavani, Feb 5, 2018, 12:58 PM IST

5-Feb-10.jpg

ಮಹಾನಗರ: ರಾಮಕೃಷ್ಣ ಮಿಷನ್‌ ಸ್ವಚ್ಛತಾ ಅಭಿಯಾನದ 4ನೇ ಹಂತದ 14ನೇ ವಾರದ ಸ್ವಚ್ಛತಾ ಕಾರ್ಯಕ್ರಮ ರವಿವಾರ ನಗರದ ಮೋರ್ಗನ್ಸ್‌ ಗೇಟ್‌, ಮಹಾಕಾಳಿ ಮಹಾಕಾಳಿಪಡ್ಪುವಿನಲ್ಲಿ ನಡೆಯಿತು.

ಬೆಳಗ್ಗೆ 7.30ಕ್ಕೆ ರಾಗತರಂಗ ಸಂಸ್ಥೆಯ ಮುಖ್ಯಸ್ಥರಾದ ಸದಾನಂದ ಉಪಾ ಧ್ಯಾಯ ಹಾಗೂ ಸೀತಾರಾಮ್‌ ಎ. ಜಂಟಿಯಾಗಿ ಅಭಿಯಾನವನ್ನು ಶುಭಾರಂಭಗೊಳಿಸಿದರು. ಕೆ.ವಿ. ಪ್ರಸಾದ್‌, ಪಿ.ಎನ್‌. ಭಟ್‌, ಸುರೇಶ್‌ ಶೆಟ್ಟಿ, ಲೆಕ್ಕಪರಿಶೋಧಕ ಕೆ. ಶಿವಕುಮಾರ್‌ ಉಪಸ್ಥಿತರಿದ್ದರು.

ಆರು ಗುಂಪುಗಳಿಂದ ಶ್ರಮದಾನ
ಸುಮಾರು 250 ಜನ ಕಾರ್ಯಕರ್ತರು ಆರು ಗುಂಪುಗಳಾಗಿ ವಿಂಗಡಿಸಿಕೊಂಡು ಮಹಾಕಾಳಿಪಡ್ಪು ರೈಲ್ವೇ ಕ್ರಾಸಿಂಗ್‌ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಶ್ರಮದಾನ ಕೈಗೊಂಡರು. ಸಂತ ಅಲೋಸಿಯಸ್‌ ಕಾಲೇಜಿನ ಸಹಾಯ ಬಳಗದ ವಿದ್ಯಾರ್ಥಿಗಳು ಪ್ರಾಧ್ಯಾಪಕ ಡಾ| ಈಶ್ವರ್‌ ಭಟ್‌ ನೇತೃತ್ವದಲ್ಲಿ ರೈಲ್ವೇ ಕ್ರಾಸಿಂಗ್‌ನಿಂದ ಮೋರ್ಗನ್ಸ್‌ ಗೇಟ್‌ ಮುಖ್ಯರಸ್ತೆಯವರೆಗಿನ ರಸ್ತೆ, ತೋಡುಗಳನ್ನು ಸ್ವಚ್ಛಗೊಳಿಸಿದರೆ ಪ್ರೊ| ಶೇಷಪ್ಪ ಅಮೀನ್‌ ಮಾರ್ಗದರ್ಶನದಲ್ಲಿ ಒಂದಷ್ಟು ವಿದ್ಯಾರ್ಥಿಗಳು ಮಹಾಕಾಳಿಪಡ್ಪುವಿನಿಂದ ಹೆದ್ದಾರಿಯತ್ತ ಸಾಗುವ ರಸ್ತೆಯಲ್ಲಿ ಸ್ವಚ್ಛತೆ ನಡೆಸಿದರು.

ಮಾರ್ಗವಿಭಾಜಕ ಅಳವಡಿಕೆ
ಪ್ರತಿನಿತ್ಯ ಸುಮಾರು ಐವತ್ತಕ್ಕೂ ಅಧಿಕ ಬಾರಿ ಗೇಟ್‌ ಹಾಕಲಾಗುವ ಮಹಾಕಾಳಿಪಡ್ಪು ರೈಲ್ವೇ ಕ್ರಾಸಿಂಗ್‌ನಲ್ಲಿ ಪ್ರಯಾಣಿಕರ ವಾಹನಗಳ ಅವ್ಯವಸ್ಥಿತ ಸಾಲು, ಅದರಿಂದ ಉಂಟಾಗುವ ವಾದ-ವಿವಾದಗಳು, ಜತೆಗೆ ಸ್ಥಳಿಯರ ಸಮಸ್ಯೆಗಳನ್ನು ಕಂಡು ದಿಲ್‌ರಾಜ ಆಳ್ವ ಹಾಗೂ ಸ್ವಚ್ಛಮಂಗಳೂರು ಕಾರ್ಯಕರ್ತರು ಅಲ್ಲಿ ಹೋಗಿ ಸರ್ವೇ ನಡೆಸಿದರು. 

ಜತೆಗೆ ಸ್ಥಳೀಯರೊಂದಿಗೆ ಸಂವಾದ ನಡೆಸಿ ಈ ಸಮಸ್ಯೆಗಳಿಗೆ ಒಂದಿಷ್ಟು ಪರಿಹಾರ ನೀಡಬೇಕೆಂದು ಉದ್ದೇಶಿಸಲಾಯಿತು. ಇಂದು ಅಲ್ಲಲ್ಲಿ ಸುಮಾರು ಇಪ್ಪತ್ತು ಕಬ್ಬಿಣದ ರಾಡ್‌ಗಳನ್ನು ರಸ್ತೆಗೆ ಡ್ರಿಲ್‌ ಮಾಡಿ ಅಳವಡಿಸಲಾಯಿತು. ಕಾರ್ಯಕರ್ತರಾದ ಸಂದೀಪ್‌ ಕೋಡಿಕಲ್‌, ಸುಭೋದಯ ಆಳ್ವ, ಸುಜಿತ್‌ ಪ್ರತಾಪ್‌, ಅಕ್ಷಿತ್‌ ಅತ್ತಾವರ ಹಾಗೂ ಸ್ಥಳೀಯರ ಸಹಾಯದಿಂದ ಈ ಕಾರ್ಯವನ್ನು ನೆರವೇರಿಸಲಾಯಿತು.

ಮುಂದಿನ ದಿನಗಳಲ್ಲಿ ರೈಲ್ವೇ ಕ್ರಾಸಿಂಗ್‌ ನಲ್ಲಿ ವ್ಯವಸ್ಥಿತವಾಗಿ ಸಾಲುಗಳಲ್ಲಿ ನಿಲ್ಲುವ ಕುರಿತಂತೆ ಹಾಗೂ ಸಂಚಾರಿ ನಿಯಮಗಳನ್ನು ಪಾಲಿಸುವ ಕುರಿತಂತೆ ಜಾಗೃತಿಯನ್ನುಂಟು ಮಾಡಲು ಜಾಗೃತಿ ಸಪ್ತಾಹವನ್ನು ಹಮ್ಮಿಕೊಳ್ಳಲು ಯೋಜಿಸಲಾಯಿತು.

ಬಸ್‌ ತಂಗುದಾಣದ ಶುಚಿತ್ವ
ಜಪ್ಪಿನಮೊಗರುವಿನಲ್ಲಿನ ಹೆದ್ದಾರಿ ಪಕ್ಕದ ಬಸ್‌ ತಂಗುದಾಣವನ್ನು ಇಂದು ಸ್ವಚ್ಛಗೊಳಿಸಲಾಯಿತು. ಮುಖೇಶ್‌ ಆಳ್ವ, ಆನಂದ ಅಡ್ಯಾರ್‌ ಹಾಗೂ ಹಲವು ಕಾರ್ಯಕರ್ತರು ಬಸ್‌ ತಂಗುದಾಣಕ್ಕೆ ಅಂಟಿಸಿದ್ದ ಭಿತ್ತಿಚಿತ್ರ ಹಾಗೂ ಪೋಸ್ಟರ್‌ ಕಿತ್ತು ಹಾಕಿದರು. ಅನಂತರ ಗುಡಿಸಿ, ನೀರಿನಿಂದ ತೊಳೆದು, ಸುಣ್ಣ-ಬಣ್ಣ ಹಚ್ಚಿ ಸುಂದರಗೊಳಿಸಿದರು.

ಸಂತ ಅಲೋಶಿಯಸ್‌ ಕಾಲೇಜಿನ ಪ್ರಾಧ್ಯಾಪಕರಾದ ಅರುಣಾ ಕಲ್ಕೂರ್‌, ಸೋನಾಲ್‌ ಡಿ’ಸೋಜಾ, ಫೆಲಿಸಿಯಾ ಮಾರ್ಟಿಜ್‌, ಸಾಮಾಜಿಕ ಕಾರ್ಯಕರ್ತ ಸೌರಜ್‌, ವಿಶಿಷ್ಟ ಚೇತನ ಶ್ರೀಜಗನ್‌, ಚೇತನಾ ಗಡಿಯಾರ್‌ ಸೇರಿದಂತೆ ಅನೇಕ ಆಸಕ್ತ ಯುವಕ , ಯುವತಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸ್ವಚ್ಛತಾ ಅಭಿಯಾನದ ತರುವಾಯ ಕಾರ್ಯಕರ್ತರಿಗೆ ಶ್ರೀ ಆದಿ ಮಹೇಶ್ವರಿ ದೇವಸ್ಥಾನದಲ್ಲಿ ಉಪಾಹಾರದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಈ ಅಭಿಯಾನಕ್ಕೆ ಎಂಆರ್‌ಪಿಎಲ್‌ ಸಂಸ್ಥೆ ಪ್ರಾಯೋಜಕತ್ವ ನೀಡಿ ಸಹಕರಿಸುತ್ತಿದೆ.

5,000 ಮನೆ ಸಂಪರ್ಕ
ರಾಮಕೃಷ್ಣ ಮಿಷನ್‌ ವತಿಯಿಂದ ಮಂಗಳೂರು ನಗರ ಪ್ರದೇಶದಲ್ಲಿ ಸ್ವಚ್ಛತೆಯ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಸಲುವಾಗಿ ಕಳೆದ ಮೂರು ತಿಂಗಳಿಂದ ಪ್ರತಿನಿತ್ಯ ಸರಿಸುಮಾರು ನೂರು ಮನೆ ಹಾಗೂ ಅಂಗಡಿಗಳಿಗೆ ಭೇಟಿ ನೀಡಲಾಗುತ್ತಿದೆ.

ಜನವರಿಯಲ್ಲಿ ಸುಮಾರು ಇಪ್ಪತ್ತು ಸ್ವಚ್ಛತಾ ತಂಡಗಳಿಂದ ಇಪ್ಪತ್ತು ಪ್ರದೇಶಗಲ್ಲಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಇಂದಿನವರೆಗೆ ಸುಮಾರು ಐದು ಸಾವಿರ ಮನೆಗಳನ್ನು ಸಂಪರ್ಕಿಸಲಾಯಿತು. ಸ್ವಚ್ಛತಾ ಅಭಿಯಾನದ ಮುಖ್ಯ ಸಂಯೋಜಕ ಉಮಾನಾಥ್‌ ಕೋಟೆಕಾರ್‌ ಜಾಗೃತಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

ಎರಡು ಟಿಪ್ಪರ್‌ಗಳಷ್ಟು ತ್ಯಾಜ್ಯ
ಸ್ವಚ್ಛ ಮಂಗಳೂರು ಕಾರ್ಯಕರ್ತರು ರೈಲ್ವೇ ಕ್ರಾಸಿಂಗ್‌ ನಾಲ್ಕು ಬದಿಗಳಲ್ಲಿ ಸೇರಿಕೊಂಡಿದ್ದ ಹುಲ್ಲು ,ಕಸ ,ಪ್ಲಾಸ್ಟಿಕ್‌ ಬಾಟಲ್‌ ಸೇರಿದಂತೆ  ಎರಡು ಟಿಪ್ಪರ್‌ಗಳಷ್ಟು ತ್ಯಾಜ್ಯವನ್ನು ಹೆಕ್ಕಿ ಶುಚಿಗೊಳಿಸಿದರು. ದಿನೇಶ್‌ ಕರ್ಕೇರ ಹಾಗೂ ವಿಟ್ಠಲದಾಸ ಪ್ರಭು ಜೇಸಿಬಿ ಉಪಯೋಗಿಸಿಕೊಂಡು ರಸ್ತೆಯಲ್ಲಿ ಸೇರಿದ್ದ ಲೋಡಗಟ್ಟಲೆ ಮಣ್ಣನ್ನು ತೆಗೆದು ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು. ಆ್ಯಂಟನಿ ವೇಸ್ಟ್‌ ಕಾರ್ಮಿಕರು ಈ ಬಾರಿಯ ಸ್ವಚ್ಛತ ಅಭಿಯಾನದಲ್ಲಿ ಭಾಗವಹಿಸಿ ಕಾರ್ಯಕರ್ತರೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿದರು.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.