ಬಂಟ್ವಾಳದ ಅಶಾಂತಿಗೆ ಬಹುಸಂಖ್ಯಾಕ ಅಲ್ಪಸಂಖ್ಯಾಕ ಸಂಘಟನೆಗಳ ಮೇಲಾಟ ಕಾರಣ


Team Udayavani, Aug 19, 2017, 5:30 AM IST

Ramanath-Rai-2-650.jpg

ಬಂಟ್ವಾಳ: ತಾಲೂಕಿನಲ್ಲಿ ನಡೆದ ಮೂರು ಪ್ರಮುಖ ಹತ್ಯೆಗಳ ಪ್ರಕರಣವನ್ನು ಭೇಧಿಸುವಲ್ಲಿ ಪೊಲೀಸ್‌ ಇಲಾಖೆ ಯಶಸ್ವಿಯಾಗಿವೆ. ಇದು ಮತೀಯವಾದಿ ಸಂಘಟನೆಗಳ ಕೃತ್ಯ  ಇದು ಎಂದು ಮೇಲ್ನೊಟಕ್ಕೆ ಸಾಬೀತಾಗಿದೆ. ಬಹುಸಂಖ್ಯಾಕ ಮತ್ತು ಅಲ್ಪಸಂಖ್ಯಾಕ ಸಂಘಟನೆಗಳ ಮೇಲಾಟ ಸಂಘರ್ಷಕ್ಕೆ ಕಾರಣ. ಕಳೆದ ಕೆಲವು ಸಮಯದ ಹಿಂದೆ ಕಲ್ಲಡ್ಕ ಅಥವಾ ಇತರ ಕಡೆಗಳಲ್ಲಿ ನಡೆದ ಘರ್ಷಣೆ ಕೋಮು ಗಲಭೆಯಲ್ಲ. ಮತೀಯವಾದಿಗಳಿಂದ ನಡೆದ ಪೂರ್ವನಿಯೋಜಿತ ಕೃತ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಅವರು ಆ. 18ರಂದು ಬಂಟ್ವಾಳ ಪ್ರವಾಸಿ ಬಂಗಲೆಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲೆ ಭಯಮುಕ್ತ ಆಗಬೇಕು. ಮುಂದಕ್ಕೆ ಇಂತಹ ಕೃತ್ಯಗಳು ನಡೆಯಬಾರದು. ನಿರಂತರವಾಗಿ ಶಾಂತಿ ಸುವ್ಯವಸ್ಥೆ ನೆಲೆಸಬೇಕು ಎಂದವರು ಆಶಿಸಿದರು.

ಕಲ್ಲಡ್ಕ ಮತ್ತು ಪುಣಚ ಶಾಲೆಗೆ ಬಿಸಿಯೂಟದ ವ್ಯವಸ್ಥೆ ಬೇಡ ಎಂದು ಡಾ| ಪ್ರಭಾಕರ ಭಟ್ಟರು ಲಿಖೀತವಾಗಿ ನೀಡಿದ್ದಾರೆ. ಮಕ್ಕಳಿಗೆ ಅನ್ನ ಬೇಕಾದರೆ ಬರೆದುಕೊಟ್ಟರೆ ಸರಕಾರದ ವತಿಯಿಂದ ಅನುದಾನಿತ ಶಾಲೆಗಳಿಗೂ ಬಿಸಿಯೂಟ ನೀಡುವ ವ್ಯವಸ್ಥೆ ಇದೆ. ಕೊಲ್ಲೂರಿನಿಂದ ಇಲ್ಲಿಗೆ ಹಣದ ರೂಪದಲ್ಲಿ ದುಡ್ಡು ಬರುತ್ತಿತ್ತು ಕಾನೂನಿನ ಪ್ರಕಾರ ದೇವಸ್ಥಾನದಿಂದ ಅದನ್ನು ನೀಡುವಂತಿಲ್ಲ ಎಂದು ಸ್ಪಷ್ಟಪಡಿಸಿದರು.

ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಗೆ ಗುಂಡೂರಾವ್‌ ಸರಕಾರ ಇದ್ದಾಗ ಜಮೀನು ನೀಡಲಾಗಿತ್ತು. ಶಾಲೆಗೆ ಕಾಂಗ್ರೆಸ್‌ ಸರಕಾರ ಜಮೀನು ನೀಡಿದೆ ಎಂದರು. ಕಲ್ಲಡ್ಕ ಪುಣಚ ಶಾಲೆಗೆ ಬರುವ ಅನುದಾನ ನಾನು ತಡೆದಿಲ್ಲ. ಕಾನೂನು ಪ್ರಕಾರ ಇದಾಗಿದೆ. ನಾನು ಯಾವುದೇ ಶಾಲೆಯ ಮಕ್ಕಳನ್ನು ಹೊರಗೆ ಹಾಕುವ ಕೆಲಸ ಮಾಡಿಲ್ಲ ಎಂದರು.

ನಂಬರ್‌ ಒನ್‌ ಹೇಗೆ ?
ಸಂಸದ ನಳಿನ್‌ ಕುಮಾರ್‌ ಕಟೀಲು ಅವರಿಗೆ ಕೇಂದ್ರ ಸರಕಾರದ ವ್ಯಾಪ್ತಿಯ ಬಿ.ಸಿ.ರೋಡ್‌ನ‌ ಸರ್ವಿಸ್‌ ರಸ್ತೆಯ ದುಃಸ್ಥಿತಿಯನ್ನೇ  ನಿವಾರಿಸಲು ಸಾಧ್ಯವಾಗಿಲ್ಲ. ಇನ್ನು ನಂಬರ್‌ ಒನ್‌ ಸಂಸದ ಎಂಬುದು ಹೇಗಾಗುತ್ತಾರೆ? ಇವರೇ ನಂಬರ್‌ ಒನ್‌ ಆಗಿದ್ದರೆ ರಾಜ್ಯದ ಇನ್ನುಳಿದ ಬಿಜೆಪಿ ಸಂಸದರು ಹೇಗಿದ್ದಾರು ಎಂದು ಪ್ರಶ್ನಿಸಿದರು. ಬಿ.ಸಿ. ರೋಡ್‌ ಸಹಿತ ಜಿಲ್ಲೆಯ ಸರ್ವಿಸ್‌ ರಸ್ತೆಗೆ ಆಸ್ಕರ್‌ ಫೆರ್ನಾಂಡಿಸ್‌ ಹತ್ತು ವರ್ಷಗಳ ಹಿಂದೆಯೇ 28 ಕೋ. ರೂ. ಅನುದಾನ ಮಂಜೂರು ಮಾಡಿದ್ದರೂ ಅದನ್ನು ಉಪಯೋಗಿಸಲು ಇನ್ನೂ ಸಾಧ್ಯವಾಗಿಲ್ಲ ಎಂದರು.

ದಿ| ಇಂದಿರಾ ಗಾಂಧಿ ಭೂಮಸೂದೆ ಕಾನೂನು ತಂದು ಬಡವರಿಗೆ ಜಮೀನು ಸಿಕ್ಕುವಂತೆ ಮಾಡಿದರು. ಬಿಜೆಪಿಯವರು ಭೂಮಾಲಕರಾಗಿದ್ದು ಅದನ್ನು ವಿರೋಧಿಸಿದ್ದರು. ಕರ್ನಾಟಕದಲ್ಲಿ ರಾಜ್ಯದ ಮುಖ್ಯಮಂತ್ರಿ ದೇವರಾಜ ಅರಸು ಅದನ್ನು ಅನುಷ್ಠಾನಿಸಿದರು.  ಶಾಲಾ ಮಕ್ಕಳಿಗೆ ಮದ್ಯಾಹ್ನದ ಬಿಸಿಯೂಟ, ಭೂ ಮಸೂದೆ ಮೂಲಕ ಉಳುವವನೆ ಹೊಲದೊಡೆಯ, ಸಮಾನತೆ ಕಾನೂನನ್ನು ತಂದಿರುವುದು ಕಾಂಗ್ರೆಸ್‌ ಎಂದರು. ನಾನು ಯಾವುದೇ ತಪ್ಪು ಮಾಡಿಲ್ಲ. ಹಾಗೆ ಹೇಳುವುದು ಸಂಘಪರಿವಾರದ ನಾಟಕ. ಇದು ಖಂಡನೀಯ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿ.ಪಂ. ಸದಸ್ಯರಾದ ಚಂದ್ರಪ್ರಕಾಶ್‌ ಶೆಟ್ಟಿ, ಬಿ. ಪದ್ಮಶೇಖರ ಜೈನ್‌,ಎಂ. ಎಸ್‌.ಮಹಮ್ಮದ್‌, ಮಂಜುಳಾ ಮಾವೆ, ತಾ.ಪಂ.ಉಪಾಧ್ಯಕ್ಷ ಅಬ್ಟಾಸ್‌ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರ, ಸದಸ್ಯರಾದ ಕೆ.ಸಂಜೀವ ಪೂಜಾರಿ, ಮಲ್ಲಿಕಾ ಶೆಟ್ಟಿ, ಪುರಸಭಾ ಅಧ್ಯಕ್ಷ ಪಿ. ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್‌ ನಂದರಬೆಟ್ಟು, ಸದಸ್ಯ ಗಂಗಾಧರ, ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್‌, ಗೇರು ನಿಗಮ ಅಧ್ಯಕ್ಷ ಬಿ.ಎಚ್‌. ಖಾದರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.