ಕಸ್ತೂರಿ ವರದಿ, ಹುಲಿ ಯೋಜನೆ ಕೈಬಿಡಲು ರಮಾನಾಥ ರೈ ಆಗ್ರಹ
Team Udayavani, Dec 18, 2021, 7:01 AM IST
ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶದ ತಪ್ಪಲಿನಲ್ಲಿ ವಾಸಿಸುವ ಜನತೆಯ ಹಿತವನ್ನು ಪರಿಗಣಿಸಿ ಕಸ್ತೂರಿ ರಂಗನ್ ವರದಿ ಹಾಗೂ ಹುಲಿ ಯೋಜನೆಯನ್ನು ಕೈಬಿಡಬೇಕು ಎಂದು ಕೇಂದ್ರ ಸರಕಾರವನ್ನು ಮಾಜಿ ಸಚಿವ ರಮಾನಾಥ ರೈ ಆಗ್ರಹಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾ ಡಿದ ಅವರು, ರಾಜ್ಯದ ಕಾಂಗ್ರೆಸ್ ಸರಕಾರದಲ್ಲಿ ನಾನು ಅರಣ್ಯ ಸಚಿವ ನಾಗಿದ್ದ ಸಂದರ್ಭ ಕೇಂದ್ರ ಸರಕಾರ ಕಸ್ತೂರಿ ರಂಗನ್ ವರದಿಯ ಕರಡು ಪ್ರತಿ ಸಿದ್ಧಪಡಿಸಿತ್ತು. ಇದನ್ನು ಜಾರಿಗೊ ಳಿಸಿದರೆ ಪಶ್ಚಿಮ ಘಟ್ಟ ತಪ್ಪಲಿನಲ್ಲಿ ವಾಸಿಸುವ ಅನೇಕ ಕುಟುಂಬಗಳಿಗೆ ತೊಂದರೆಯಾಗುತ್ತದೆ ಎಂಬ ದೂರು ಗಳು ವ್ಯಕ್ತವಾಗಿದ್ದವು. ಈ ಬಗ್ಗೆ ಸಾಕಷ್ಟು ಚರ್ಚೆ ನಡೆದು ಪಶ್ಚಿಮ ಘಟ್ಟದಲ್ಲಿ ಈಗಾಗಲೇ ರಕ್ಷಿತಾರಣ್ಯ, ರಾಷ್ಟ್ರೀಯ
ಉದ್ಯಾನವನ, ಮೀಸಲು ಅರಣ್ಯ, ಅಭಯಾರಣ್ಯ ಮುಂತಾದ ಸೂಕ್ಷ್ಮ ವಲಯಗಳು ಜಾರಿಯಲ್ಲಿರುವುದ ರಿಂದ ಕಸ್ತೂರಿ ವರದಿ ಜಾರಿ ಬೇಡ ಎಂದು ರಾಜ್ಯದಿಂದ ಕೇಂದ್ರಕ್ಕೆ ಶಿಫಾರಸು ಮಾಡಲಾಗಿತ್ತು ಎಂದರು.
ಇದನ್ನೂ ಓದಿ:ಒನ್ಪ್ಲಸ್ ಬಡ್ಸ್ ಜೆಡ್2 ಬಿಡುಗಡೆ; ವಿವಿಧ ಮೋಡ್ಗಳಿರುವ ಇಯರ್ಬಡ್
ಆಗ ಕಾಂಗ್ರೆಸ್ ಮೇಲೆ ಗೂಬೆ ಕೂರಿಸಿದ್ದ ಬಿಜೆಪಿಯೇ ಇದೀಗ ರಾಜ್ಯದಲ್ಲಿ ಅಧಿಕಾರದಲ್ಲಿದೆ. ಕೇಂದ್ರ ದಲ್ಲೂ ಬಿಜೆಪಿ ಸರಕಾರವೇ ಇರುವುದರಿಂದ ವರದಿಯನ್ನು ರದ್ದುಪಡಿಸಬಹು ದಾಗಿದೆ ಎಂದರು.
ಹುಲಿ ಯೋಜನೆಯೂ ಬೇಡ
ಇದೇ ರೀತಿ ಹುಲಿ ಯೋಜನೆ ಜಾರಿ ಯಾಗುತ್ತದೆ ಎಂದು ಬಿಜೆಪಿಯವರು ಗುಲ್ಲೆಬ್ಬಿಸಿದ್ದರು. ಇದೀಗ ಕೇಂದ್ರ ಸರಕಾರ ಜಾರಿಗೊಳಿಸಲು ಹೊರಟಿದೆ. ಜಾರಿಗೊಳಿಸದಂತೆ ರಾಜ್ಯದ ಬಿಜೆಪಿ ಕೇಂದ್ರವನ್ನು ಆಗ್ರಹಿಸಲಿ ಎಂದರು.
ಕೋಡಿಜಾಲು ಇಬ್ರಾಹಿಂ, ಜಿ.ಎ. ಬಾವಾ, ಶಾಹುಲ್ ಹಮೀದ್, ಶಶಿಧರ ಹೆಗ್ಡೆ, ನವೀನ್ ಡಿ’ಸೋಜಾ, ಹರಿನಾಥ್, ಪ್ರಕಾಶ್ ಸಾಲಿಯಾನ್, ಶುಭೋದಯ ಆಳ್ವ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
Pilikula: “ಫ್ಯಾನ್-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!
Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ
Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ
Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
MUST WATCH
ಹೊಸ ಸೇರ್ಪಡೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!