ಕಂಕನಾಡಿ ಹಳೆ ಮಾರುಕಟ್ಟೆ ಶೀಘ್ರ ತೆರವು; ತಾತ್ಕಾಲಿಕ ಮಾರುಕಟ್ಟೆ ಸಿದ್ಧ


Team Udayavani, Mar 17, 2020, 4:58 AM IST

KANKANADY-MARKET

ಮಹಾನಗರ: ಹಲವು ಸಮಸ್ಯೆಗಳಿಂದ ನಲುಗುತ್ತಿರುವ ಕಂಕನಾಡಿಯ ಹಳೆ ಮಾರುಕಟ್ಟೆಯನ್ನು ಕೆಡವಿ ಸುಮಾರು 41 ಕೋ.ರೂ. ವೆಚ್ಚದಲ್ಲಿ ಹೊಸ ಮಾರುಕಟ್ಟೆ ಹಾಗೂ ವಾಣಿಜ್ಯ ಸಂಕೀರ್ಣ ನಿರ್ಮಿಸುವ ಮಂಗಳೂರು ಪಾಲಿಕೆಯ ಪ್ರಸ್ತಾವನೆ ಇದೀಗ ಅನುಷ್ಠಾನ ಹಂತಕ್ಕೆ ಬಂದಿದೆ.

ಹೊಸ ಮಾರುಕಟ್ಟೆ ನಿರ್ಮಾಣ ಹಿನ್ನೆಲೆ ಯಲ್ಲಿ ಹಳೆ ಮಾರುಕಟ್ಟೆಯನ್ನು ಕೆಡವಿ ತೆರವುಗೊಳಿಸುವ ಪ್ರಕ್ರಿಯೆ ಶೀಘ್ರದಲ್ಲಿ ನಡೆಯಲಿದ್ದು, ಪರ್ಯಾಯವಾಗಿ ಮಾರಾಟಗಾರರಿಗೆ ತಾತ್ಕಾಲಿಕ ಮಾರು ಕಟ್ಟೆಯನ್ನು ಹತ್ತಿರದ ಬಸ್‌ನಿಲ್ದಾಣದ ಒಂದು ಭಾಗದಲ್ಲಿ ಸಿದ್ಧಗೊಳಿಸಲಾಗಿದೆ.

1 ಕೋ.ರೂ. ವೆಚ್ಚದಲ್ಲಿ ತಾತ್ಕಲಿಕ ಮಾರುಕಟ್ಟೆ
ಹಳೆಯ ಕಟ್ಟಡದಲ್ಲಿರುವ ವ್ಯಾಪಾರಿಗಳ ಅನುಕೂಲಕ್ಕಾಗಿ ಸುಮಾರು 1 ಕೋ.ರೂ. ವೆಚ್ಚದಲ್ಲಿ ಕೆಲವು ತಿಂಗಳ ಹಿಂದೆ ಆರಂಭಿಸಿದ್ದ ತಾತ್ಕಾಲಿಕ ಮಾರುಕಟ್ಟೆ ನಿರ್ಮಾಣ ಕಾಮಗಾರಿ ಮುಗಿದಿದೆ. ಹಳೆಯ ಮಾರುಕಟ್ಟೆಯಲ್ಲಿರುವವರು ತಾತ್ಕಾಲಿಕ ಮಾರುಕಟ್ಟೆಗೆ ತೆರಳುವಂತೆ ಈಗಾಗಲೇ ಪಾಲಿಕೆಯಿಂದ ಸೂಚನೆ ನೀಡಲಾಗಿದೆ. ತತ್‌ಕ್ಷಣವೇ ತಾತ್ಕಾಲಿಕ ಮಾರುಕಟ್ಟೆಗೆ ಸ್ಥಳಾಂತರ ಆಗುವಂತೆ ವ್ಯಾಪಾರಿಗಳಿಗೆ ಪಾಲಿಕೆ ಸೂಚಿಸಿದೆ. ಹಳೆಮಾರುಕಟ್ಟೆಯಲ್ಲಿ ಒಟ್ಟು 98 ಅಂಗಡಿ ಮಳಿಗೆಗಳು ಮತ್ತು ಮಧ್ಯೆ ಮೀನು ಮಾರುಕಟ್ಟೆಯಿದೆ. ಅದಕ್ಕೆ ಪೂರಕವಾಗಿ ಹೊಸ ತಾತ್ಕಾಲಿಕ ಮಾರು ಕಟ್ಟೆಯಲ್ಲಿಯೂ ಪುಟ್ಟ ಗಾತ್ರದ 98 ಅಂಗಡಿ ಮಳಿಗೆಗಳನ್ನು ಮತ್ತು ಪ್ರತ್ಯೇಕ ಮೀನು ಮಾರುಕಟ್ಟೆ ನಿರ್ಮಿಸಲಾಗಿದೆ.

24 ವರ್ಷಗಳ ಹಳೆಯ ಮಾರುಕಟ್ಟೆ
ಕಂಕನಾಡಿಯ ಈಗಿನ ಮಾರುಕಟ್ಟೆಯು ಸುಮಾರು 24 ವರ್ಷಗಳ ಹಳೆಯದಾಗಿದೆ. ಇಲ್ಲಿ ಮೂಲ ಸೌಕರ್ಯದ ಕೊರತೆ ಇದೆ. ವ್ಯಾಪಾರಿಗಳು, ಗ್ರಾಹಕರಿಗೆ ಅಗತ್ಯದ ವ್ಯವಸ್ಥೆಗಳು ಇಲ್ಲಿ ಸೂಕ್ತ ರೀತಿಯಲ್ಲಿ ಲಭ್ಯವಿಲ್ಲ.

ಜತೆಗೆ, ಹಳೆಯ ಕಟ್ಟಡ ಶಿಥಿಲ ವಾಗಿದ್ದು, ನೀರು ಸೋರುವ, ಬಿರುಕು ಬಿಟ್ಟ ಗೋಡೆಗಳು ಆತಂಕಕ್ಕೆ ಕಾರಣವಾಗಿದೆ. ಸುಮಾರು 98ರಷ್ಟು ಅಂಗಡಿಗಳು ಇಲ್ಲಿವೆ. ಮಳೆಗಾಲದಲ್ಲಿ ಮಳೆ ನೀರು ಒಳಗೆ ಬರುವುದು ಇಲ್ಲಿ ಸಾಮಾನ್ಯ. ಶೌಚಾಲಯದ ಸಮಸ್ಯೆ ಇಲ್ಲಿ ಕೇಳುವವರೇ ಇಲ್ಲ. ಎಲ್ಲೆಲ್ಲೂ ಇಕ್ಕಟ್ಟು. ಉಸಿರು ಬಿಗಿಹಿಡಿಯುವ ಪರಿಸ್ಥಿತಿ. ಶಿಥಿಲಾವಸ್ಥೆಯ ಕಟ್ಟಡ ವನ್ನು ದುರಸ್ತಿ ಮಾಡುವುದು ಕೂಡ ಕಷ್ಟ ಸಾಧ್ಯವಾದ ಹಿನ್ನೆಲೆಯಲ್ಲಿ ಹೊಸ ಮಾರುಕಟ್ಟೆ ಇಲ್ಲಿ ನಿರ್ಮಾಣ ವಾಗಲಿದೆ. ಹಳೆ ಮಾರುಕಟ್ಟೆಯ ಮುಂಭಾಗದ ಗ್ರೌಂಡ್‌ನ‌ ಅರ್ಧ ಭಾಗದಲ್ಲಿ ತಾತ್ಕಾಲಿಕವಾಗಿ ಮಾರುಕಟ್ಟೆ ನಿರ್ಮಿಸಲಾಗಿದೆ. ಇನ್ನುಳಿದ ಜಾಗದಲ್ಲಿ ಪಾರ್ಕಿಂಗ್‌, ತಳ್ಳುಗಾಡಿಗಳ ವ್ಯಾಪಾರ ನಡೆ ಯುತ್ತಿದೆ. ಇದನ್ನು ತೆರವು ಮಾಡು ವಂತೆ ಇದೀಗ ಹಳೆ ಮಾರು ಕಟ್ಟೆಯ ವ್ಯಾಪಾರಿಗಳು ಪಾಲಿಕೆಗೆ ಮನವಿ ಮಾಡಿದ್ದಾರೆ. ತಾತ್ಕಾಲಿಕ ಮಾರುಕಟ್ಟೆಗೆ ಇದು ಬಹುದೊಡ್ಡ ಸಮಸ್ಯೆ ಆಗಲಿದೆ, ಹೊಸ ಕಟ್ಟಡ ನಿರ್ಮಾಣದ ಕಲ್ಲು, ಮಣ್ಣು, ಸಿಮೆಂಟ್‌, ಕಬ್ಬಿಣ, ಶೇಖರಿಸಲು ವ್ಯವಸ್ಥೆ ಮಾಡಬೇಕಿದೆ. ಹೀಗಾಗಿ ಪಾರ್ಕಿಂಗ್‌ ವ್ಯವಸ್ಥೆ ಇಲ್ಲಿ ಸುಧಾರಿಸಬೇಕಿದೆ.

ಹೈಟೆಕ್‌ ಮಾರುಕಟ್ಟೆ ನಿರ್ಮಾಣ
ಈಗಿನ ಹಳೆ ಮಾರುಕಟ್ಟೆಯನ್ನು ಕೆಡವಿ ಅದೇ ಜಾಗದಲ್ಲಿ ಹೊಸ ಮಾರುಕಟ್ಟೆ ನಿರ್ಮಾಣವಾಗಲಿದೆ. ಕಾಮಗಾರಿ ಆರಂಭವಾಗಿ ಎರಡು ವರ್ಷಗಳಲ್ಲಿ ಪೂರ್ಣವಾಗಲಿದೆ. ಸುಸಜ್ಜಿತ ರೀತಿಯಲ್ಲಿ ಮಾರುಕಟ್ಟೆ ರಚನೆ ಆದರೆ, ಮಾಲ್‌ಗ‌ಳಲ್ಲಿನ ಮಾರುಕಟ್ಟೆ ರೀತಿಯ ವಾತಾವರಣವಿರಲಿದೆ. ಮಾರಾಟಗಾರರಿಗೆ ಪ್ರತ್ಯೇಕ-ಪ್ರತ್ಯೇಕ ವ್ಯವಸ್ಥೆ, ಗ್ರಾನೈಟ್‌ ಅಳವಡಿಕೆ, ಒತ್ತಡ ಮುಕ್ತ, ಸ್ವತ್ಛತೆಗೆ ವಿಶೇಷ ಗಮನ ನೀಡಲಾಗುತ್ತದೆ. ಹೂ, ತರಕಾರಿ, ಮೀನು, ಮಾಂಸ ಸಹಿತ ವಿವಿಧ ಮಾರಾಟಗಾರರಿಗೆ ನಿಗದಿತ ವ್ಯವಸ್ಥೆಗಳು, ಆಕರ್ಷಕ ಹೊರಭಾಗ, ಪೂರ್ಣ ಮಟ್ಟದ ಶೌಚಾಲಯ, ಮಾರುಕಟ್ಟೆಗೆ ಆಕರ್ಷಣೀಯ ಸ್ಪರ್ಶ ಸಹಿತ ಹಲವಾರು ವಿಶೇಷತೆಗಳು ಹೈಟೆಕ್‌ ಮಾರುಕಟ್ಟೆಯಲ್ಲಿ ದೊರೆಯಲಿದೆ.

ಹೊಸ ಮಾರುಕಟ್ಟೆ ನಿರ್ಮಾಣ
ಬಹುನಿರೀಕ್ಷೆಯ ಕಂಕನಾಡಿಯ ಹೊಸ ಮಾರುಕಟ್ಟೆ ನಿರ್ಮಾಣಕ್ಕೆ ಎಲ್ಲ ಸಿದ್ಧತೆ ನಡೆಸಲಾಗಿದೆ. ತಾತ್ಕಾಲಿಕ ಮಾರುಕಟ್ಟೆ ಸಿದ್ಧವಾಗಿದ್ದು, ಒಂದೆ ರಡು ದಿನದಲ್ಲಿ ಹಳೆ ಮಾರುಕಟ್ಟೆಯ ವ್ಯಾಪಾರಿ ಗಳು ಸ್ಥಳಾಂತರವಾಗಲಿ ದ್ದಾರೆ. ಬಳಿಕ ಹೊಸ ಮಾರುಕಟ್ಟೆ ಕಾಮ ಗಾರಿ ಆರಂಭವಾಗಲಿದೆ.
 -ನವೀನ್‌ಡಿ’ಸೋಜಾ, ಮನಪಾ ಸದಸ್ಯ

ತಾತ್ಕಾಲಿಕ ಮಾರುಕಟ್ಟೆಗೆ ಸ್ಥಳಾಂತರಕ್ಕೆ ಸೂಚನೆ
ಕಂಕನಾಡಿಯಲ್ಲಿ ತಾತ್ಕಾಲಿಕ ಮಾರುಕಟ್ಟೆ ನಿರ್ಮಾಣ ಪೂರ್ಣ ವಾಗಿದೆ. ಹಳೆ ಮಾರುಕಟ್ಟೆಯಲ್ಲಿ ವ್ಯಾಪಾರ ನಡೆಸುವವರು ತತ್‌ಕ್ಷಣವೇ ತಾತ್ಕಾಲಿಕ ಮಾರುಕಟ್ಟೆಗೆ ಸ್ಥಳಾಂತರವಾಗುವಂತೆ ಸೂಚನೆ ನೀಡಲಾಗಿದೆ. ಅಲ್ಲಿ ಸೂಕ್ತ ವ್ಯವಸ್ಥೆಗಳನ್ನು ಮಾಡಲಾಗಿದೆ. ಬಳಿಕ ಹಳೆ ಮಾರುಕಟ್ಟೆ ಕೆಡವಿ ಹೊಸ ಮಾರುಕಟ್ಟೆ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ.
ಶಾನಾಡಿ ಅಜಿತ್‌ ಕುಮಾರ್‌ ಹೆಗ್ಡೆ, ಆಯುಕ್ತರು ಮನಪಾ

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.