‘ರಸ ಮಂಟಮೆ’ ತುಳು ಸಂಸ್ಕೃತಿ ವೈಭವ


Team Udayavani, Jun 30, 2019, 5:53 AM IST

tulu

ಕಡಬ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ರಾಮ ಕುಂಜದ ನೇತ್ರಾವತಿ ತುಳುಕೂಟದ ಆಶ್ರಯದಲ್ಲಿ ರಾಮಕುಂಜದ ಶ್ರೀ ರಾಮ ಕುಂಜೇಶ್ವರ ಆಂಗ್ಲಮಾಧ್ಯಮ ಪ್ರೌಢಶಾಲೆಯ ಸಹಯೋಗದೊಂದಿಗೆ ರಾಮಕುಂಜದಲ್ಲಿ ಶನಿವಾರ ಜರಗಿದ ತುಳು ಕಲಿಕೆಯ ವಿದ್ಯಾರ್ಥಿಗಳು ಹಾಗೂ ವಿವಿಧ ತುಳುಕೂಟಗಳ ಸದಸ್ಯರ ತುಳು ಸಾಂಸ್ಕೃತಿಕ ಸ್ಪರ್ಧೆಗಳ ‘ರಸ ಮಂಟಮೆ’ ತುಳು ಸಂಸ್ಕೃತಿಯ ವೈಭವವನ್ನು ಸಾಕ್ಷೀಕರಿಸಿತು.

ಅವಿಭಜಿತ ದ.ಕ. ಜಿಲ್ಲೆಯ ವಿವಿಧ ಕಡೆಯಿಂದ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಹಾಗೂ ವಿವಿಧ ತುಳುಕೂಟಗಳ ಸದಸ್ಯರು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.

ತುಳು ಜಾನಪದ ಕವಿತೆ, ತುಳು ಭಾವಗೀತೆ, ತೆಂಗಿನ ಗರಿಯಲ್ಲಿ ಕರಕುಶಲ ವಸ್ತು ತಯಾರಿ, ತುಳು ಹಳ್ಳಿ ಜೀವನದ ಚಿತ್ರ ಬಿಡಿಸುವುದು, ತುಳು ಭಾಷಣ, ತುಳು ಜಾನಪದ ಕವಿತೆ, ತುಳು ಗಾದೆ, ತುಳು ಜಾನಪದ ಕುಣಿತ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಶ್ರೀ ರಾಮಕುಂಜ ಆಂಗ್ಲಮಾಧ್ಯಮ ಶಾಲೆಯಲ್ಲಿ ತೆರೆಯಲಾದ ತುಳುನಾಡ ಬಳಕೆಯ ಹಳೆಯ ವಸ್ತುಗಳ ಪ್ರದರ್ಶನ ತುಳುನಾಡಿನ ಗ್ರಾಮೀಣ ಸಂಸ್ಕೃತಿಯನ್ನು ಪ್ರತಿಬಿಂಬಿಸುವಂತಿತ್ತು.

ಸಾಧಕರಿಗೆ ಸಮ್ಮಾನ

ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ತುಳು ಶಿಕ್ಷಕಿ, ತುಳು ಸಂಸ್ಕೃತಿ, ಭಾಷೆಗೆ ಪ್ರೋತ್ಸಾಹ ನೀಡು ತ್ತಿರುವ ಸರಿತಾ ಜನಾರ್ದನ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು. ತುಳು ಸಂಸ್ಕೃತಿ, ತುಳು ಭಾಷೆಗೆ ಪ್ರೋತ್ಸಾಹ ನೀಡು ತ್ತಿರುವ ಕುಶಾಲಾಕ್ಷಿ ಕಣ್ವತೀರ್ಥ, ನಾರಾಯಣ ರೈ ಕುಕ್ಕುವಳ್ಳಿ, ವಿಜಯ ಲಕ್ಷ್ಮೀ ಕಟೀಲು, ನರೇಶ್‌ ಸಸಿಹಿತ್ಲು, ಅಕ್ಷತಾ ರಾಜ್‌ ಪೆರ್ಲ, ಚಿದಾನಂದ ನಾಯಕ್‌, ನಿವೃತ್ತ ಶಿಕ್ಷಕ ಗುಮ್ಮಣ್ಣ ಗೌಡ ರಾಮಕುಂಜ, ಉಮೇಶ್‌ ಶೆಟ್ಟಿ ಸಾಯಿರಾಂ, ಧನ್ಯಶ್ರೀ ಆಲಂಕಾರು, ಸುಮನಾ ಕೆರೆಕರೆ ಅವರನ್ನು ಗೌರವಿಸಲಾಯಿತು. ತುಳು ಪರಪೋಕು ಕರಜನಕ್ಕೆ (ತುಳುನಾಡ ಹಳೆಯ ವಸ್ತುಗಳ ಸಂಗ್ರಹ) ತುಳು ಸಂಸ್ಕೃತಿ ಬಿಂಬಿಸುವ ಹಳೆಯ ಸಾಮಗ್ರಿಗಳನ್ನು ಒದಗಿಸಿದ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರನ್ನೂ ಗುರುತಿಸಲಾಯಿತು. ಶಿಕ್ಷಕಿ ಜ್ಯೋತಿ ಸಮ್ಮಾನಿತರ ಹೆಸರು ವಾಚಿಸಿದರು.

‘ದೊಂಪದ ಬಲಿ’ ಪುಸ್ತಕ ಬಿಡುಗಡೆ

ನಿವೃತ್ತ ಶಿಕ್ಷಕ ಗೋಪಾಲ ಶೆಟ್ಟಿ ಕಳೆಂಜ ಬರೆದಿರುವ ‘ದೊಂಪದ ಬಲಿ’ ಪುಸ್ತಕವನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ ಬಿಡುಗಡೆಗೊಳಿಸಿದರು.

ಬೆಲ್ಲ, ನೀರಿನ ಸ್ವಾಗತ

ತುಳುವ ಸಂಪ್ರದಾಯದಂತೆ ಅತಿಥಿಗಳನ್ನು ಬೆಲ್ಲ, ನೀರು, ಅಡಿಕೆ ಮತ್ತು ವೀಳ್ಯದೆಲೆ ನೀಡಿ ತುಳುನಾಡ ಮುಂಡಾಸು ತೊಡಿಸಿ ಸ್ವಾಗತಿಸಲಾಯಿತು. ವಿದ್ಯುತ್‌ ದೀಪ ಇಲ್ಲದ ಹಿಂದಿನ ಕಾಲದಲ್ಲಿ ಮನೆಗಳನ್ನು ಬೆಳಗುತ್ತಿದ್ದ ಗ್ಯಾಸ್‌ಲೈಟ್ ಮಾದರಿಯ ಲಾಟೀನು ಉರಿಸುವ ಮೂಲಕ ಅತಿಥಿಗಳು ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ತೆಂಗಿನ ಮಡಲು ಉಪಯೋಗಿಸಿ ರಚಿಸಲಾಗಿದ್ದ ಪ್ರಧಾನ ವೇದಿಕೆಗೆ ತುಳುನಾಡ ಅವಳಿ ವೀರರಾದ ಕೋಟಿ-ಚೆನ್ನಯರ ಹೆಸರಿಡಲಾಗಿತ್ತು. ಸಭಾ ಕಾರ್ಯಕ್ರಮದ ಕೊನೆಗೆ ಹರಿವಾಣ, ತೆಂಗಿನಕಾಯಿ ಹಾಗೂ ಕಂಚಿನ ದೀಪ ನೀಡಿ ಅತಿಥಿಗಳನ್ನು ಸತ್ಕರಿಸಲಾಯಿತು.

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

2-kadaba

Kadaba ತಾಲೂಕು ಪಂಚಾಯತ್ ಕಚೇರಿಗೆ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.