ಪಡಿತರ ಚೀಟಿ: ಇ-ಕೆವೈಸಿಗೆ ಅಂತಿಮ ಅವಕಾಶ
Team Udayavani, Sep 2, 2021, 6:46 AM IST
ಉಡುಪಿ/ಮಂಗಳೂರು: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇ-ಕೆವೈಸಿ ಆಗದೆ ಇರುವ ಪಡಿತರ ಚೀಟಿಯ ಸದಸ್ಯರು ಸೆ. 10ರೊಳಗೆ ಸಮೀಪದ ನ್ಯಾಯಬೆಲೆ ಅಂಗಡಿಗಳಲ್ಲಿ ಬೆರಳಚ್ಚು ನೋಂದಾಯಿಸಿಕೊಳ್ಳಬಹುದು.
ಪರಿಶಿಷ್ಟ ಜಾತಿ, ಪಂಗಡದ ಪಡಿತರ ಚೀಟಿದಾರರು ಜಾತಿ ಪ್ರಮಾಣ ಪತ್ರ ಮತ್ತು ಅನಿಲ ಸಂಪರ್ಕ ಹೊಂದಿರುವ ಮಾಹಿತಿ, ಮೊಬೈಲ್ ಸಂಖ್ಯೆಯನ್ನು ನ್ಯಾಯಬೆಲೆ ಅಂಗಡಿಗೆ ಕಡ್ಡಾಯವಾಗಿ ಒದಗಿಸಬೇಕು ಎಂದು ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರ ಪ್ರಕ ಟನೆ ತಿಳಿಸಿದೆ.
2020ರ ಫೆಬ್ರವರಿ ಅನಂತರ ವಿತರಿಸಿರುವ ಹೊಸ ಹಾಗೂ ತಿದ್ದುಪಡಿ ಮಾಡಲಾದ ಪಡಿತರ ಚೀಟಿಗಳನ್ನು ಬಿಟ್ಟು ಮೊದಲ ಹಂತದಲ್ಲಿ ಇ-ಕೆವೈಸಿ ಮಾಡದಿರುವ ಅಂತ್ಯೋದಯ, ಆದ್ಯತಾ (ಬಿಪಿಎಲ್) ಹಾಗೂ ಆದ್ಯತೇತರ ಪಡಿತರ ಚೀಟಿಗಳಿಗೆ ಇ-ಕೆವೈಸಿ ಕಡ್ಡಾಯವಾಗಿ ಮಾಡಬೇಕಾಗಿದೆ. ಇ-ಕೆವೈಸಿಯನ್ನು ಉಚಿತವಾಗಿ ಮಾಡಲಾಗುತ್ತಿದೆ.
ಯಾರಾದರೂ ಹಣ ಕೇಳಿದಲ್ಲಿ ಅಥವಾ ಏನಾದರೂ ದೂರುಗಳಿದ್ದರೆ ಅಥವಾ ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ತಹಶೀಲ್ದಾರರು ಮತ್ತು ಮಂಗಳೂರಿನ ಅನೌಪಚಾರಿಕ ಪಡಿತರ ಪ್ರದೇಶದ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ