ರವಿ ಪೂಜಾರಿ ಬೆರಳಚ್ಚು ಮ್ಯಾಚ್‌: ಶೀಘ್ರ ಗಡೀಪಾರು?


Team Udayavani, Feb 2, 2019, 12:30 AM IST

c-24.jpg

ಮಂಗಳೂರು: ಪಶ್ಚಿಮ ಆಫ್ರಿಕಾದ ಸೆನಗಲ್‌ನಲ್ಲಿ ಬಂಧನಕ್ಕೊಳಗಾಗಿರುವ ಭೂಗತ ಪಾತಕಿ ಉಡುಪಿ ಮೂಲದ ರವಿ ಪೂಜಾರಿಯ ಚಹರೆ ಯನ್ನು ಆತನ ಬೆರಳಚ್ಚು ದಾಖಲೆಗಳು ದೃಢಪಡಿಸಿದ್ದು, ಆತ ಶೀಘ್ರದಲ್ಲೇ ಭಾರತಕ್ಕೆ ಗಡೀಪಾರು ಆಗುವ ಸಾಧ್ಯತೆಯಿದೆ.  “ಉದಯವಾಣಿ’ಗೆ ಸದ್ಯ ಲಭ್ಯವಾಗಿರುವ ಉನ್ನತ ಮೂಲಗಳ ಮಾಹಿತಿ ಪ್ರಕಾರ, ರವಿ ಪೂಜಾರಿ ಆಫ್ರಿಕಾದ ಸೆನಗಲ್‌ನಲ್ಲಿ ಇಂಡಿಯನ್‌ ರೆಸ್ಟೋರೆಂಟ್‌ ನಡೆಸುತ್ತಿದ್ದು, ಅಲ್ಲಿಗೆ ಆಗಾಗ ಬಂದು ಹೋಗುತ್ತಿದ್ದ. ಅದರಂತೆ ಆತನ ಚಲನವಲನಗಳನ್ನು ಇಂಟರ್‌ಪೋಲ್‌ ಮೂಲಕ ಬೆನ್ನು ಹತ್ತಿದ್ದ ಕರ್ನಾಟಕ ಹಾಗೂ ಭಾರತದ ವಿದೇಶಿ ಗುಪ್ತಚರ ಸಂಸ್ಥೆ ಅಧಿಕಾರಿಗಳು, ಸೆನಗಲ್‌ ದೇಶದ ಪೊಲೀಸರ ನೆರವಿನೊಂದಿಗೆ ರವಿ ಪೂಜಾರಿಯನ್ನು ಖೆಡ್ಡಾಕ್ಕೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.

ರವಿ ಪೂಜಾರಿಯನ್ನು ಎರಡು ವಾರಗಳ ಮೊದಲೇ ಅಂದರೆ ಜ. 21ರಂದು ಬರ್ಕಿನೋ ಪಾಸೊದಿಂದ ಸೆನಗಲ್‌ಗೆ ಆಗಮಿಸುತ್ತಿದ್ದ ವೇಳೆ ಬಂಧಿಸಲಾಗಿದೆ. ಆಗ ಆತ ಶ್ರೀಲಂಕಾ ದೇಶದ ನಕಲಿ ಪಾಸ್‌ಪೋರ್ಟ್‌ ಹೊಂದಿದ್ದ. ಈ ಹಿನ್ನೆಲೆಯಲ್ಲಿ ಆತನನ್ನು ಇಂಟರ್‌ ಪೋಲ್‌ ಮೂಲಕ ಭಾರತಕ್ಕೆ ಗಡೀಪಾರು ಮಾಡಬೇಕಾದರೆ ಮೊದಲಿಗೆ ಶ್ರೀಲಂಕಾದ ರಾಯಭಾರ ಕಚೇರಿಯನ್ನು ಸಂಪರ್ಕಿಸ ಬೇಕಾಗುತ್ತದೆ ಎಂದು ಉನ್ನತ ಮೂಲಗಳು ಸ್ಪಷ್ಟಪಡಿಸಿವೆ.

ಬೆರಳಚ್ಚು ಖಾತ್ರಿ
ಸಾಮಾನ್ಯವಾಗಿ ತಲೆಮರೆಸಿ ಕೊಂಡಿರುವ ನಮ್ಮ ದೇಶದ ಯಾವುದೇ ಆರೋಪಿಗಳು ಅದರಲ್ಲಿಯೂ ಭೂಗತ ಪಾತಕಿಗಳು ಹೊರ ದೇಶಗಳಲ್ಲಿ ಬಂಧನಕ್ಕೆ ಒಳಗಾಗುವ ವೇಳೆ ಆತನ ಚಹರೆಯನ್ನು ದೃಢಪಡಿಸಿಕೊಳ್ಳುವುದಕ್ಕೆ ಬೇಕಾದ ಸೂಕ್ತ ದಾಖಲೆಗಳನ್ನು ಅಲ್ಲಿನ ಪೊಲೀಸರಿಗೆ ಇಂಟರ್‌ ಪೋಲ್‌ ಮೂಲಕ ಕಳುಹಿಸಬೇಕಾಗುತ್ತದೆ. ಆ ಪ್ರಕಾರ ರವಿ ಪೂಜಾರಿಯ ಬೆರಳಚ್ಚು ಮಾದರಿಯನ್ನು ಈಗಾಗಲೇ ಇಂಟರ್‌ ಪೋಲ್‌ ಮೂಲಕ ಸೆನಗಲ್‌ ಪೊಲೀಸರಿಗೆ ಕಳುಹಿಸಲಾಗಿದೆ. ಅಲ್ಲದೆ ಆತನ ಬಂಧನವಾಗಿ ಈಗಾಗಲೇ ಎರಡು ವಾರ ಕಳೆದಿರುವ ಕಾರಣ ದೇಶದ ಉನ್ನತ ಪೊಲೀಸ್‌ ಅಧಿಕಾರಿಗಳ ತಂಡ ಸೆನಗಲ್‌ಗೆ ತೆರಳಿ ಗಡೀಪಾರು ಮಾಡಿಸಿಕೊಳ್ಳಲು ಬೇಕಾದ ಕಾನೂನು ಪ್ರಕ್ರಿಯೆ ನಡೆಸುತ್ತಿರಬಹುದು ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಮಂಗಳೂರು ಪೊಲೀಸರ ನೆರವು
ರವಿ ಪೂಜಾರಿ ಬಂಧನದಲ್ಲಿ ಮಂಗಳೂರು ನಗರ ಪೊಲೀಸರ ತಂಡವೂ ಮುಖ್ಯ ಪಾತ್ರ ವಹಿಸಿದೆ. 2013ರಲ್ಲಿ ದುಬಾೖಯಲ್ಲಿ ಆತನನ್ನು ಬಂಧಿಸುವುದಕ್ಕೆ ಇಂಟರ್‌ ಪೋಲ್‌ ಮೂಲಕ ಎಲ್ಲ ರೀತಿಯ ಸಿದ್ಧತೆ ನಡೆದಿತ್ತು. ಆದರೆ ಅಂತಿಮ ಹಂತದಲ್ಲಿ ಭಾರತೀಯ ವಿದೇಶಿ ಗುಪ್ತಚರ ತಂಡದ ಅಂದಿನ ಪ್ರಯತ್ನ ವಿಫಲವಾಗಿತ್ತು. ಆ ಬಳಿಕ  5 ವರ್ಷಗಳಿಂದೀಚೆಗೆ ರವಿ ಪೂಜಾರಿಯ ಚಲನ-ವಲನದ ಮೇಲೆ ಭಾರತೀಯ ವಿದೇಶಿ ಗುಪ್ತಚರ ಸಂಸ್ಥೆ ನಿಗಾ ವಹಿಸಿತ್ತು. ಅದರಂತೆ ಆತನ ಬಂಧನಕ್ಕೆ ಬೇಕಾಗುವ ಕೆಲವೊಂದು ಸುಳಿವು, ದಾಖಲೆಗಳನ್ನು ಬೆಂಗಳೂರು ಹಾಗೂ ಮಂಗಳೂರಿನ ಪೊಲೀಸರು ಒದಗಿಸಿದ್ದರು. ಹೀಗೆ ಹಲವು ವರ್ಷಗಳ ಸತತ ಪ್ರಯತ್ನದ ಬಳಿಕ ಇದೀಗ ಭೂಗತ ಪಾತಕಿ ರವಿ ಪೂಜಾರಿಯನ್ನು ಬಂಧಿಸುವಲ್ಲಿ ರಾಜ್ಯದ ಪೊಲೀಸರು ಕೂಡ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನಲಾಗಿದೆ.

ಬಂಧನ ಸುಳಿವು ಇತ್ತು !
ಮಂಗಳೂರಿನಲ್ಲಿ ಪ್ರಮುಖ ಚಿನ್ನಾಭರಣ ಮಾರಾಟ ಉದ್ಯಮಿಯೊಬ್ಬರಿಗೆ ರವಿ ಪೂಜಾರಿ ಹಾಗೂ ಆತನ ಸಹಚರರಿಂದ ಹಫ್ತಾ ನೀಡುವಂತೆ ಕಳೆದ ತಿಂಗಳು ಬೆದರಿಕೆ ಕರೆ ಬಂದಿದ್ದು, ನಗರ ಪೊಲೀಸರಿಗೆ ದೂರು ನೀಡಿದ್ದರು. ಇದೇ ವೇಳೆ ಮಂಗಳೂರು ಪೊಲೀಸರು ಕರಾವಳಿಯಲ್ಲಿ ರವಿ ಪೂಜಾರಿ ಹೊಂದಿರುವ ಭೂಗತ ನೆಟ್‌ವರ್ಕ್‌ಗಳ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದರು. ಜತೆಗೆ ಜೈಲಿನಲ್ಲಿರುವ ಭೂಗತ ಪಾತಕಿ ಬನ್ನಂಜೆ ರಾಜ ಕೂಡ ಸುಮಾರು 100 ಕೋಟಿ ರೂ. ಹಫ್ತಾ ವಸೂಲಿ ಮಾಡಿರುವ ಬಗ್ಗೆಯೂ ತನಿಖೆ ನಡೆಸುತ್ತಿದ್ದರು. ಈ ವಿಚಾರಗಳ ಬೆನ್ನು ಹತ್ತಿದ “ಉದಯವಾಣಿ’ಗೆ ಭೂಗತ ಪಾತಕಿಯ ಬಂಧನವಾಗುವ ಬಗ್ಗೆ ಮುನ್ಸೂಚನೆ ಲಭ್ಯವಾಗಿತ್ತು.

ಆ ಬಗ್ಗೆ ಪೊಲೀಸ್‌ ಅಧಿಕಾರಿಗಳಲ್ಲಿ ವಿಚಾರಿಸಿದಾಗ “ತನಿಖೆ ದೃಷ್ಟಿಯಿಂದ  ಈಗ ಏನೂ ಬರೆಯಬೇಡಿ’ ಎಂದು ಕೋರಿದ್ದರು. ಆ ಕಾರಣದಿಂದಾಗಿ ಕರಾವಳಿ ಭೂಗತ ಪಾತಕಿಗಳ ಬಗ್ಗೆ ಜ. 24ರಂದು “ಉದಯವಾಣಿ’ ಪತ್ರಿಕೆ ಪ್ರಕಟಿಸಿದ್ದ ವಿಶೇಷ ವರದಿಯಲ್ಲಿ ರವಿ ಪೂಜಾರಿ ಬಂಧನಕ್ಕೆ ಬಲೆಬೀಸಿರುವ ವಿಚಾರವನ್ನು ಉಲ್ಲೇಖೀಸಿರಲಿಲ್ಲ.

ಮಂಗಳೂರು: 32, ಉಡುಪಿ: 10 ಪ್ರಕರಣ
ಮಂಗಳೂರು/ಉಡುಪಿ,:
ರವಿ ಪೂಜಾರಿ ಮೇಲೆ ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲೇ 32 ಮತ್ತು ಉಡುಪಿ ಜಿಲ್ಲೆಯಲ್ಲಿ 10 ಪ್ರಕರಣಗಳು ದಾಖಲಾಗಿವೆ. ಪಡುಬಿದ್ರಿ, ಕಾರ್ಕಳ, ಬ್ರಹ್ಮಾವರ ಮತ್ತು ಉಡುಪಿ ಠಾಣೆಗಳಲ್ಲಿ ಹಫ್ತಾ ವಸೂಲಿ ಮತ್ತು ಜೀವಬೆದರಿಕೆ ಕುರಿತು ಪ್ರಕರಣಗಳಿವೆ. ಆತನ ವಿರುದ್ಧ 2012ರಲ್ಲಿ ರೆಡ್‌ಕಾರ್ನರ್‌ ನೋಟಿಸ್‌ ಜಾರಿಗೊಳಿಸಲಾಗಿತ್ತು. ಈ ನೋಟಿಸ್‌ ಐದು ವರ್ಷಗಳಿಗೊಮ್ಮೆ ನವೀಕರಣಗೊಳ್ಳುತ್ತಿದ್ದು, 2017ರಲ್ಲಿ  ನವೀಕರಣಗೊಂಡಿತ್ತು ಎಂದು ನಗರ ಪೊಲೀಸ್‌ ಕಮಿಷನರ್‌ ಟಿ.ಆರ್‌. ಸುರೇಶ್‌ ತಿಳಿಸಿದ್ದಾರೆ.

ರವಿ ಪೂಜಾರಿ ಉಡುಪಿ ಜಿಲ್ಲೆಯ ಕಟಪಾಡಿ ಮೂಲದವನಾಗಿದ್ದಾನೆ. ಆತನ ಇಬ್ಬರು ಸೋದರಿಯರು ಈ ಹಿಂದೆ ಮುಂಬಯಿಯಲ್ಲಿದ್ದು, ರವಿ ಪೂಜಾರಿಯ ಪತ್ತೆಗೆ ಸಂಬಂಧಿಸಿ ಪೊಲೀಸರು ಪದೇ ಪದೇ ಅವರ ಬಳಿ ಹೋಗಿ ವಿಚಾರಿಸುತ್ತಿದ್ದ  ಹಿನ್ನೆಲೆಯಲ್ಲಿ ಅವರಿಬ್ಬರೂ ತಮ್ಮ ವಾಸ್ತವ್ಯವನ್ನು ಬೇರೆ ಕಡೆಗೆ ಸ್ಥಳಾಂತರಿಸಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.