ರವಿ ಪೂಜಾರಿ ಭಾರತಕ್ಕೆ ಗಡೀಪಾರು ಸನ್ನಿಹಿತ !
Team Udayavani, Feb 25, 2019, 1:00 AM IST
ಮಂಗಳೂರು: ಭೂಗತ ಪಾತಕಿ ರವಿ ಪೂಜಾರಿಯನ್ನು ಭಾರತಕ್ಕೆ ಹಸ್ತಾಂತರಿಸುವುದಕ್ಕೆ ಅಗತ್ಯ ವಿರುವ ಮಹತ್ವದ ದಾಖಲೆಗಳನ್ನು ಸೆನಗಲ್ ದೇಶದ ಪೊಲೀಸರಿಗೆ ಸಲ್ಲಿಸುವಲ್ಲಿ ಮುಂಬಯಿ ಪೊಲೀಸರು ಯಶಸ್ವಿಯಾಗಿದ್ದು, ಗಡೀಪಾರಿಗೆ ದಿನಗಣನೆ ಆರಂಭವಾಗಿದೆ ಎನ್ನಲಾಗಿದೆ.
ಉನ್ನತ ಮೂಲಗಳ ಪ್ರಕಾರ ಮುಂಬಯಿ ಪೊಲೀಸರು ರವಿ ಪೂಜಾರಿಯ ಬೆರಳಚ್ಚು, ಡಿಎನ್ಎ ಮಾದರಿ ಸೇರಿದಂತೆ ಕೆಲವು ಮಹತ್ವದ ದಾಖಲೆಗಳನ್ನು ಈ ಮೊದಲೇ ಕಳುಹಿ ಸಿದ್ದರು. ಆ ಬಳಿಕ ಮಹಾರಾಷ್ಟ್ರದಲ್ಲಿ ಆತನ ಮೇಲಿರುವ ಹಲವಾರು ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದ ಮಾಹಿತಿ, ದಾಖಲೆಗಳನ್ನು ಇಂಗ್ಲಿಷ್ ಹಾಗೂ ಫ್ರೆಂಚ್ ಭಾಷೆಗೆ ತರ್ಜುಮೆ ಮಾಡಿ ಸೆನಗಲ್ ಪೊಲೀಸರಿಗೆ ಸಲ್ಲಿಸಿದ್ದಾರೆ.
ಅಧಿಕಾರಿ ವರ್ಗ
ಈ ನಡುವೆ ರವಿ ಪೂಜಾರಿಯನ್ನು ಖೆಡ್ಡಾಕ್ಕೆ ಬೀಳಿಸುವಲ್ಲಿ ಹಾಗೂ ಆತನ ಭೂಗತ ಚಟುವಟಿಕೆಗಳ ಬಗ್ಗೆ ಮಹತ್ವದ ಸುಳಿವು ನೀಡುವಲ್ಲಿ ರಾಜ್ಯ ಗುಪ್ತಚರ ವಿಭಾಗ ಎಡಿಜಿಪಿಯಾಗಿದ್ದ ಅಮರ್ ಕುಮಾರ್ ಪಾಂಡೆ ಮಹತ್ವದ ಪಾತ್ರ ವಹಿಸಿದ್ದರು. ಇಷ್ಟು ದೊಡ್ಡ ಹಾಗೂ ಮಹತ್ವದ ಪ್ರಕರಣದ ಕಾರ್ಯಾಚರಣೆ ಹಿಂದೆ ಕೆಲಸ ಮಾಡುತ್ತಿರಬೇಕಾದರೆ ಅಮರ್ ಕುಮಾರ್ ಪಾಂಡೆ ಅವರನ್ನು ರಾಜ್ಯ ಸರಕಾರ ಬೇರೆಡೆಗೆ ವರ್ಗಾಯಿಸಿದೆ.
ಈ ನಡುವೆ ಕಮಿಷನರೆಟ್ ವ್ಯಾಪ್ತಿಯಲ್ಲಿ ಆತನ ಪ್ರಕರಣಗಳ ಮಾಹಿತಿ ಕಲೆಹಾಕುವಲ್ಲಿ ಇಲ್ಲಿನ ಪೊಲೀಸರ ತಂಡಗಳು ಕಾರ್ಯಪ್ರವೃತ್ತವಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ