ಶಾಲಾ ನೂತನ ಕಟ್ಟಡ ಉದ್ಘಾಟನೆಗೆ ಸಜ್ಜು

ಕಟ್ಟಡವಿಲ್ಲದೆ ಅತಂತ್ರ ಸ್ಥಿತಿಯಲ್ಲಿದ್ದ ಮೂರಾಜೆ ಕೊಪ್ಪ ಶಾಲೆಯ ಮಕ್ಕಳು ನಿರಾಳ

Team Udayavani, Dec 10, 2022, 11:16 AM IST

4

ಕಡಬ: ಹಳೆಯ ಕಟ್ಟಡ ಶಿಥಿಲಗೊಂಡು ಹೊಸ ಕಟ್ಟಡ ಇಲ್ಲದೇ ಅತಂತ್ರ ಸ್ಥಿತಿ ಅನುಭವಿಸುತ್ತಿದ್ದ ಕೋಡಿಂಬಾಳ ಗ್ರಾಮದ ಮೂರಾಜೆ ಕೊಪ್ಪ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ 21.20 ಲಕ್ಷ ರೂ. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣಗೊಂಡಿದ್ದು, ಉದ್ಘಾಟನೆಗೆ ಸಜ್ಜಾಗಿದೆ.

ಕಟ್ಟಡ ಇಲ್ಲದೇ ಮೂರಾಜೆ ಕೊಪ್ಪ ಶಾಲೆ ಅತಂತ್ರ ಸ್ಥಿತಿಯಲ್ಲಿರುವ ಕುರಿತು ಉದಯವಾಣಿ ಸುದಿನ ಹಲವು ಬಾರಿ ಸಚಿತ್ರ ವರದಿಗಳನ್ನು ಪ್ರಕಟಿಸಿ ಜನಪ್ರತಿನಿಧಿಗಳ, ಇಲಾಖಾಧಿಕಾರಿಗಳ ಗಮನ ಸೆಳೆದಿತ್ತು. ಇಲಾಖಾಧಿಕಾರಿಗಳ ಮನವಿಯಂತೆ 2 ವರ್ಷಗಳ ಹಿಂದೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕೆರೆಕೊಡಿ ಹಳ್ಳಿ ಸ. ಕಿ.ಪ್ರಾ. ಶಾಲೆಗೆ ಮಂಜೂರಾಗಿದ್ದ ಅನುದಾನವನ್ನು ಬದಲಾಯಿಸಿ ಮೂರಾಜೆ ಕೊಪ್ಪ ಶಾಲೆಗೆ ನೀಡುವ ಮೂಲಕ ನೂತನ ಕಟ್ಟಡ ನಿರ್ಮಾಣದ ಕನಸು ನನಸಾಗಿದೆ.

ಒಟ್ಟು 41.20 ಲಕ್ಷ ರೂ. ಅನುದಾನ

ಶಾಲಾ ಕಟ್ಟಡ ಶಿಥಿಲಗೊಂಡ ಹಿನ್ನೆಲೆ ಹಲವು ವರ್ಷಗಳಿಂದ ಇಲ್ಲಿನ ವಿದ್ಯಾರ್ಥಿ ಗಳಿಗೆ ಸ್ಥಳೀಯ ಭಜನ ಮಂದಿರದಲ್ಲಿ ಪಾಠ ಮಾಡಲಾಗುತ್ತಿತ್ತು. ಜಾಗದ ಸಮಸ್ಯೆ ಯಿಂದಾಗಿ ಹೊಸ ಕಟ್ಟಡ ನಿರ್ಮಾಣಕ್ಕೆ ಅನುದಾನ ದೊರೆಯದೆ ಸಮಸ್ಯೆ ಎದುರಾಗಿತ್ತು. ಸ್ಥಳೀಯರು, ಇಲಾಖಾಧಿಕಾರಿಗಳ ನಿರಂತರ ಪ್ರಯತ್ನದಿಂದ ಕಂದಾಯ ಇಲಾಖೆಯು 26 ಸೆಂಟ್ಸ್‌ ಜಾಗವನ್ನು ಶಾಲೆಯ ಹೆಸರಿಗೆ ಪಹಣಿ ಮಾಡಿಕೊಟ್ಟಿತ್ತು.

ಬಳಿಕ ಸರಕಾರದಿಂದ 2 ತರಗತಿ ಕೊಠಡಿಗಳ ನೂತನ ಕಟ್ಟಡ ನಿರ್ಮಾಣಕ್ಕೆ 21.20 ಲಕ್ಷ ರೂ., ತಡೆ ಗೋಡೆ ರಚನೆಗೆ 5 ಲಕ್ಷ ರೂ., ಅಡುಗೆ ಕೋಣೆ ಮೇಲ್ಛಾವಣಿ ದುರಸ್ತಿಗೆ 2 ಲಕ್ಷ ರೂ., ಹೆಚ್ಚುವರಿಯಾಗಿ ಇನ್ನೊಂದು ತರಗತಿ ಕೊಠಡಿಗೆ 13 ಲಕ್ಷ ರೂ. ಅನು ದಾನ ಲಭಿಸಿತ್ತು. ಆ ಪೈಕಿ 2 ತರಗತಿ ಕೊಠಡಿ, ತಡೆಗೋಡೆ ನಿರ್ಮಾಣ ಪೂರ್ಣ ಗೊಂಡಿದೆ. ಅಡುಗೆ ಕೋಣೆ ಮೇಲ್ಛಾವಣಿ ದುರಸ್ತಿ, ಹೆಚ್ಚುವರಿ ಕೊಠಡಿ ನಿರ್ಮಾಣ ಕಾಮಗಾರಿ ಶೀಘ್ರ ಆರಂಭಗೊಳ್ಳಲಿದೆ.

ಇಂದು ಉದ್ಘಾಟನೆ:

ನೂತನ ಕಟ್ಟಡವನ್ನು ಸಚಿವ ಎಸ್‌. ಅಂಗಾರ ಅವರು ಡಿ. 10 ರಂದು ಅಪರಾಹ್ನ 3.30ಗಂಟೆಗೆ ಉದ್ಘಾಟಿಸಲಿದ್ದು, ಜನಪ್ರತಿನಿಧಿಗಳು, ಇಲಾಖಾಧಿಕಾರಿಗಳು ಭಾಗವಹಿಸಲಿದ್ದಾರೆ. ಕಟ್ಟಡದ ಗೋಡೆಯನ್ನು ಮಕ್ಕಳ ಕಲಿಕಾ ಆಸಕ್ತಿಯನ್ನು ಹೆಚ್ಚಿಸುವ ರೀತಿಯಲ್ಲಿ ಸುಂದರ ವರ್ಲಿ ಚಿತ್ತಾರಗಳು, ಪ್ರಾಣಿ ಪಕ್ಷಿಗಳ ಚಿತ್ರ, ಮಾಹಿತಿ ಫಲಕಗಳಿಂದ ಅಲಂಕರಿಸಲಾಗಿದೆ ಎಂದು ಮುಖ್ಯಶಿಕ್ಷಕ ಆನಂದಮೂರ್ತಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.