ಹೂಡಿಕೆಗೆ ರಿಯಲ್‌ ಎಸ್ಟೇಟ್‌ ಸೂಕ್ತ: ಡಾ| ಗಣೇಶ್‌ ಪೈ


Team Udayavani, Aug 28, 2017, 7:10 AM IST

2708mlr101.jpg

ಮಂಗಳೂರು: ಪ್ರಸ್ತುತ ಕಾಲಘಟ್ಟದಲ್ಲಿ ಹೂಡಿಕೆಗೆ ರಿಯಲ್‌ ಎಸ್ಟೇಟ್‌ ಕ್ಷೇತ್ರ ಅತ್ಯಂತ ಸೂಕ್ತ ಹಾಗೂ ಸುರಕ್ಷಿತವಾಗಿದೆ ಎಂದು ನಗರದ ಪ್ರಖ್ಯಾತ ಚರ್ಮರೋಗ ತಜ್ಞ ಡಾ| ಗಣೇಶ್‌ ಪೈ ಅವರು ಅಭಿಪ್ರಾಯಪಟ್ಟರು.

ಇನ್‌ಲ್ಯಾಂಡ್‌ಬಿಲ್ಡರ್ ಸಂಸ್ಥೆಯ ವತಿಯಿಂದ ನಗರದ ನವಭಾರತ ವೃತ್ತದ ಬಳಿ ಇರುವ “ಇನ್‌ಲ್ಯಾಂಡ್‌ ಓರ್ನೆಟ್‌’ನ ಇನ್‌ಲ್ಯಾಂಡ್‌ ಸೆನೆಟ್‌ ಹಾಲ್‌ನಲ್ಲಿ ರವಿವಾರ ಆಯೋಜಿಸಿದ್ದ “ವೈದ್ಯರಿಗೆ ಹೂಡಿಕೆ ಅವಕಾಶಗಳು’ ವಿಚಾರ ಸಂಕಿರಣದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಸೂಕ್ತ ಪ್ರತಿಫಲ: ಇನ್‌ಲ್ಯಾಂಡ್‌ ಗ್ರೂಪ್‌ನ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸಿರಾಜ್‌ ಅಹಮ್ಮದ್‌ ಅವರು ಮಾತನಾಡಿ, ವೈದ್ಯರಿಗೆ ಕಾರ್ಯದ ಒತ್ತಡದಿಂದಾಗಿ ಭವಿಷ್ಯದ ಯೋಜನೆಗಳನ್ನು ರೂಪಿ ಸಲು ಕಡಿಮೆ ಸಮಯ ಸಿಗುತ್ತದೆ. ಇದನ್ನು ಮನಗಂಡು ಇನ್‌ಲ್ಯಾಂಡ್‌ ಬಿಲ್ಡರ್ ವೈದ್ಯರಿಗೆ ಹೂಡಿಕೆ ಅವಕಾಶಬಗ್ಗೆ ವಿಚಾರಸಂಕಿರಣ ಹಮ್ಮಿಕೊಂಡಿದೆ ಎಂದರು.

ಸಂಸ್ಥೆಯು ಸದ್ಯದಲ್ಲೇ ಬಿಜೈಯಲ್ಲಿ ವೈದ್ಯರಿಗೆ ಅನುಕೂಲವಾಗುವ ಡಯಾಗ್ನೊಸ್ಟಿಕ್‌ ಸೆಂಟರ್‌ ಕಟ್ಟಡ ನಿರ್ಮಾಣ ಮಾಡಲಿದೆ ಎಂದು ತಿಳಿಸಿದರು.

ಗರಿಷ್ಠ ಪ್ರತಿಫಲ: ಸಂಸ್ಥೆಯ ಮಾರುಕಟ್ಟೆ ಹಾಗೂ ಮಾರಾಟ ವಿಭಾಗದ ಪ್ರಬಂಧಕ ಉಲ್ಲಾಸ್‌ ಕದ್ರಿ ಅವರು ಮಾತನಾಡಿ, ರಿಯಲ್‌ ಎಸ್ಟೇಟ್‌ ಕ್ಷೇತ್ರದಲ್ಲಿ ಹೂಡಿಕೆ ಕನಿಷ್ಠ ರಿಸ್ಕ್ನಲ್ಲಿ ಗರಿಷ್ಠ ಪ್ರತಿಫಲ ನೀಡುತ್ತದೆ. ಇನ್‌ಲಾÂಂಡ್‌ ಬಿಲ್ಡರ್ ಪ್ರತಿಯೋರ್ವರ ಬಜೆಟ್‌ಗಳಿಗೆ ಹೊಂದಿಕೆಯಾಗುವ ಯೋಜನೆಗಳನ್ನು ಬೆಂಗಳೂರು, ಮಂಗಳೂರು, ಪುತ್ತೂರು ಹಾಗೂ ಉಳ್ಳಾಲದಲ್ಲಿ ಹೊಂದಿದ್ದು ವಾಸದ ಮನೆ, ಹಾಲಿಡೇ ಹೋಮ್‌, ಬಾಡಿಗೆ ಮನೆಗಳ ಮೂಲಕ ಆದಾಯ ಗಳಿಕೆ ಮುಂತಾದುವುಗಳು ಸೇರಿದಂತೆ ಪರಿಪಕ್ವ ಹೂಡಿಕೆ ಪರಿಹಾರಗಳನ್ನು ಒದಗಿಸುತ್ತದೆ ಎಂದರು.

ಸಿಂಡಿಕೇಟ್‌ ಬ್ಯಾಂಕಿನ ಅಜಯ್‌ ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕಿನ ರಾಘವೇಂದ್ರ ಶೇಟ್‌ ಅವರು ಮನೆಗಳು ಹಾಗೂ ವಾಣಿಜ್ಯ ಮಳಿಗೆಗಳ ಖರೀದಿಗೆ ಸೌಲ ಸೌಲಭ್ಯಗಳ ಬಗ್ಗೆ ವಿವರಿಸಿದರು. ಇನ್‌ಲಾÂಂಡ್‌ ಬಿಲ್ಡರ್ ಪ್ರಬಂಧಕ ನಾಗರಾಜ್‌ ಸ್ವಾಗತಿಸಿದರು. ದೀಪಾ ವಂದಿಸಿದರು. ನಂದಿತಾ ನಿರ್ವಹಿಸಿದರು.

ಇನ್‌ಲ್ಯಾಂಡ್‌ನ‌ 
ವಿಶ್ವಾಸಾರ್ಹ ಪರಂಪರೆ

ಇನ್‌ಲ್ಯಾಂಡ್‌ ಬಿಲ್ಡರ್ ಸಂಸ್ಥೆ ಕಳೆದ 3 ದಶಕಗಳಿಂದ ರಿಯಲ್‌ ಎಸ್ಟೇಟ್‌ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಚಿರಪರಿಚಿತವಾಗಿದೆ. ಸುಂದರ, ಆಕರ್ಷಕ ಕಲಾತ್ಮಕ ವಿನ್ಯಾಸಗಳ ಗುಣಮಟ್ಟದ ವಸತಿ ಸಮುಚ್ಚಯ ಹಾಗೂ ವಾಣಿಜ್ಯ ಸಂಕೀರ್ಣಗಳನ್ನು ಮಂಗಳೂರು ನಗರಕ್ಕೆ ನೀಡಿದ್ದು ತನ್ನ ಕಾರ್ಯಕ್ಷೇತ್ರವನ್ನು ಬೆಂಗಳೂರಿಗೂ ವಿಸ್ತರಿಸಿದೆ. ಹೂಡಿಕೆದಾರರ ಹಿತವನ್ನು ಕಾಯ್ದುಕೊಳ್ಳುತ್ತಾ ವಿಶ್ವಾಸಾರ್ಹ ಸಂಸ್ಥೆಯಾಗಿ ಗುರುತಿಸಿಕೊಂಡಿದೆ ಎಂದು ಡಾ| ಗಣೇಶ್‌ ಪೈ ಅವರು ಶ್ಲಾಘಿಸಿದರು.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.