ದಾಖಲೆಯ ಸೂರ್ಯ ನಮಸ್ಕಾರ
Team Udayavani, Jan 22, 2018, 11:09 AM IST
ಮಂಗಳೂರು: ದಾಖಲೆ ಸಂಖ್ಯೆಯ ಸಾರ್ವಜನಿಕರ ಸಮ್ಮಿಲನದೊಂದಿಗೆ ಮಹಾ “ಸೂರ್ಯ ನಮಸ್ಕಾರ’ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ರವಿವಾರ ಮುಂಜಾನೆ ನಡೆಯಿತು. ಸಾವಿರಾರು ಸಾರ್ವಜನಿಕರು ಸೂರ್ಯ ನಮಸ್ಕಾರದಲ್ಲಿ ಪಾಲ್ಗೊಂಡರು.
ಸಂಸ್ಕಾರ- ಸಂಘಟನೆ- ಸೇವಾ ಕೈಂಕರ್ಯದ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ಎಸ್ಪಿವೈಎಸ್ಎಸ್) ಆಶ್ರಯದಲ್ಲಿ “ಆರೋಗ್ಯಕ್ಕಾಗಿ ಸೂರ್ಯ ನಮಸ್ಕಾರ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುಂಜಾನೆ 5.30ಕ್ಕೆ ಪ್ರಾರ್ಥನೆಯೊಂದಿಗೆ ನಿತ್ಯಾಭ್ಯಾಸ ಆರಂಭಗೊಂಡಿತು. ಯೋಗ ಶಿಕ್ಷಕರು ಸಾರ್ವಜನಿಕರಿಗೆ ಸೂರ್ಯ ನಮಸ್ಕಾರ ಮತ್ತು ಅದರ ಮಹತ್ವ ತಿಳಿಸಿದರು. 6.30ರಿಂದ ಸಾರ್ವಜನಿಕರು ಮತ್ತು ಯೋಗ ಬಂಧುಗಳನ್ನು ಒಳಗೊಂಡು ಸೂರ್ಯನಮಸ್ಕಾರ ಆರಂಭವಾಯಿತು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್, ಶಾರದಾ ಕಾಲೇಜಿನ ದಯಾ ನಂದ ಕಟೀಲು, ಪತಂಜಲಿ ವಿದ್ಯಾಪೀಠದ ಕರ್ನಾಟಕ ರಾಜ್ಯ ಮುಖ್ಯಸ್ಥ ಡಾ| ಜ್ಞಾನೇಶ್ವರ್ ನಾಯ್ಕ, ಎಸ್ಪಿವೈಎಸ್ಎಸ್ ಸಂಘಟನ ವಿಭಾಗದ ಪ್ರಾಂತ ಸಂಚಾಲಕ ರವೀಶ್ ಕುಮಾರ್, ಸಂಘಟಕ ನವನೀತ್ ಶೆಟ್ಟಿ ಕದ್ರಿ, ಜಿಲ್ಲಾ ಸಂಚಾಲಕ ಹರೀಶ್, ಜಿಲ್ಲಾ ವ್ಯವಸ್ಥಾ ಪ್ರಮುಖ್ ಲಕ್ಷ್ಮೀನಾರಾಯಣ ಉಪಸ್ಥಿತರಿದ್ದರು.
ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಆಶ್ರಯದಲ್ಲಿ “ಆರೋಗ್ಯಕ್ಕಾಗಿ ಸೂರ್ಯ ನಮಸ್ಕಾರ’ ಮಂಗಳೂರಿನಲ್ಲಿ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…