ಹೊಸಮಠ ಸೇತುವೆ ತಿರುವಿಗೆ ರಿಫ್ಲೆಕ್ಟರ್‌ ಅಳವಡಿಕೆ

ಸಂಪರ್ಕ ರಸ್ತೆಗೆ ಹಳದಿ ಬಣ್ಣದ ಪಟ್ಟಿ, ಸೂಚನ ಫಲಕ; ಹಂಪ್‌ ನಿರ್ಮಾಣಕ್ಕೂ ಕ್ರಮ

Team Udayavani, May 20, 2019, 6:00 AM IST

b-15

ಹೊಸಮಠ ನೂತನ ಸೇತುವೆಯ ಸಂಪರ್ಕರಸ್ತೆಯಲ್ಲಿನ ಅಪಾಯಕಾರಿ ತಿರುವಿನಲ್ಲಿ ಸೂಚನ ಫಲಕ, ಹಳದಿ ಬಣ್ಣದ ಪಟ್ಟಿ ಅಳವಡಿಸಲಾಗಿದೆ.

ಕಡಬ: ಹೊಸಮಠದ ಹೊಸ ಸೇತುವೆಯ ಕಡಬ ಭಾಗದ ಸಂಪರ್ಕ ರಸ್ತೆ ಸೇತುವೆಯನ್ನು ಸೇರುವಲ್ಲಿ ದೊಡ್ಡ ತಿರುವಿನಿಂದ ಕೂಡಿದ್ದು, ಅಪಾಯಕ್ಕೆ ಆಹ್ವಾನ ನೀಡುವಂತಿದೆ ಎನ್ನುವ ಉದಯವಾಣಿ ಸುದಿನ ವರದಿಗೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ (ಕೆಆರ್‌ಡಿಸಿಎಲ್‌) ಅಧಿಕಾರಿಗಳು ಸ್ಪಂದಿಸಿದ್ದು, ಸಂಪರ್ಕ ರಸ್ತೆಗೆ ಹಳದಿ ಪಟ್ಟಿ, ತಿರುವಿನ ರಸ್ತೆಗೆ ಹಾಗೂ ತಡೆಬೇಲಿಗೆ ರಿಫ್ಲೆಕ್ಟರ್‌ ಅಳವಡಿಸಿ ಅಪಾಯ ಸಂಭವಿಸದಂತೆ ಸೂಚನ ಫಲಕಗಳನ್ನು ನೆಟ್ಟಿದ್ದಾರೆ.

ಉದಯವಾಣಿ ಎಚ್ಚರಿಸಿತ್ತು…
ನೂತನ ಸೇತುವೆ ಹಾಗೂ ಸಂಪರ್ಕ ರಸ್ತೆಯ ಕಾಮಗಾರಿ ಉತ್ತಮವಾಗಿ ಪೂರ್ಣಗೊಂಡಿದ್ದರೂ ಸಂಪರ್ಕ ರಸ್ತೆ ಕಡಬ ಭಾಗದಿಂದ ಸೇತುವೆಯನ್ನು ಸೇರುವಲ್ಲಿನ ತಿರುವು ಅಪಾಯಕಾರಿಯಾಗಿರುವ ಬಗ್ಗೆ ಉದಯವಾಣಿ ಸುದಿನ ತನ್ನ ಮೇ 7ರ ಸಂಚಿಕೆಯಲ್ಲಿ ಸಚಿತ್ರ ವರದಿ ಪ್ರಕಟಿಸಿ, ನಿಗಮದ ಅಧಿಕಾರಿಗಳ ಗಮನ ಸೆಳೆದಿತ್ತು. ಪ್ರಸಿದ್ಧ ಪುಣ್ಯಕ್ಷೇತ್ರ ಸುಬ್ರಹ್ಮಣ್ಯವನ್ನು ಸಂಪರ್ಕಿಸುವ ರಾಜ್ಯ ರಸ್ತೆ ಆಗಿರುವುದರಿಂದ ಇಲ್ಲಿ ಹೆಚ್ಚಿನ ಸಂಖ್ಯೆಯ ವಾಹನ ಸಂಚಾರ ಇದ್ದು, ಅಪಘಾತ ಸಂಭವಿಸುವ ಸಾಧ್ಯತೆಗಳ ಬಗ್ಗೆ ವರದಿಯಲ್ಲಿ ಎಚ್ಚರಿಸಲಾಗಿತ್ತು.

ಮುಂದೆ ತಿರುವು ಹಾಗೂ ಸೇತುವೆ ಇದೆ ಎನ್ನುವ ಮುನ್ನೂಚನೆ ನೀಡುವ ಫಲಕ ಅಳವಡಿಸುವುದರೊಂದಿಗೆ ಹೊಸಮಠ ಪೇಟೆಯಿಂದ ಸೇತುವೆಯ ಹತ್ತಿರ ತಿರುವು ಆರಂಭವಾಗುವ ಮೊದಲು ಸಣ್ಣಮಟ್ಟಿನ ರಸ್ತೆ ಉಬ್ಬು ನಿರ್ಮಿಸಿ ದೂರದಿಂದಲೇ ರಸ್ತೆ ಉಬ್ಬು ವಾಹನ ಚಾಲಕರಿಗೆ ಕಾಣಿಸುವಂತೆ ಅದಕ್ಕೆ ಬಣ್ಣ ಬಳಿದು ರಿಫ್ಲೆಕ್ಟರ್‌ ಅಳವಡಿಸಿದರೆ ಉತ್ತಮ ಎನ್ನುವುದು ಸ್ಥಳೀಯರ ಅಭಿಪ್ರಾಯವನ್ನು ಉಲ್ಲೇಖೀಸಲಾಗಿತ್ತು. ವರದಿಗೆ ಸ್ಪಂದಿಸಿದ ನಿಗಮದ ಎಇಇ ಮಂಜುನಾಥ್‌ ಅವರು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು.

 ಕ್ರಮ ಕೈಗೊಳ್ಳಲಾಗಿದೆ
ಹೊಸಮಠದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸೇತುವೆಯ ಸಂಪರ್ಕ ರಸ್ತೆಯ ಇಕ್ಕೆಲೆಗಳಲ್ಲಿ ಮತ್ತು ಮಧ್ಯದಲ್ಲಿ ಬಣ್ಣದ ಪಟ್ಟಿ ಹಾಕಲಾಗಿದೆ. ಸೇತುವೆಯಲ್ಲಿ ಪಾದಚಾರಿಗಳಿಗಾಗಿ ನಿರ್ಮಿಸಿದ ಫುಟ್‌ಪಾತ್‌ಗೊàಡೆಗಳಿಗೂ ರಿಫ್ಲೆಕ್ಟರ್‌ ಅಳವಡಿಸಿದೆ. ಸಂಪರ್ಕ ರಸ್ತೆ ಸೇತುವೆಗೆ ಸೇರುವಲ್ಲಿ ಹಾಗೂ ಸಂಪರ್ಕ ರಸ್ತೆಯ ತಿರುವಿನಲ್ಲಿ ಝೀಬ್ರಾ ಕ್ರಾಸ್‌ ರೀತಿಯಲ್ಲಿ ಹಳದಿ ಬಣ್ಣದ ಪಟ್ಟಿ ಹಾಕಿ ಅದಕ್ಕೂ ರಿಫ್ಲೆಕ್ಟರ್‌ ಅಳವಡಿಸಿದೆ. ವಾಹನಗಳ ವೇಗ ನಿಯಂತ್ರಿಸಲು ರಸ್ತೆ ಉಬ್ಬು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ.
– ಮಂಜುನಾಥ್‌, ಎಇಇ, ಕೆಆರ್‌ಡಿಸಿಎಲ್‌

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.