ವಿದ್ಯುತ್‌ ಶಾಕಿಂಗ್‌ ಸ್ಥಳಗಳ ಮುಕ್ತಿಗೆ ಕ್ರಮ


Team Udayavani, Oct 6, 2018, 10:01 AM IST

6-october-1.gif

ಮಹಾನಗರ: ನಗರ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ವಿದ್ಯುತ್‌ ಸಂಪರ್ಕ ಹಾಗೂ ಸರಬರಾಜು ಅವ್ಯವಸ್ಥೆಯನ್ನು ತುರ್ತಾಗಿ ಸರಿಪಡಿಸುವುದಕ್ಕೆ ಸಂಬಂಧಪಟ್ಟ ಇಲಾಖೆಗಳ ಸಹಕಾರದೊಂದಿಗೆ ಮಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ (ಮೆಸ್ಕಾಂ) ಮುಂದಾಗಿದ್ದು, ಈ ಸಂಬಂಧ ಶುಕ್ರವಾರ ಮೆಸ್ಕಾಂ ಹಿರಿಯ ಅಧಿಕಾರಿಗಳು ಪಾಲಿಕೆಯ ಆಯುಕ್ತರನ್ನು ಭೇಟಿಯಾಗಿ ಅಗತ್ಯ ಕ್ರಮ ತೆಗೆದುಕೊಂಡಿದೆ.

ಮಂಗಳೂರು ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ವಿದ್ಯುತ್‌ ಸಂಪರ್ಕ ಹಾಗೂ ಸರಬರಾಜು ವ್ಯವಸ್ಥೆಯಲ್ಲಿ ಕೆಲವು ಕಡೆ ಕಂಡುಬಂದಿರುವ ಅವ್ಯವಸ್ಥೆಗಳ ವಾಸ್ತವಾಂಶ ಹಾಗೂ ಅವುಗಳನ್ನು ಸರಿಪಡಿಸಲು ಮೆಸ್ಕಾಂ ವತಿಯಿಂದ ಈಗ ತೆಗೆದುಕೊಳ್ಳುತ್ತಿರುವ ಪೂರಕ ಕ್ರಮಗಳ ಕುರಿತ ವರದಿಯೊಂದನ್ನು ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ಅವರಿಗೆ ಮೆಸ್ಕಾಂ ಅಧಿಕಾರಿಗಳು ಶುಕ್ರವಾರ ಸಲ್ಲಿಸಿದ್ದಾರೆ. ಆ ಮೂಲಕ, ನಗರ ವ್ಯಾಪ್ತಿಯಲ್ಲಿ ವಿದ್ಯುತ್‌ ಸರಬರಾಜು ಸಂಬಂಧ ಕೆಲವು ಕಡೆಗಳಲ್ಲಿ ಸಂಬಂಧಪಟ್ಟವರ ಗಮನಕ್ಕೆ ಬಾರದೆ ಹಾಗೂ ನಿರ್ಲಕ್ಷ್ಯಕ್ಕೆ ಒಳಗಾಗಿರುವ ವಿದ್ಯುತ್‌ ಶಾಕಿಂಗ್‌ ಸ್ಪಾಟ್‌ಗಳನ್ನು ತುರ್ತಾಗಿ ಸರಿಪಡಿಸಿ ಸಾರ್ವಜನಿಕರ ಸುರಕ್ಷೆ ಕಡೆಗೆ ಹೆಚ್ಚಿನ ಗಮನಹರಿಸಲು ಮೆಸ್ಕಾಂ ಸಹಿತ ಸಂಬಂಧಪಟ್ಟ ಇಲಾಖೆಗಳು ಮುಂದಾಗಿರುವುದು ಗಮನಾರ್ಹ.

ಈ ಹಿನ್ನೆಲೆಯಲ್ಲಿ ಐದು ದಿನಗಳಿಂದ ನಗರದ ಸಾರ್ವಜನಿಕ ಸ್ಥಳಗಳಲ್ಲಿ ವಿದ್ಯುತ್‌ ಸಂಪರ್ಕ ಹಾಗೂ ಸರಬರಾಜು ವ್ಯವಸ್ಥೆ ಯಲ್ಲಿ ಅಸಮರ್ಪಕ ನಿರ್ವಹಣೆಯಿಂದ ಸಾರ್ವಜನಿಕರಿಗೆ ಎದುರಾಗಿರುವ ಅಪಾಯದ ಬಗ್ಗೆ ಸಂಬಂಧ ಪಟ್ಟವರ ಗಮನಸೆಳೆಯಲು ಸುದಿನ ಕೈಗೊಂಡಿದ್ದ ವಿದ್ಯುತ್‌ -ಆಪತ್ತು ಇರಲಿ ಎಚ್ಚರ ಜಾಗೃತಿ ಅಭಿಯಾನವು ಫಲಶ್ರುತಿ ನೀಡಿರುವುದು ಶ್ಲಾಘನೀಯ. 

ಅಲ್ಲದೆ, ಮೆಸ್ಕಾಂ, ಪಾಲಿಕೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಕೂಡ ಸಾರ್ವಜನಿಕರು ವಿದ್ಯುತ್‌ ಸರಬರಾಜು ವ್ಯವಸ್ಥೆಯಲ್ಲಿ ಎದುರಿಸುತ್ತಿರುವ ಈ ಮಾದರಿಯ ಸಮಸ್ಯೆ ಸರಿಪಡಿಸುವಂತೆ ಈ ಅಭಿಯಾನದಲ್ಲಿ ಉಲ್ಲೇಖಿಸಿರುವ ವಿಚಾರವಾಗಿ ತಮ್ಮ ಬದ್ಧತೆ ಪ್ರದರ್ಶಿಸಿರುವುದು ಕೂಡ ಅಭಿನಂದನೀಯ. ಈ ಬಗ್ಗೆ ಸಾರ್ವಜನಿಕರಿಂದ ಬಹಳಷ್ಟು ದೂರುಗಳು ವ್ಯಕ್ತವಾಗಿದ್ದವು. ಅಭಿಯಾನಕ್ಕೆ ತುರ್ತು ಸ್ಪಂದಿಸಿರುವ ಮೆಸ್ಕಾಂ ಈ ನಿಟ್ಟಿನಲ್ಲಿ ಅವಶ್ಯ ಕ್ರಮಗಳನ್ನು ಕೈಗೊಂಡಿದೆ.

ಮೇಲ್ನೋಟಕ್ಕೆ ವಿದ್ಯುತ್‌ ಸರಬರಾಜಿನ ಹೊಣೆಯನ್ನು ಮೆಸ್ಕಾಂ ವಹಿಸಿಕೊಂಡಿದ್ದರೂ ನಗರದಲ್ಲಿ ಬೀದಿ ದೀಪಗಳ ನಿರ್ವಹಣೆ, ಅವುಗಳಿಗೆ ವಿದ್ಯುತ್‌ ಸರಬರಾಜಿಗೆ ಅಳವಡಿಸಿರುವ ತಂತಿ, ಎಲ್‌ಟಿಡಿ ಬಾಕ್ಸ್‌ ಸೇರಿದಂತೆ ಅವುಗಳ ಸುರಕ್ಷತೆ ನಿರ್ವಹಣೆಯನ್ನು ಪಾಲಿಕೆ ನೋಡಿಕೊಳ್ಳುತ್ತಿದೆ. ಪಾರ್ಕ್‌ಗಳಲ್ಲಿ ವಿದ್ಯುತ್‌ ಸರಬರಾಜಿನ ವ್ಯವಸ್ಥೆಯನ್ನು ತೋಟಗಾರಿಕೆ ಇಲಾಖೆ ನೋಡಿಕೊಳ್ಳುತ್ತಿದೆ. ಈ ರೀತಿ, ಮೂರ್‍ನಾಲ್ಕು ಇಲಾಖೆಗಳು ಒಟ್ಟಾಗಿ ಕ್ರಮಗಳನ್ನು ತೆಗೆದುಕೊಂಡರೆ ಮಾತ್ರ ಸಮಸ್ಯೆಗೆ ಪರಿಹಾರ ಸಿಗಲು ಸಾಧ್ಯ ಎನ್ನುವುದು ಮೆಸ್ಕಾಂನವರ ವಾದ.

ಪಾಲಿಕೆಯಿಂದ ತತ್‌ಕ್ಷಣ ಕ್ರಮ
ನಗರದಲ್ಲಿ ಪ್ರಮುಖವಾಗಿ ಬೀದಿದೀಪಗಳು ಪಾಲಿಕೆಯಿಂದ ನಿರ್ವಹಣೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೆಸ್ಕಾಂ ಮಂಗಳೂರು ವಲಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂಜಿನಿಯರ್‌ ಅವರು ಪಾಲಿಕೆ ಆಯುಕ್ತರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು ಕೆಲವು ಕಡೆಗಳಲ್ಲಿ ಬೀದಿದೀಪಗಳ ಕಂಟ್ರೋಲ್‌ ಪಾಯಿಂಟ್‌ಗಳಲ್ಲಿ ಇರುವ ಲೋಪಗಳನ್ನು ಗಮನಕ್ಕೆ ತಂದಿದ್ದಾರೆ. ಇದಕ್ಕೆ ತತ್‌ಕ್ಷಣ ಸ್ಪಂದಿಸಿರುವ ಪಾಲಿಕೆ ಆಯುಕ್ತರು ಕೂಡಲೇ ಕಾರ್ಯೋನ್ಮುಖವಾಗಿ ಲೋಪಕಂಡು ಬಂದಿರುವ ಬೀದಿದೀಪ ಕಂಟ್ರೋಲ್‌ ಪಾಯಿಂಟ್‌ಗಳನ್ನು ಬದಲಾಯಿಸುವ ಹಾಗೂ ದುರಸ್ತಿ ಪಡಿಸುವ ಕಾರ್ಯ ಒಂದು ವಾರದೊಳಗೆ ಪೂರ್ತಿಗೊಳಿಸುವುದಾಗಿ ತಿಳಿಸಿದ್ದಾರೆ. ಆದರಂತೆ ಈ ಕಾರ್ಯ ಈಗಾಗಲೇ ಆರಂಭಗೊಂಡಿದೆ.

ಮೆಸ್ಕಾಂ ತುರ್ತು ಅಧಿಕಾರಿಗಳಿಗೆ ಸೂಚನೆ
ಮೆಸ್ಕಾಂ ಸಾರ್ವಜನಿಕ ಸ್ಥಳಗಳಲ್ಲಿ ವಿದ್ಯುತ್‌ ಸಂಪರ್ಕ ಹಾಗೂ ಸರಬರಾಜು ವ್ಯವಸ್ಥೆ ನಿರ್ವಹಣೆಯಲ್ಲಿರುವ ಲೋಪಗಳನ್ನು ಪತ್ತೆ ಹಚ್ಚಿ ಸರಿಪಡಿಸುವ ನಿಟ್ಟಿನಲ್ಲಿ ಮೆಸ್ಕಾಂ ವಲಯ ಮುಖ್ಯ ಎಂಜಿನಿಯರ್‌ ಅವರು ನಗರದ ಎಲ್ಲ ಮೆಸ್ಕಾಂ ಅಧಿಕಾರಿಗಳ ತುರ್ತು ಸಭೆಯನ್ನು ಗುರುವಾರ ನಡೆಸಿದ್ದಾರೆ. ತತ್‌ಕ್ಷಣದಿಂದಲೇ ಮಂಗಳೂರು ನಗರದಲ್ಲಿ ಅಪಾಯಕಾರಿಯಾಗಿರುವ ಲೈನ್‌ಗಳನ್ನು ಗುರುತಿಸಿ ದುರಸ್ತಿಗೊಳಿಸಲು ಕ್ರಮವಹಿಸುವಂತೆ ಸೂಚಿಸಿದ್ದಾರೆ. 

5.5 ಅಡಿ ಎತ್ತರಕ್ಕೆ ಎಲ್‌ಟಿಡಿ ಬಾಕ್ಸ್‌
ಮೆಸ್ಕಾಂ ನಿಯಮದಂತೆ ಬೀದಿದೀಪಗಳ ಕಂಟ್ರೋಲ್‌ ಪಾಯಿಂಟ್‌ ಗಳು ನೆಲದಿಂದ 5.5 ಅಡಿ ಎತ್ತರದಲ್ಲಿರಬೇಕು ಎಂಬ ನಿಯಮವಿದೆ. ಇದರಂತೆ ಕಡಿಮೆ ಎತ್ತರದಲ್ಲಿರುವ ಎಲ್ಲ ಪಾಯಿಂಟ್‌ಗಳನ್ನು ನಿಗದಿತ ಎತ್ತರದಲ್ಲಿರುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯ ಎಂಜಿನಿಯರ್‌ ಮಂಜಪ್ಪ ಅವರು ತಿಳಿಸಿದ್ದಾರೆ.

15 ಲಕ್ಷ  ರೂ.ಮಂಜೂರು
ಪಾಲಿಕೆಯು ನಗರದ ಪ್ರಮುಖ ಬೀದಿಗಳಲ್ಲಿರುವ ಡಿವೈಡರ್‌ಗಳಲ್ಲಿನ ಅಸಮರ್ಪಕ ಬೀದಿ ದೀಪದ ನಿರ್ವಹಣೆಗೆಂದು ಪಾಲಿಕೆಯ ಸಾಮಾನ್ಯ ನಿಧಿಯಿಂದ 15 ಲಕ್ಷ ರೂ. ಮಂಜೂರು ಮಾಡಿದೆ. ಒಟ್ಟು ಮೂರು ಹಂತದಲ್ಲಿ ನಿರ್ವಹಣೆ ನಡೆಯಲಿದೆ. ಮೊದಲನೇ ಹಂತದಲ್ಲಿ ನಗರದಲ್ಲಿ ಪ್ರಮುಖ ಬೀದಿಗಳಲ್ಲಿ ಮತ್ತು ಜಂಕ್ಷನ್‌ ಗಳ ಬೀದಿ ದೀಪ ಜಂಕ್ಷನ್‌ ಪೆಟ್ಟಿಗೆಗಳನ್ನು ಬದಲಾಯಿಸಲಾಗುವುದು.
ದೇವರಾಜ್‌,
  ಪಾಲಿಕೆ ಸಹಾಯಕ ಕಾರ್ಯನಿರ್ವಾಹಕ
  ಅಭಿಯಂತರ

 ವಾರದೊಳಗೆ ದುರಸ್ತಿ
ಮಂಗಳೂರು ನಗರದಲ್ಲಿ ಬೀದಿದೀಪಗಳ ವಿದ್ಯುತ್‌ ಸಂಪರ್ಕ ವ್ಯವಸ್ಥೆಯಲ್ಲಿ ಅಳವಡಿಸಿರುವ ಕಂಟ್ರೋಲ್‌ ಪಾಯಿಂಟ್‌ಗಳಲ್ಲಿ ಕೆಲವು ಕಡೆ ಕಂಡುಬಂದಿರುವ ಅವ್ಯವಸ್ಥೆಗಳನ್ನು ಪಾಲಿಕೆ ಆಯುಕ್ತರ ಗಮನಕ್ಕೆ ತರಲಾಗಿದೆ. ಇದಕ್ಕೆ ಸ್ಪಂದಿರುವ ಆಯುಕ್ತರು ಒಂದು ವಾರದೊಳಗೆ ಇವುಗಳನ್ನು ಸರಿಪಡಿಸುವುದಾಗಿ ತಿಳಿಸಿದ್ದಾರೆ. ಅಪಾಯಕಾರಿ ಸ್ಥಿತಿಯಲ್ಲಿರುವ ವಿದ್ಯುತ್‌ ತಂತಿಗಳನ್ನು ಗುರುತಿಸಿ ತತ್‌ಕ್ಷಣ ಸರಿಪಡಿಸುವಂತೆ ಸೂಚನೆ ನೀಡಲಾಗಿದೆ. ನಗರಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು ವಿದ್ಯುತ್‌ ವ್ಯವಸ್ಥೆಯ ಸ್ಥಿತಿ ಹಾಗೂ ಅಪಾಯಕಾರಿ ಎಂದು ವರದಿಯಾಗಿರುವ ಸ್ಥಳಗಳು ಹಾಗೂ ಮೆಸ್ಕಾಂ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರಿಗೂ ಶುಕ್ರವಾರ ವರದಿ ಸಲ್ಲಿಸಲಾಗಿದೆ.
 - ಮಂಜಪ್ಪ, ಮುಖ್ಯ ಕಾರ್ಯನಿರ್ವಾಹಕ 
    ಎಂಜಿನಿಯರ್‌ ,
    ಮೆಸ್ಕಾಂ ಮಂಗಳೂರು ವಲಯ

 ಕೇಶವ ಕುಂದರ್‌

ಟಾಪ್ ನ್ಯೂಸ್

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Ra

50% ಮಿತಿ ರದ್ದು, ಎಷ್ಟು ಬೇಕೋ ಅಷ್ಟೇ ಮೀಸಲು:ರಾಹುಲ್‌ ಗಾಂಧಿ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.