ಮುಳುಗಡೆ ಕೃಷಿ ಭೂಮಿಗೆ ತಿಂಗಳೊಳಗೆ ಪರಿಹಾರ ವಿತರಣೆ?

ತುಂಬೆ ಅಣೆಕಟ್ಟಿನಲ್ಲಿ 6 ಮೀ. ನೀರು ಸಂಗ್ರಹ

Team Udayavani, Jan 13, 2020, 5:39 AM IST

0801KS12-PH

ಬಂಟ್ವಾಳ: ಮಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಕೆಯ ತುಂಬೆಯ ನೂತನ ಅಣೆಕಟ್ಟಿನಲ್ಲಿ 7 ಮೀಟರ್‌ ನೀರು ನಿಲ್ಲಿಸುವ ಕುರಿತು ಸರ್ವೇ ಆರಂಭಗೊಂಡಿದೆ. ಆದರೆ 6 ಮೀ. ನೀರು ನಿಲ್ಲಿಸಿದ್ದರಿಂದ ಮುಳುಗಡೆಯಾದ ರೈತರಿಗೆ ಇನ್ನೂ ಪೂರ್ಣ ಪ್ರಮಾಣದಲ್ಲಿ
ಪರಿಹಾರ ವಿತರಣೆಯಾಗಿಲ್ಲ. ಈ ತಿಂಗಳ ಅಂತ್ಯ ದೊಳಗೆ ದಾಖಲೆ ಸರಿಯಿರುವ ಬಹುತೇಕರಿಗೆ ಪರಿಹಾರಧನ ವಿತರಣೆ ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ಹೇಳುತ್ತಿದ್ದಾರೆ.

ಸಂತ್ರಸ್ತ ಕೃಷಿಕರಿಗೆ ಪರಿಹಾರ ನೀಡುವುದಕ್ಕಾಗಿ ಒಟ್ಟು 17.5 ಕೋ.ರೂ. ಮಂಜೂರುಗೊಂಡಿದ್ದು, ಪಾಲಿಕೆಯ ಅಧಿಕಾರಿಗಳ ಮಾಹಿತಿಯ ಪ್ರಕಾರ ಈ ತನಕ ಸುಮಾರು 10 ಕೋ.ರೂ. ವಿತರಣೆಯಾಗಿದೆ. ಈ ತಿಂಗಳೊಳಗೆ ಸುಮಾರು 20 ರೈತರಿಗೆ ವಿತರಿಸುವ ಗುರಿ ಇದೆ.

ಇಲ್ಲಿ ಖರೀದಿ ಪ್ರಕ್ರಿಯೆ ನಡೆಸಿಯೇ ಪರಿಹಾರ ವಿತರಣೆ ಯಾಗುವುದರಿಂದ ನಕ್ಷೆಗಳು ಸರಿಯಿಲ್ಲದೆ, ಮೈನರ್‌ ರೈಟ್ಸ್‌, ಹೆಸರುಗಳಲ್ಲಿ ವ್ಯತ್ಯಾಸವಿದ್ದರೆ ವಿಳಂಬವಾಗುತ್ತಿದೆ. ತುಂಬೆ ಡ್ಯಾಂ ಸಂತ್ರಸ್ತ ರೈತರ ಹೋರಾಟ ಸಮಿತಿಯು ಶೀಘ್ರ ಪರಿಹಾರ ಧನ ವಿತರಣೆಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಆಗ್ರಹಿಸಿದೆ.

65.68 ಎಕರೆ ಭೂ ಪ್ರದೇಶ
ಅಣೆಕಟ್ಟಿನಲ್ಲಿ 6 ಮೀ. ನೀರು ನಿಲ್ಲಿಸಿದ ಪರಿಣಾಮ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು, ಪಾಣೆಮಂಗಳೂರು, ಬಿ. ಮೂಡ ಮತ್ತು ಕಳ್ಳಿಗೆ ಹೀಗೆ 4 ಗ್ರಾಮಗಳ ಸುಮಾರು ಒಟ್ಟು 65.68 ಎಕರೆ ಭೂ ಪ್ರದೇಶ ಜಲಾವೃತವಾಗಿದೆ. 4ರಿಂದ 5 ಮೀ. ನೀರು ನಿಲ್ಲಿಸಿದಾಗ 20.53 ಎಕರೆ ಕೃಷಿ ಭೂಮಿ ಜಲಾವೃತವಾಗಿದ್ದು, 28 ಹಿಡುವಳಿದಾರರು ಸಂತ್ರಸ್ತರಾಗಿದ್ದರು. 5ರಿಂದ 6 ಮೀ. ನೀರು ನಿಲ್ಲಿಸಿದಾಗ 45.11 ಎಕರೆ ಕೃಷಿ ಭೂಮಿ ಜಲಾವೃತವಾಗಿದ್ದು, 63 ರೈತರ ಜಮೀನು ಸೇರಿತ್ತು.

ಸುಮಾರು 30 ಅರ್ಜಿಗಳು ಬಾಕಿಯಿದ್ದು, ಒಂದೇ ಕುಟುಂಬದ ಎರಡೆರಡು ಅರ್ಜಿಗಳಿರುವ ಪ್ರಕರಣಗಳಿವೆ. ಏಳೆಂಟು ಅರ್ಜಿಗಳು ವಿವಾದ ಹೊಂದಿವೆ. ಇವನ್ನು ಹೊರತು ಪಡಿಸಿ ಅವಶ್ಯವಿರುವ ಕೆಲವು ದಾಖಲೆ ನೀಡಿದರೆ ಇತ್ಯರ್ಥ ಸಾಧ್ಯವಿರುವ ಸುಮಾರು 20 ಅರ್ಜಿಗಳ ಶೀಘ್ರ ವಿಲೇವಾರಿಗೆ ಪ್ರಯತ್ನ ನಡೆಯುತ್ತಿದೆ. ಆದರೆ 12 ರೈತರು ಯಾವುದೇ ದಾಖಲೆ ನೀಡದೆ ಇರುವುದರಿಂದ ಪರಿಹಾರ ನೀಡುವ ಪ್ರಯತ್ನ ನಡೆದಿಲ್ಲ ಎನ್ನುತ್ತಾರೆ ಅಧಿಕಾರಿಗಳು.

ರೈತರಿಗೆ ಈಗಾಗಲೇ ಸುಮಾರು 10 ಕೋ.ರೂ. ಪರಿಹಾರ ನೀಡಲಾಗಿದೆ. ದಾಖಲೆ ನೀಡಿದರೆ 5-6 ಮೀ.ನೊಳಗೆ ಬರುವ ಸುಮಾರು 20 ರೈತರಿಗೆ ಈ ತಿಂಗಳಿನ ಅಂತ್ಯದೊಳಗೆ ಪರಿಹಾರ ನೀಡುತ್ತೇವೆ. ಇಲ್ಲದಿದ್ದರೆ ಮತ್ತೂಂದು ಸಭೆ ಕರೆದು ಚರ್ಚೆ ನಡೆಸಬೇಕಿದೆ. ಇಲ್ಲಿ ಭೂಮಿಯ ಮಾರಾಟ ಪ್ರಕ್ರಿಯೆ ನಡೆಯುವುದರಿಂದ ದಾಖಲೆಗಳಲ್ಲಿ ಕೊಂಚ ಗೊಂದಲ ಕಂಡುಬಂದರೂ ಪರಿಹಾರ ನೀಡಲು ಸಾಧ್ಯವಾಗುವುದಿಲ್ಲ.
– ಗಾಯತ್ರಿ ನಾಯಕ್‌
ವಿಶೇಷ ಭೂ ಸ್ವಾಧೀನಾಧಿಕಾರಿ, ಮಂಗಳೂರು ಮನಪಾ

ದಾಖಲೆಯೇ ನೀಡಿಲ್ಲ !
4-5 ಮೀ. ನೀರು ನಿಲ್ಲಿಸಿದಾಗ ಮುಳುಗಿದ ಕೃಷಿಭೂಮಿಯ ಪೈಕಿ ವಿವಾದಿತ ಭೂಮಿ ಹೊರತುಪಡಿಸಿ ಉಳಿದ ಎಲ್ಲ ಸಂತ್ರಸ್ತರಿಗೂ ಸುಮಾರು 5 ಕೋ.ರೂ.ಗಳಷ್ಟು ಪರಿಹಾರ ನೀಡಿದೆ. ಕಳೆದ ಬಾರಿ 5-6 ಮೀ.ವರೆಗೆ ನೀರು ನಿಲ್ಲಿಸಲಾಗಿದ್ದು, 21 ರೈತರ ಅರ್ಜಿಗಳ ನೋಂದಣಿ ಪೂರ್ಣಗೊಂಡಿದೆ.

– ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.