ರೆಂಜಿಲಾಡಿ ಆರೋಗ್ಯ ಉಪಕೇಂದ್ರ: ಕೂಡಿಬಾರದ ಕಟ್ಟಡ ಭಾಗ್ಯ
ಜಮೀನು ಕಾದಿರಿಸಿದ್ದರೂ ಅನುದಾನ ಇಲ್ಲ ; ಬಾಡಿಗೆ ಕಟ್ಟಡದಲ್ಲಿ ಆರೋಗ್ಯ ಸೇವೆ
Team Udayavani, Feb 15, 2020, 5:35 AM IST
ಕಲ್ಲುಗುಡ್ಡೆ: ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ರೆಂಜಿಲಾಡಿ ಗ್ರಾಮದ ಉದ್ದೇಶಿತ ಆರೋಗ್ಯ ಉಪಕೇಂದ್ರ ಕಟ್ಟಡಕ್ಕೆ ಸ್ಥಳ ಕಾದಿರಿಸಲಾಗಿದ್ದರೂ ಇನ್ನೂ ಸರಕಾರದಿಂದ ಅನುದಾನ ಬಿಡುಗಡೆಯಾಗದೆ ಇರುವುದರಿಂದ ಉಪಕೇಂದ್ರ ಕಟ್ಟಡ ಕನಸಾಗಿಯೇ ಉಳಿದಿದೆ. ಪ್ರಸ್ತುತ ಬಾಡಿಗೆ ಕಟ್ಟಡದಲ್ಲಿ ಆರೋಗ್ಯ ಸೇವೆ ನೀಡಲಾಗುತ್ತಿದೆ.
ಹಲವಾರು
ವರ್ಷಗಳ ಆಗ್ರಹ
ರೆಂಜಿಲಾಡಿ ಗ್ರಾಮದಲ್ಲಿ ಆರೋಗ್ಯ ಉಪಕೇಂದ್ರ ಪ್ರಾರಂಭಿಸಬೇಕೆಂಬ ಗ್ರಾಮಸ್ಥರ ಹಲವಾರು ವರ್ಷಗಳ ಆಗ್ರಹದಂತೆ ಉಪಕೇಂದ್ರ ಮಂಜೂರಾಗಿತ್ತು. ಆರೋಗ್ಯ ಸಹಾಯಕಿಯೋರ್ವರನ್ನು ನೇಮಿಸಲಾಗಿದೆ. ಆದರೆ ಜಾಗದ ಸಮಸ್ಯೆಯಿಂದಾಗಿ ಅಂದಿನಿಂದ ಇಂದಿನವರೆಗೂ ಆರೋಗ್ಯ ಕೇಂದ್ರ ಕಟ್ಟಡ ಪ್ರಾರಂಭಕ್ಕೆ ವಿಘ್ನಗಳೇ ಎದುರಾಗುತ್ತಿತ್ತು.
ನೂಜಿಬಾಳ್ತಿಲ ಗ್ರಾಮಸಭೆಗಳಲ್ಲಿ ಪ್ರತೀ ಬಾರಿಯು ಆರೋಗ್ಯ ಉಪಕೇಂದ್ರದ ಬಗ್ಗೆ ಚರ್ಚೆಗಳು ನಡೆದು, ಗದ್ದಲಗಳೇ ನಡೆಯುತ್ತಿತ್ತು. ನಿರ್ಣಯವನ್ನೂ ಕೈಗೊಳ್ಳಲಾಗಿತ್ತು. ಅಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ಕೂಡಲೇ ಆರೋಗ್ಯ ಕೇಂದ್ರ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎನ್ನುತ್ತಿದ್ದಾರೆಯೇ ವಿನಾ ಕಾರ್ಯಗತಗೊಂಡಿಲ್ಲ ಎನ್ನುತ್ತಾರೆ ಗ್ರಾಮಸ್ಥರು.
ಮೂರು ವರ್ಷದಿಂದ ಕಾರ್ಯ ಸ್ತಬ್ಧ!
ಜಾಗದ ಸಮಸ್ಯೆಯಿಂದ ಕಟ್ಟಡ ಪ್ರಾರಂಭಕ್ಕೆ ಸಾಧ್ಯವಾಗದಿದ್ದ ಸಂದರ್ಭ ಸ್ಥಳೀಯ ಗ್ರಾ.ಪಂ. ಸದಸ್ಯರ ಮುತುವರ್ಜಿಯಿಂದ ಪಂಚಾಯತ್ ನೆರವಿನೊಂದಿಗೆ ರೆಂಜಿಲಾಡಿ ಗ್ರಾಮದ ಮೀನಾಡಿಯಲ್ಲಿ ಆರೋಗ್ಯ ಉಪಕೇಂದ್ರಕ್ಕೆ ಸರ್ವೆ ನಂಬರ್ 73ರಲ್ಲಿ 0.10 ಎಕ್ರೆ ಸ್ಥಳವನ್ನು ಖಾಸಗಿಯವರಿಂದ ಪಡೆದು ಕಂದಾಯ ಇಲಾಖೆಯಿಂದ ಸ್ಥಳ ಪರಿಶೀಲಿಸಿ, ಉಪಕೇಂದ್ರದ ಹೆಸರಿಗೆ ಪಹಣಿ ಪತ್ರ ಹಾಗೂ ನಕಾಶೆ ತಯಾರಿಸಿ ಗಡಿ ಗುರುತು ಮಾಡಿ ಜಮೀನಿಗೆ ಸೂಕ್ತ ಬೇಲಿ ಹಾಕಿ ಬಂದೋಬಸ್ತ್ ವ್ಯವಸ್ಥೆಯನ್ನು ಮೂರು ವರ್ಷಗಳ ಹಿಂದೆಯೇ ಮಾಡಲಾಗಿದ್ದರೂ ಉಪಕೇಂದ್ರ ಕಟ್ಟಡ ನಿರ್ಮಾಣಕ್ಕೆ ಅನುದಾನದ ಬಗ್ಗೆ ಯಾವುದೇ ಮಾಹಿತಿ ಆರೋಗ್ಯ ಇಲಾಖೆಯಿಂದ ಇನ್ನೂ ಬಂದಿಲ್ಲ.
ಪ್ರಸ್ತಾವನೆ ಸಲ್ಲಿಸಿದ್ದೇವೆ
ಆರೋಗ್ಯ ಉಪಕೇಂದ್ರಕ್ಕೆ ಕಟ್ಟಡದ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಿದ್ದೇವೆ. ಅನುದಾನ ಬಿಡುಗಡೆಗೊಂಡ ಬಳಿಕ ಮುಂದಿನ ಕಾರ್ಯಕ್ಕೆ ಚಾಲನೆ ನೀಡಲಿದ್ದೇವೆ.
– ಡಾ| ರಾಮಕೃಷ್ಣ
ದ.ಕ. ಜಿಲ್ಲಾ ಆರೋಗ್ಯಾಧಿಕಾರಿ
-ದಯಾನಂದ ಕಲ್ನಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ