ಸಂತ್ರಸ್ತರಿಗೆ ಗರಿಷ್ಠ ಪರಿಹಾರ ಸಿಗುವಂತೆ ವರದಿ ಸಲ್ಲಿಸಿ

ಕಂದಾಯ, ಜಿಲ್ಲಾ ಪಂಚಾಯತ್‌ ಅಧಿಕಾರಿಗಳಿಗೆ ಸಚಿವ ಖಾದರ್‌ ಸೂಚನೆ

Team Udayavani, Jun 2, 2019, 6:00 AM IST

c-16

ಪ್ರಕೃತಿ ವಿಕೋಪ, ಕುಡಿಯುವ ನೀರಿನ ಸಮಸ್ಯೆ ಪರಿಹಾರ ಕುರಿತಾದ ಸಭೆಯಲ್ಲಿ ಸಚಿವ ಯು.ಟಿ. ಖಾದರ್‌ ಅವರು ಮಾತನಾಡಿದರು.

ಸುಳ್ಯ: ಪ್ರಕೃತಿ ವಿಕೋಪದ ನಷ್ಟವನ್ನು ಭಾಗಶಃ ಎಂದು ಪರಿಗಣಿಸದೆ, ಸಂತ್ರಸ್ತ ರಿಗೆ ಅನುಕೂಲಕರ ರೀತಿಯಲ್ಲಿ ನ್ಯಾಯಬದ್ಧ ವರದಿ ತಯಾರಿಸಿ ಗರಿಷ್ಠ ಪರಿಹಾರ ಒದಗಿ ಸಲು ಸಹಕಾರ ನೀಡುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಕೃತಿ ವಿಕೋಪ ಮತ್ತು ಕುಡಿಯುವ ನೀರಿನ ಸಮಸ್ಯೆ ಪರಿಹಾರ ಕುರಿತಂತೆ ತಾ.ಪಂ.ನಲ್ಲಿ ಶನಿವಾರ ಸಚಿವರ ಅಧ್ಯಕ್ಷತೆ ಯಲ್ಲಿ ಸಭೆ ನಡೆಯಿತು. ಹಾನಿ ಉಂಟಾದ ಸಂದರ್ಭ ಸ್ಥಳಕ್ಕೆ ತೆರಳಿ ಮನೆ ಮಂದಿ ಪರಿಸ್ಥಿತಿ ಅವಲೋಕಿಸಿ, ಆ ಕುಟುಂಬಕ್ಕೆ ಪ್ರಯೋಜನ ಆಗುವಂತೆ ವರದಿ ತಯಾರಿ ಸಬೇಕು. ಎಲ್ಲವನ್ನು ನಿಯ ಮದ ಚೌಕಟ್ಟಿನಲ್ಲಿ ಅಳೆಯದೆ ಮಾನವೀ ಯತೆ ಮೂಲಕ ನೆರವಾಗುವಂತೆ ಗ್ರಾಮ ಕರಣಿಕರಿಗೆ, ಜಿ.ಪಂ. ಎಂಜಿನಿಯರ್‌ಗಳಿಗೆ ಸಚಿವರು ಸೂಚಿಸಿದರು.

ಇದೇ ವಿಷಯ ಪ್ರಸ್ತಾವಿಸಿದ ಶಾಸಕ ಅಂಗಾರ, ಕಂದಾಯ ಅಧಿ ಕಾರಿಗಳು, ಜಿಲ್ಲಾ ಪಂಚಾ ಯತ್‌ ಎಂಜಿನಿಯರ್‌ಗಳು ನಷ್ಟ ಅಂದಾಜಿಸುವಾಗ ಒಂದೇ ರೀತಿಯ ವರದಿ ನೀಡ ಬೇಕು. ನಷ್ಟವನ್ನು ಬೇರೆ ಬೇರೆ ರೀತಿಯಲ್ಲಿ ದಾಖಲಿಸಿದರೆ ಫಲಾನುಭವಿಗಳಿಗೆ ತೊಂದರೆ ಆಗುತ್ತದೆ. ಹಾಗಾಗಿ ಸಚಿವರ ಸೂಚನೆ ಪಾಲಿಸುವಂತೆ ಅವರು ಹೇಳಿದರು.

ಖಾಸಗಿ ಕಟ್ಟಡ, ಕಾಂಪೌಂಡ್‌ ಕುಸಿದು ಜೀವ ಹಾನಿ, ಇತರ ನಷ್ಟ ಉಂಟಾದಲ್ಲಿ ಅದರ ಮಾಲಕನ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು. ನಿರ್ಲಕ್ಷéದಿಂದ ಅಮಾಯಕರಿಗೆ ತೊಂದರೆ ಉಂಟಾಗಬಾರದು. ಇಂತಹ ಪ್ರಕರಣ ಕಂಡು ಬಂದಲ್ಲಿ ಕಠಿನ ಕ್ರಮ ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಆದೇಶಿಸಿದರು.

ಪಯಸ್ವಿನಿಗೆ ಕಿಂಡಿ ಅಣೆಕಟ್ಟು
ನಗರದ ನೀರಿನ ಸಮಸ್ಯೆ ಬಗ್ಗೆ ನ.ಪಂ. ಸದಸ್ಯ ಎಂ. ವೆಂಕಪ್ಪ ಗೌಡ ಪ್ರಸ್ತಾವಿಸಿ, ಶುದ್ಧೀಕರಣ ಘಟಕದ ಲೋಪ, ವೆಂಟೆಡ್‌ ಡ್ಯಾಂ ಇಲ್ಲದೆ ನಗರದ ಜನರಿಗೆ ಕುಡಿಯುವ ನೀರಿನ ಅಭಾವ ಉಂಟಾಗಿದೆ. ಕಲುಷಿತ ನೀರು ಬಳಸುವ ಸ್ಥಿತಿ ಇದೆ. ಕುಡಿಯುವ ನೀರಿನ ಒದಗಣೆಗೆ ಶಾಶ್ವತ ಯೋಜನೆ ಅನುಷ್ಠಾನವಾಗಬೇಕು ಎಂದರು.

ಪಯಸ್ವಿನಿ ಸಹಿತ ಎಲ್ಲ ನದಿ, ಹೊಳೆಗಳಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡಬೇಕು ಎಂದು ಜಿ.ಪಂ. ಸದಸ್ಯ ಎಸ್‌.ಎನ್‌. ಮನ್ಮಥ ಹೇಳಿದರು. ರಾಜ್ಯ ನೀರು ಮತ್ತು ಒಳಚರಂಡಿ ಮಂಡಳಿ ಮೂಲಕ ಸಲ್ಲಿಸಲಾದ 66 ಕೋ.ರೂ. ಯೋಜನೆ ಸರಕಾರದ ಹಂತದಲ್ಲಿ ಇದ್ದು, ಅನುದಾನ ಬಿಡುಗಡೆಗೆ ಬಾಕಿ ಇರುವ ಬಗ್ಗೆ ಶಾಸಕ ಅಂಗಾರ ಸಚಿವರ ಗಮನಕ್ಕೆ ತಂದರು. ಎರಡು ತಾಲೂಕಿನ 9 ಕಡೆ ಪಶ್ಚಿಮವಾಹಿನಿ ಯೋಜನೆಯಡಿ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಪಶ್ಚಿಮವಾಹಿನಿ ಯೋಜನೆಯಡಿ ಪಯಸ್ವಿನಿ ನದಿಗೆ ಕಿಂಡಿ ಅಣೆಕಟ್ಟು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು. ಪ್ರಸ್ತಾವನೆ ಸಲ್ಲಿಸುವಂತೆ ನ.ಪಂ. ಅಧಿಕಾರಿಗಳಿಗೆ ಸೂಚಿಸಿದರು.

ಚರಂಡಿ ದುರಸ್ತಿ ಮಾಡಿ
ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಚರಂಡಿ ದುರಸ್ತಿಗೆ ತತ್‌ಕ್ಷಣ ಪೂರ್ಣಗೊಳ್ಳಬೇಕು ಎಂದು ಸೂಚಿಸಿದ ಸಚಿವರು, ನಗರದ ಚರಂಡಿ ಸ್ಥಿತಿಗತಿ ಬಗ್ಗೆ ವಿವರ ಕೇಳಿದರು. ಉತ್ತರಿಸಿದ ಎಂಜಿನಿಯರ್‌, 20 ವಾರ್ಡ್‌ಗಳಲ್ಲಿ ಚರಂಡಿ ದುರಸ್ತಿಗೆ ಟೆಂಡರ್‌ ಪೂರ್ಣಗೊಂಡು ವರ್ಕ್‌ ಆರ್ಡರ್‌ ನೀಡಲಾಗಿದೆ. ಜೂ. 2ರಿಂದ ಕಾಮಗಾರಿ ಆರಂಭಗೊಳ್ಳಲಿದೆ ಎಂದರು. ನಗರದ ಎಸ್‌ವಿಎಂ ಆಸ್ಪತ್ರೆ ರಸ್ತೆ ಬಳಿ, ಹಾಸ್ಟೆಲ್‌ ಮೊದಲಾದೆಡೆ ಚರಂಡಿ ಹೂಳು ಎತ್ತಬೇಕು. ಇಲ್ಲದಿದ್ದರೆ ಮಳೆ ನೀರು ಹರಿಯದು. ಅದನ್ನು ತೆಗೆದು ಬೇರೆ ಕಡೆ ಡಂಪ್‌ ಮಾಡಬೇಕು ಎಂದು ಶಾಸಕ ಅಂಗಾರ ಸೂಚನೆ ನೀಡಿದರು.

ತಾಲೂಕು ಆರೋಗ್ಯಾಧಿಕಾರಿ ಡಾ| ಸುಬ್ರಹ್ಮಣ್ಯ ಮಾತನಾಡಿ, ಈ ತನಕ ಜ್ವರ ಪ್ರಕರಣ ದಾಖಲಾಗಿಲ್ಲ. ಸೊಳ್ಳೆ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಲ್ಲಿ 5, ಗ್ರಾ.ಪಂ.ಗಳಲ್ಲಿ 4, ನ.ಪಂ.ನಲ್ಲಿ 1 ಫಾಗಿಂಗ್‌ ಯಂತ್ರಗಳು ಇವೆ ಎಂದರು. ನಗರದಲ್ಲಿ ಫಾಗಿಂಗ್‌ ಆಗಿಲ್ಲ. ತತ್‌ಕ್ಷಣ ಮಾಡಬೇಕು ಎಂದು ವೆಂಕಪ್ಪ ಗೌಡ ಹೇಳಿದರು. ಜ್ವರ ಬಂದಲ್ಲಿ ತತ್‌ಕ್ಷಣ ವೈದ್ಯರನ್ನು ಸಂಪರ್ಕಿಸುವ ಬಗ್ಗೆ ಜಾಗೃತಿ ಮೂಡಿಸಬೇಕು. ನಗರದೆಲ್ಲೆಡೆ ಫಾಗಿಂಗ್‌ ಆರಂಭಿಸುವಂತೆ ಖಾದರ್‌ ಸೂಚಿಸಿದರು. ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಇ.ಒ. ಮಧು ಕುಮಾರ್‌ ಉಪಸ್ಥಿತರಿದ್ದರು.

ನಿರ್ವಹಣ ತಂಡ ರಚನೆ
ಪ್ರಾಕೃತಿಕ ವಿಕೋಪ ಪರಿಸ್ಥಿತಿ ನಿಭಾಯಿಸಲು ತಾಲೂಕು ಆಡಳಿತ ಯಾವ ರೀತಿ ಸಿದ್ಧವಾಗಿದೆ ಎಂಬ ಬಗ್ಗೆ ತಹಶೀಲ್ದಾರ್‌ ಉತ್ತರಿಸಿ, 28 ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪ ನಿರ್ವಹಣ ತಂಡ ರಚಿಸಲಾಗಿದೆ. ಅಗತ್ಯ ಸಂದರ್ಭದಲ್ಲಿ ಬೇಕಾದ ಪರಿಕರಗಳನ್ನು ಸಂಗ್ರಹಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರಿಗೆ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.