ಜನಪ್ರತಿನಿಧಿಗಳ ಕ್ರೀಡಾಕೂಟ


Team Udayavani, Oct 4, 2017, 3:58 PM IST

4-MNG-13.jpg

ಉಪ್ಪಿನಂಗಡಿ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಗ್ರಾಮ, ಪಟ್ಟಣ, ನಗರ ಹಾಗೂ ಜಿಲ್ಲಾ ಪಂಚಾಯತ್‌ ಸಹಿತ ಸ್ಥಳೀಯ ಆಡಳಿತದ ಸದಸ್ಯರಿಗಾಗಿ ಅ. 29ರಂದು ಉಡುಪಿ ಜಿಲ್ಲೆ ಕೋಟತಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಹೊಳಪು-2017 ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ, ಕ್ರೀಡಾಕೂಟ ಸಮಿತಿ ಸಂಚಾಲಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಉಪ್ಪಿನಂಗಡಿ ಗ್ರಾ.ಪಂ. ಸಭಾಂಗಣದಲ್ಲಿ ಉಪ್ಪಿನಂಗಡಿ ಸದಸ್ಯರಿಗೆ ಮಂಗಳವಾರ ಆಮಂತ್ರಣ ಪತ್ರ ನೀಡಿದ ಬಳಿಕ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಕ್ರೀಡಾಕೂಟದ ಮೂಲಕ ಎರಡು ಜಿಲ್ಲೆಗಳ ಜನಪ್ರತಿನಿಧಿಗಳು ತಮ್ಮ ವ್ಯಾಪ್ತಿಯಲ್ಲಿ ಇರುವ ಸಮಸ್ಯೆಗಳ ಬಗ್ಗೆ ಸಮಾಲೋಚನೆಗೂ ಇದು ಪಕ್ಷ ರಹಿತವಾಗಿ ವೇದಿಕೆ ಒದಗಿಸಲಿದೆ. ಆ ಮೂಲಕ ಗ್ರಾಮ ಪಂಚಾಯತ್‌ ವ್ಯವಸ್ಥೆಯನ್ನು ಗಟ್ಟಿ ಮಾಡಿ, ಸಬಲೀಕರಣದತ್ತ ದಿಟ್ಟ ಹೆಜ್ಜೆ ಇಡಲಿದೆ ಎಂದರು.

ಕ್ರೀಡಾಕೂಟದಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಯಿಂದ ಸುಮಾರು 5,000 ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. 100 ಮೀಟರ್‌ ಓಟ, ಗುಂಡು ಎಸೆತ, ರಿಂಗ್‌ ಇನ್‌ ದಿ ವಿಕೆಟ್‌ (ವಿಕೆಟ್‌ಗೆ ರಿಂಗ್‌ ಹಾಕುವುದು). ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸೂಪರ್‌ ಮಿನಿಟ್‌, ಗಾಯನ, ಛದ್ಮವೇಷ, ರಸಪ್ರಶ್ನೆ (3 ಜನರ ತಂಡ) ಇರುತ್ತವೆ. 100 ಮಂದಿ
ದೈಹಿಕ ಶಿಕ್ಷಣ ಶಿಕ್ಷಕರು ತೀರ್ಪುಗಾರರಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಕ್ರೀಡಾಕೂಟವನ್ನು ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಎಚ್‌.ಕೆ. ಪಾಟೀಲ್‌ ಉದ್ಘಾಟಿಸಲಿದ್ದಾರೆ. ಕೇಂದ್ರ
ಸಚಿವ ಡಿ.ವಿ. ಸದಾನಂದ ಗೌಡ ಧ್ವಜ ವಂದನೆ ನೆರವೇರಿಸಲಿದ್ದಾರೆ. 

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌, ಆರೋಗ್ಯ ಸಚಿವ ಯು.ಟಿ. ಖಾದರ್‌ ಸಹಿತ ಎರಡು ಜಿಲ್ಲೆಗಳ ಶಾಸಕರು, ಜಿ.ಪಂ. ಅಧ್ಯಕ್ಷರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸ್ಥಳೀಯಾಡಳಿತ ಸಂಸ್ಥೆಗಳ ಎಲ್ಲ ಜನಪ್ರತಿನಿಧಿಗಳು ಪಾಲ್ಗೊಳ್ಳಬೇಕು ಎಂದು ಮನವಿ
ಮಾಡಿದರು.

ಡಿಸಿಯೊಂದಿಗೆ ಚರ್ಚಿಸುವೆ
ದ.ಕ. ಜಿಲ್ಲೆಯಲ್ಲಿ ಮರಳು ಅಭಾವದಿಂದಾಗಿ ಬಸವ ವಸತಿ ಯೋಜನೆ ಮನೆಗಳ ಕಾಮಗಾರಿ, ಇತರ ಅಭಿವೃದ್ಧಿ ಕೆಲಸಗಳು ಸ್ಥಗಿತವಾಗಿರುವುದನ್ನು ಸದಸ್ಯರು ಶ್ರೀನಿವಾಸ ಪೂಜಾರಿ ಅವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಶ್ರೀನಿವಾಸ್‌, ಶುಕ್ರವಾರ ದ.ಕ. ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಲಿದ್ದು, ಸಮಸ್ಯೆಗಳ ಬಗ್ಗೆ ಅವರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

ಸಮಾರಂಭದಲ್ಲಿ ಗ್ರಾ.ಪಂ. ಅಧ್ಯಕ್ಷ ಕೆ. ಅಬ್ದುಲ್‌ ರಹಿಮಾನ್‌, ಜಿ.ಪಂ. ಸದಸ್ಯೆ ಶಯನಾ ಜಯಾನಂದ, ತಾ.ಪಂ. ಸದಸ್ಯರಾದ ಸುಜಾತಾ ಕೃಷ್ಣ, ಮುಕುಂದ ಗೌಡ, ಗ್ರಾ.ಪಂ. ಉಪಾಧ್ಯಕ್ಷೆ ಹೇಮಲತಾ ಶೆಟ್ಟಿ, ಸದಸ್ಯರಾದ ಸುನೀಲ್‌ ದಡ್ಡು, ಸುರೇಶ್‌ ಅತ್ರಮಜಲು, ಯು.ಕೆ. ಇಬ್ರಾಹಿಂ, ರಮೇಶ್‌ ಭಂಡಾರಿ, ಭಾರತಿ, ಸುಂದರಿ, ಸುಶೀಲಾ, ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಸಮಿತಿ ಸದಸ್ಯ ಡಾ| ರಾಜಾರಾಮ್‌, ಉಪ್ಪಿನಂಗಡಿ ಸರಕಾರಿ ಶಾಲಾ ಎಸ್‌.ಡಿ.ಎಂ.ಸಿ. ಅಧ್ಯಕ್ಷ ಮೊದಿನ್‌ ಕುಟ್ಟಿ, ಜಯಂತ ಪೊರೋಳಿ, ಉಷಾ ಮುಳಿಯ, ಮಹಮ್ಮದ್‌ ಕೆಂಪಿ, ಸಿದ್ದಿಕ್‌ ಕೆಂಪಿ ಉಪಸ್ಥಿತರಿದ್ದರು.ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಅಬ್ದುಲ್ಲಾ ಅಸಾಫ್ ಸ್ವಾಗತಿಸಿ, ಕಾರ್ಯದರ್ಶಿ ಶಾರದಾ ಅವರು ವಂದಿಸಿದರು.

ಶ್ರೀನಿವಾಸ ಪೂಜಾರಿ ಭೇಟಿ
ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಉಪ್ಪಿನಂಗಡಿ ಗ್ರಾ.ಪಂ.ಗೆ ಆಗಮಿಸುವ ಮುನ್ನ ಬಜತ್ತೂರು ಹಾಗೂ ಹಿರೇಬಂಡಾಡಿ ಗ್ರಾಮ ಪಂಚಾಯತ್‌ ಕಚೇರಿಗಳಿಗೆ ಭೇಟಿ ನೀಡಿ, ಅಲ್ಲಿನ ಸದಸ್ಯರಿಗೂ ಆಮಂತ್ರಣ ಪತ್ರಿಕೆ ನೀಡಿದರು.

ಟಾಪ್ ನ್ಯೂಸ್

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ; ಪ್ರಕರಣ ದಾಖಲು

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.