ದೇಶದ ಹಿತಚಿಂತನೆಯೇ ಮುಖ್ಯ, ಮತಧರ್ಮ, ನಾಮಾಂಕಿತಗಳಲ್ಲ: ಅಣ್ಣಾಮಲೈ

ಆಳ್ವಾಸ್‌ನಲ್ಲಿ ಗಣರಾಜ್ಯೋತ್ಸವದ ಸಂಭ್ರಮ

Team Udayavani, Jan 27, 2020, 5:20 AM IST

2601MOOD3ALVAS-REPUBLIC-2

ಮೂಡುಬಿದಿರೆ: ಸ್ವಂತ ಹೆಸರು, ಮತಧರ್ಮಗಳಿಗಿಂತ ದೇಶದ ಹಿತ ಚಿಂತನೆ ಮುಖ್ಯ. ಈ ದೇಶದಿಂದ ಬಹಳಷ್ಟನ್ನು ಪಡೆದ ನಾವು ಪ್ರತಿಯಾಗಿ ದೇಶಕ್ಕೆ ಏನು ಕೊಡುಗೆ ಕೊಡಬಲ್ಲೆವು ಎಂದು ಚಿಂತಿಸಬೇಕಾಗಿದೆ ಎಂದು ಮಾಜಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ಹೇಳಿದರು.

ಆಳ್ವಾಸ್‌ ಎಜುಕೇಶನ್‌ ಫೌಂಡೇಶನ್‌ ಆಶ್ರಯದಲ್ಲಿ 71ನೇ ಗಣರಾಜ್ಯೋತ್ಸವದಲ್ಲಿ ರಾಷ್ಟ್ರಧ್ವಜರೋಹಣ ನೆರವೇರಿಸಿ ಅವರು ಮಾತನಾಡಿದರು.

40 ಕೋಟಿ ಹಸಿದ ಹೊಟ್ಟೆಗಳು
ಅಬ್ದುಲ್‌ ಕಲಾಂ ಕಂಡ 2020 ಕನಸು ನನಸಾಗಿಲ್ಲ. 130 ಕೋಟಿ ಜನಸಂಖ್ಯೆ ಇರುವ ಈ ದೇಶದಲ್ಲಿ 40 ಕೋಟಿ ಮಂದಿ ಹಸಿದ ಹೊಟ್ಟೆಯಲ್ಲೇ ಇದ್ದಾರೆ. ಹದಿಮೂರುವರೆ ಲಕ್ಷ ಯೋಧರು ದೇಶದ ಗಡಿರಕ್ಷಣೆ ಮಾಡುತ್ತಿದ್ದಾರೆ. ಇದರೊಂದಿಗೆ ನಮ್ಮ ದೇಹದ ಆರೋಗ್ಯ ರಕ್ಷಣೆ ಕಾಪಾಡಿಕೊಳ್ಳಲು ಸರಕಾರ ವ್ಯವಸ್ಥೆ ಮಾಡಿದೆ. ಆದರೆ, ದೇಶ ಚೆನ್ನಾಗಿರಲು ನಾವೇನು ಮಾಡಿದ್ದೇವೆ ಎಂಬುದನ್ನು ಚಿಂತಿಸಬೇಕಾಗಿದೆ. ದೇಶದ ಅಶಾಂತಿ , ಗೊಂದಲ ನಿವಾರಣೆಗೆ ಹಣ, ಸಮಯ, ಜ್ಞಾನ ವಿನಿಯೋಗಿಸಲು, ಹೆಣ್ಮಕ್ಕಳ ಮಾನ, ಪ್ರಾಣ ರಕ್ಷಣೆ ಮಾಡಲು ನಾವು ಮುಂದೆ ಬರಬೇಕಾಗಿದೆ ಎಂದು ಅವರು ಹೇಳಿದರು.

ಪುಟ್ಟ ಪುಟ್ಟ ಸೇವೆ ಎಂಬುದೇ ಕರ್ತವ್ಯ
ದೇಶ ಕಟ್ಟುವ, ದೇಶವಾಸಿಗಳನ್ನು ಚಾರಿತ್ರ್ಯವಂತರನ್ನಾಗಿಸುವ, ಮೌಲ್ಯಗಳನ್ನು ಬಿತ್ತಿ ಬೆಳೆಸುವ ಸಂಘಸಂಸ್ಥೆಗಳು ನಮಗಿಂದು ಬೇಕಾಗಿವೆ. ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ ಆಳ್ವಾಸ್‌ ಒಂದು ಆದರ್ಶ ವಿದ್ಯಾಲಯವಾಗಿ ರೂಪಿತವಾಗಿದೆ.

ಆಳ್ವಾಸ್‌ ಶಿಕ್ಷಣಾಲಯ ಕೇವಲ ಶಿಕ್ಷಣಕ್ಕೆ ಸೀಮಿತವಾಗಿಲ್ಲ, ಉತ್ತಮ ನಡತೆ, ಮೌಲ್ಯಗಳೊಂದಿಗೆ ದೇಶ ಕಟ್ಟುವ ಕಾರ್ಯವನ್ನೂ ಮಾಡುತ್ತಿದೆ, ಅದರ ಒಂದು ಸ್ವರೂಪವೇ ಇಂದಿನ ಗಣರಾಜ್ಯೋತ್ಸವ ಎಂದು ವಿಶೇಷವಾಗಿ ಉಲ್ಲೇಖೀಸಿದರು.

ಅತಿಥಿಗಳನ್ನು ಕೆಡೆಟ್‌ ಕ್ಯಾಪ್ಟನ್‌ ಚಂದನ ಎಸ್‌., ಪಿಟಿ ಆಫೀಸರ್‌ಗಳಾದ ಕೀರ್ತನಾ ಶೆಟ್ಟಿ, ಶರಣ್ಯ ಎಂ.ಎನ್‌, ಸೇಜಲ್‌ ಅವರು ವೇದಿಕೆಗೆ ಕರೆತಂದರು. ಪೆರೇಡ್‌ ಕಮಾಂಡರ್‌ ಸೀನಿಯರ್‌ ಅಂಡರ್‌ ಆಫೀಸರ್‌ ಮುತ್ತಮ್ಮ ವರದಿ ನೀಡಿದರು. ಗಾರ್ಡ್‌ ಕಮಾಂಡರ್‌ ಜೂನಿಯರ್‌ ಅಂಡರ್‌ ಆಫೀಸರ್‌ ಮನೋಜ್‌ ನೇತƒತ್ವದಲ್ಲಿ ಆಕರ್ಷಕ ಪಥ ಸಂಚಲನ ನಡೆಯಿತು.

ಆಕರ್ಷಕ ಪಥಸಂಚಲನ
2400 ಕೆಡೆಟ್‌ಗಳು
ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗಿನ ವಿವಿಧ ಕಾಲೇಜುಗಳ ಭೂಸೇನೆ, ನೌಕಾದಳ ಮತ್ತು ವಾಯುದಳ ಇವುಗಳ 2,400 ಎನ್‌ಸಿಸಿ ಕೆಡೆಟ್‌ಗಳು, ಎನ್‌ಸಿಸಿ ಬೆಟಾಲಿಯನ್‌ಗಳ ಕ್ಯಾಪ್ಟನ್‌ಗಳು, 400 ರೋವರ್‌- ರೇಂಜರ್‌ ಹಾಗೂ ಸ್ಕೌಟ್ಸ್‌- ಗೆ„ಡ್ಸ್‌ ವಿದ್ಯಾರ್ಥಿಗಳು, 1,300 ಎನ್‌ಎಸ್‌ ಎಸ್‌ ವಿದ್ಯಾರ್ಥಿಗಳ ಆಕರ್ಷಕ ಪಥ ಸಂಚಲನ ಸುಮಾರು 20 ನಿಮಿಷಗಳ ಕಾಲ ನಡೆಯಿತು.

30,000 ಮಂದಿ ಸಾಕ್ಷಿ
ಆಳ್ವಾಸ್‌ನ ಸಿಬಂದಿ, ವಿದ್ಯಾರ್ಥಿಗಳು ಸೇರಿ 25,000, ಪಾಲಕರು, ಸಾರ್ವಜನಿಕರು 5000 ಹೀಗೆ 30,000 ಮಂದಿ ಆಳ್ವಾಸ್‌ನ ಆಕರ್ಷಕ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಪಾಲ್ಗೊಂಡರು.

ಎನ್‌ಸಿಸಿ ಗ್ರೂಪ್‌ ಕಮಾಂಡರ್‌ ಕರ್ನಲ್‌ ಎ.ಕೆ. ಶರ್ಮ ಅಧ್ಯಕ್ಷತೆ ವಹಿಸಿದ್ದರು. ವಿಶೇಷ ಆಹ್ವಾನಿತರಾದ ಕರ್ನಲ್‌ ಮನೋಜ್‌ ವಿ.ಯು., ಗ್ರೂಪ್‌ ಕ್ಯಾಪ್ಟನ್‌ ಆರ್‌. ಶ್ರೀನಿವಾಸನ್‌, ಕಮಾಂಡರ್‌ ವಿಪುಲ್‌ ಗುಪ್ತ, ಆಳ್ವಾಸ್‌ ಎಜುಕೇಶನ್‌ ಫೌಂಡೇಶನ್‌ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, ಟ್ರಸ್ಟಿಗಳಾದ ವಿವೇಕ್‌ ಆಳ್ವ ಮತ್ತು ಡಾ| ವಿನಯ್‌ ಆಳ್ವ ಉಪಸ್ಥಿತರಿದ್ದರು.

ಎಲ್ಲೆಲ್ಲೂ ತ್ರಿವರ್ಣ
ವಿದ್ಯಾಗಿರಿ ಸನಿಹ ಪುತ್ತಿಗೆ ವಿವೇಕಾನಂದ ನಗರದ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್‌ ಬಯಲು ವೇದಿಕೆಯಲ್ಲಿ ನಡೆದ ಈ ಸಮಾರಂಭದಲ್ಲಿ “ಕೋಟಿಕಂಠೊ ಸೆ’ ಏಕತಾ ಹಾಡಿಗೆ ಸಹಸ್ರ ಸಹಸ್ರ ವಿದ್ಯಾರ್ಥಿಗಳು ತ್ರಿವರ್ಣಧ್ವಜಗಳನ್ನು ಲಯಬದ್ಧವಾಗಿ ಹೊಯ್ದಾಡಿಸಿದಾಗ ಸಮುದ್ರದಲೆಗಳಂತೆ ತ್ರಿವರ್ಣ ರಂಜಿಸಿತು. ತ್ರಿವರ್ಣದ ಟಿ-ಶರ್ಟ್‌ಧಾರಿ ವಿದ್ಯಾರ್ಥಿಗಳು ಸಭೆಯ ನಡುವೆ “ಇಂಡಿಯಾ’ಆಂಗ್ಲ ಅಕ್ಷರ ಮೂಡಿಸಿದ್ದರು. ತ್ರಿವರ್ಣದ ಭಾರೀ ಗಾತ್ರದ ಸ್ತಂಭಗಳು ಅಲ್ಲಲ್ಲಿ ವಿರಾಜಮಾನವಾಗಿದ್ದವು. ತ್ರಿವರ್ಣದ ಕೊಡೆಗಳು, ಬಾನಂಗಳಕ್ಕೆ ಚಿಮ್ಮಿಸಿದ ತ್ರಿವರ್ಣದ ಬೆಲೂನ್‌ಗಳು, ವೇದಿಕೆಯ ಹಿಂಭಾಗ, ಮುಂಭಾಗ, ಗ್ಯಾಲರಿಗಳ ಸುತ್ತಮುತ್ತ ತ್ರಿವರ್ಣ ಸಂಯೋಜನೆಯಲ್ಲಿ ವಿದ್ಯಾರ್ಥಿ ಸಮೂಹ ಕಣ್ಮನ ಸೆಳೆಯಿತು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.