ಚರಂಡಿ ಸರಿಪಡಿಸಿ, ತಡೆಗೋಡೆ ನಿರ್ಮಿಸಲು ಮನವಿ


Team Udayavani, May 26, 2018, 11:18 AM IST

26-may-6.jpg

ಪುತ್ತೂರು : ಕೋರ್ಟ್‌ ಹಿಲ್‌ನ ಶಿವರಾವ್‌ ಸರ್ಕಲ್‌ ಬಳಿಯ ಅಪಾಯಕಾರಿ ಸ್ಥಿತಿಯ ಚರಂಡಿಯನ್ನು ಸರಿಪಡಿಸಲು
ಹಾಗೂ ಪೊಲೀಸ್‌ ವಸತಿ ಬಳಿಯ ರಸ್ತೆಯ ಅಂಚಿಗೆ ತಡೆಗೋಡೆ ನಿರ್ಮಿಸುವ ಬಗ್ಗೆ ನಗರಸಭೆ ಪೌರಾಯುಕ್ತರಿಗೆ ಮನವಿ ನೀಡಲಾಗಿದೆ.

ಕೋರ್ಟ್‌ ಹಿಲ್‌ನ ಶಿವರಾವ್‌ ಸರ್ಕಲ್‌ ಬಳಿಯ ಚರಂಡಿ ಮೇಲೆ ಪಾದಚಾರಿಗಳು ನಡೆದಾಡಲು ಹಾಕಿರುವ ಕಾಂಕ್ರೀಟ್‌ ಹಲಗೆಗಳ ಹಾಸು ಎರಡು ವರ್ಷಗಳಿಂದ ಅಪೂರ್ಣವಾಗಿದೆ. ಇದನ್ನು ಸರಿಪಡಿಸುವ ಅಥವಾ ಪೂರ್ಣಗೊಳಿಸುವ ತುರ್ತು ಅಗತ್ಯವಿದೆ. ಚರಂಡಿಯ ನೀರು ಮೇಲಿನಿಂದ ಕೆಳಕ್ಕೆ ಧುಮುಕುವ ಪ್ರದೇಶ. ಇಲ್ಲಿ ಚರಂಡಿ ಅಪೂರ್ಣ ಕಾಮಗಾರಿಯಿಂದ ಪಾದಚಾರಿಗಳು, ಮಕ್ಕಳಿಗೆ ಮರಣಗುಂಡಿಯಂತಾಗಿದೆ. ತತ್‌ಕ್ಷಣಕ್ಕೆ ಈ ಹೊಂಡ ಗಮನಕ್ಕೆ ಬಾರದೇ ಇರುವುದರಿಂದ, ಪಾದಚಾರಿಗಳು ಹೊಂಡಕ್ಕೆ ಬೀಳುವ ಸಾಧ್ಯತೆ ಅಧಿಕ. ಇದು ತುಂಬಾ ಆಳವಾಗಿ ಇರುವುದರಿಂದ ಅಪಾಯ ಹೆಚ್ಚು. ಆದ್ದರಿಂದ ಚರಂಡಿಗೆ ಕಾಂಕ್ರೀಟ್‌ ಹಲಗೆ ಹಾಕುವಂತೆ ಒತ್ತಾಯಿಸಿದ್ದಾರೆ.

ಇದೇ ರಸ್ತೆಯ ಇನ್ನೊಂದು ಬದಿಯಲ್ಲಿರುವ ಪೊಲೀಸ್‌ ವಸತಿ ಬಳಿಯ ರಸ್ತೆ ಸುಮಾರು 15 ಅಡಿ ಎತ್ತರದಲ್ಲಿದೆ. ಈ ಫುಟ್‌ಪಾತ್‌ನಲ್ಲಿ ನಡೆಯುವ ಪಾದಚಾರಿಗಳಿಗೂ ಇದು ಅಪಾಯ. ರಸ್ತೆಯ ಕೆಳಭಾಗ ಆಳವಾಗಿದ್ದು, ಆಯ ತಪ್ಪಿದರೆ 15 ಅಡಿ ಕೆಳಗೆ ಬೀಳುವ ಅಪಾಯವಿದೆ. ಆದ್ದರಿಂದ ಇಲ್ಲಿ ತಡೆಗೋಡೆ ನಿರ್ಮಿಸುವಂತೆ ವಕೀಲ ಸುಧೀರ್‌ ಒತ್ತಾಯಿಸಿದ್ದಾರೆ.

ಈ ಹಿಂದೆಯೂ ಮನವಿ ಮಾಡಲಾಗಿತ್ತು. ಆದರೆ ಪೂರಕ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ಮತ್ತೂಮ್ಮೆ ಮನವಿ ನೀಡಲಾಗಿದೆ. ಈ ಎರಡು ಕಾಮಗಾರಿಗಳ ಬಗ್ಗೆ ನಗರಸಭೆ ತುರ್ತು ಕ್ರಮ ಕೈಗೊಳ್ಳದೇ ಇದ್ದಲ್ಲಿ, ಸೂಕ್ತ ಕಾನೂನು ಕ್ರಮ ಜರುಗಿಸಲು ನ್ಯಾಯಾಲಯದ ಮೊರೆ ಹೋಗಬೇಕಾಗುತ್ತದೆ. ಇದರ ನಡುವೆ ಎದುರಾಗುವ ಎಲ್ಲ ಕಷ್ಟ-ನಷ್ಟಗಳಿಗೆ ನಗರಸಭೆ ಪೌರಾಯುಕ್ತರೇ ಜವಾಬ್ದಾರರು ಎಂದು ಎಚ್ಚರಿಸಲಾಗಿದೆ. ಇದನ್ನು ಸಿವಿಲ್‌ ಪ್ರಕ್ರಿಯಾ ಸಂಹಿತೆ 1908ರ ಕಲಂ 80ರ ಅಡಿಯಲ್ಲಿ ನೋಟಿಸ್‌ ಎಂದು ಪರಿಗಣಿಸಬೇಕು ಎಂದು ವಕೀಲ ಸುಧೀರ್‌ ಅವರು ಮನವಿಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.