ಅಡಿಕೆ, ಕಾಳುಮೆಣಸು ಆಮದು ಬೇಡ: ಕೇಂದ್ರಕ್ಕೆ ಕ್ಯಾಂಪ್ಕೊ ಮನವಿ
Team Udayavani, Jun 1, 2022, 6:40 AM IST
ಮಂಗಳೂರು: ಮ್ಯಾನ್ಮಾರ್ ಗಡಿಯಲ್ಲಿನ ಐಸಿಪಿ, ಮೊರೇಹ್(ಮಣಿಪುರ) ದಲ್ಲಿನ ಗೇಟ್ 1ಮತ್ತು 2ನ್ನು ತೆರೆದುವ್ಯಾಪಾರ ಪುನರಾರಂಭಕ್ಕೆ ಅವಕಾಶ ಕಲ್ಪಿಸಿರುವುದು ಸ್ವಾಗತಾರ್ಹವಾದರೂ ಇತರ ವಸ್ತುಗಳ ಜತೆ ಸಂಬಾರ ವಸ್ತುಗಳ ಹೆಸರಿನಲ್ಲಿ ಅಡಿಕೆ, ಕಾಳುಮೆಣಸು ಕೂಡ ಕಡಿಮೆ ಬೆಲೆಗೆ ಆಮದಾಗುತ್ತಿವೆ. ಇದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಅವರು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ.
ಭಾರತ ಅಡಿಕೆ ಮತ್ತು ಕಾಳುಮೆಣಸು ಕ್ಷೇತ್ರದಲ್ಲಿ ಸ್ವಾವಲಂಬಿಯಾಗಿದೆ. ಈ ವಸ್ತುಗಳು ಒಳ ಬರಲಾರಂಭಿಸಿದರೆ ನಮ್ಮ ಮಾರುಕಟ್ಟೆಯಲ್ಲಿ ಅಸ್ಥಿರತೆ ಉಂಟಾಗಿ ಬೆಳೆಗಾರರ ಹಿತಕ್ಕೆ ಹಾನಿಯಾಗಲಿದೆ. ಆದ್ದರಿಂದ ತಾವು ಈ ಬಗ್ಗೆ ತತ್ಕÒಣ ಗಮನ ಹರಿಸಿ ಮ್ಯಾನ್ಮಾರ್ ಗಡಿಯಲ್ಲಿನ ಮಣಿಪುರ ಗೇಟುಗಳ ಮೂಲಕ ಅಡಿಕೆ ಮತ್ತು ಕಾಳುಮೆಣಸು ಒಳನುಸುಳಿ ದೇಶೀಯ ಮಾರುಕಟ್ಟೆ ಪ್ರವೇಶಿಸದಂತೆ ನಿರ್ಬಂಧಿಸುವಂತೆ ಸಂಬಂಧಿಸಿದ ಇಲಾಖೆಗಳಿಗೆ ನಿರ್ದೇಶನ ನೀಡಬೇಕು ಎಂದು ಕೊಡ್ಗಿ ಅವರು ಮನವಿ ಮಾಡಿದ್ದಾರೆ.
ಈಶಾನ್ಯ ರಾಜ್ಯಗಳ ಬೇಡಿಕೆ
ರಾಷ್ಟ್ರೀಯ ಹಿತಾಸಕ್ತಿ ಮತ್ತು ಈಶಾನ್ಯ ರಾಜ್ಯಗಳ ಬೇಡಿಕೆಯಂತೆ ನೆರೆಯ ದೇಶಗಳ ಜತೆ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ವಿದೇಶಾಂಗ ವ್ಯವಹಾರಗಳ ಇಲಾಖೆ(ಬಿಎಂ ವಿಭಾಗ) ಮೇ 20ರಂದು ಹೊರಡಿಸಿರುವ ಅಧಿಸೂಚನೆಯಡಿ ಮಣಿಪುರದ ಮೊರೇಹ್ನ ಐಸಿಪಿಯಲ್ಲಿನ ಗೇಟ್ ನಂ. 1 ಮತ್ತು 2ನ್ನು ತೆರೆಯಲು ಸೂಚಿಸಿದೆ.
2020ರಿಂದ ಈ ಗೇಟುಗಳನ್ನು ಬಂದ್ ಮಾಡಲಾಗಿತ್ತು. ಈ ಕ್ರಮದಿಂದ ಒಟ್ಟಾರೆ ವ್ಯಾಪಾರ ವಹಿವಾಟಿಗೆ ಉತ್ತೇಜನ ಲಭಿಸಿದ್ದರೂ ಅಡಿಕೆ ಮತ್ತು ಕಾಳು ಮೆಣಸು ಕೂಡ ಈ ಮಾರ್ಗದಲ್ಲಿ ಒಳನುಸುಳಲು ಆರಂಭವಾಗಿರುವುದು ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಕ್ಯಾಂಪ್ಕೋ ವಿದೇಶಾಂಗ ಸಚಿವರ ಗಮನ ಸೆಳೆದಿದೆ.
ಅಡಿಕೆ ಈ ಹಿಂದೆ ಸಿಲ್ಚಾರ್, ಅಸ್ಸಾಂ, ಫಾಲಕಾಂತ, ಪಶ್ಚಿಮಬಂಗಾಳ ಮೂಲಕ ಬರ್ಮಾದಿಂದ ರಾಜಾರೋಷವಾಗಿ ಕಳ್ಳಮಾರ್ಗದಲ್ಲಿ ಗಡಿಯೊಳಗೆ ನುಸುಳುತ್ತಿತ್ತು. ಬೆಳೆಗಾರರಿಗೆ ಇದರಿಂದ ತೀವ್ರ ಸಂಕಷ್ಟ ಎದುರಾಗಿತ್ತು. ಇದನ್ನು ಮನಗಂಡ ಕೇಂದ್ರ ಸರಕಾರ ಶೇ. 108ರಷ್ಟು ಆಮದು ಸುಂಕ ಹೇರುವ ಮೂಲಕ ಕಿಲೋವೊಂದರ ಮೇಲೆ 251 ರೂ. ವಿಧಿಸಿತ್ತು. ಇದರಿಂದಾಗಿ ಅಡಿಕೆ ಮಾರುಕಟ್ಟೆ ಸ್ಥಿರತೆ ಕಾಣುವಂತಾಗಿತ್ತು ಎಂಬ ಅಂಶವನ್ನೂ ಕ್ಯಾಂಪ್ಕೋ ಮನವಿಯಲ್ಲಿ ವಿದೇಶಾಂಗ ಸಚಿವರ ಗಮನಕ್ಕೆ ತಂದಿದೆ.
ಇದೀಗ ಅಡಿಕೆ ಉತ್ಪಾದನಾ ವೆಚ್ಚ ಗಣನೀಯವಾಗಿ ಏರಿಕೆಯಾಗಿದೆ. ಅಡಿಕೆ ಕಿಲೋಗೆ ಉತ್ಪಾದನಾ ವೆಚ್ಚ 360 ರೂ.ಗೂ ಅಧಿಕವಾಗಿದೆ. ಆದ್ದರಿಂದ ಈ ಗರಿಷ್ಠ ಮೊತ್ತವನ್ನು ಆಮದು ಮೇಲೆ ನಿಗದಿಪಡಿಸಬೇಕು ಎಂದು ಕೊಡ್ಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ