ನಗರಸಭೆ ವ್ಯಾಪ್ತಿಯ ಮನೆ ಮನೆ ಕಸ ವಿಲೇವಾರಿ ಸಮರ್ಪಕಗೊಳಿಸಲು ಮನವಿ
Team Udayavani, Jan 17, 2018, 5:12 PM IST
ನಗರ: ನಗರಸಭೆಯ ವತಿಯಿಂದ ನಡೆಸಲಾಗುತ್ತಿರುವ ಮನೆ ಮನೆ ಕಸ ವಿಲೇವಾರಿ ವ್ಯವಸ್ಥೆಯನ್ನು ಸಮರ್ಪಕಗೊಳಿಸಲು ನಗರಸಭೆಗೆ ಸೂಚನೆ ನೀಡುವಂತೆ ಶ್ರೀ ರಾಮಕೃಷ್ಣ ಮಿಷನ್ ಸ್ವಚ್ಛ ಪುತ್ತೂರು ಘಟಕವು ಪುತ್ತೂರು ಸಹಾಯಕ ಕಮಿಷನರ್ಗೆ ಮನವಿ ಮಾಡಿದೆ.
2017-18ನೇ ಸಾಲಿನಲ್ಲಿ ನಗರಸಭೆಯ ಬೇರೆ ಬೇರೆ ವ್ಯಾಪ್ತಿಯಲ್ಲಿ ಸ್ವಚ್ಛ ಪುತ್ತೂರು ಅಭಿಯಾನದ ಭಾಗವಾಗಿ 180ಕ್ಕೂ ಹೆಚ್ಚಿನ ಸದಸ್ಯರ ತಂಡ ಸ್ವಚ್ಛತೆ ಕಾರ್ಯ ನಡೆಸುತ್ತಿದೆ. ಆದರೆ ತಂಡ ಸ್ವಚ್ಛ ಮಾಡಿದ ಕೆಲವೇ ಕ್ಷಣಗಳಲ್ಲಿ ಆ ಭಾಗದ ಜನರು ಮನೆಯಿಂದ ಕಸ ಅಥವಾ ತ್ಯಾಜ್ಯಗಳನ್ನು ರಸ್ತೆಯ ಬದಿಯಲ್ಲಿ ತಂದು ಹಾಕುತ್ತಿದ್ದಾರೆ. ಕಾರಣ ಕೇಳಿದಾಗ ನಗರಸಭೆಯ ವತಿಯಿಂದ ಮನೆ ಮನೆ ಕಸ ವಿಲೇವಾರಿಗೆ ಬರುತ್ತಿಲ್ಲ ಎನ್ನುವ ಆರೋಪ ಮಾಡುತ್ತಿದ್ದಾರೆ.
ಪ್ರತಿಭಟನೆ ನಡೆಸುವ ಎಚ್ಚರಿಕೆ
ನಗರದಲ್ಲಿ ಕಸ ವಿಲೇವಾರಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಅನುಸರಿಸಿದ್ದಲ್ಲಿ ಸ್ವಚ್ಛ ಪುತ್ತೂರು ತಂಡದಿಂದ ನಗರಸಭೆಯ ಎದುರು ಕಸವನ್ನು ಹಾಕಿ ನಗರಸಭೆಯ ವಿರುದ್ಧ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿರುವ ಸ್ವತ್ಛ ಪುತ್ತೂರು ಘಟಕವು, ಈ ನಿಟ್ಟಿನಲ್ಲಿ ನಗರಸಭೆಗೆ ಸೂಚನೆ ನೀಡುವಂತೆ ಎಸಿಯವರಿಗೆ ಸಲ್ಲಿಸಿರುವ ಮನವಿಯಲ್ಲಿ ವಿನಂತಿಸಿದೆ.
ಮನವಿ ನೀಡುವ ಸಂದರ್ಭ ರಾಮಕೃಷ್ಣ ಮಿಷನ್ ಸ್ವಚ್ಛ ಪುತ್ತೂರು ಘಟಕದ ಸಂಚಾಲಕ ಶ್ರೀಕೃಷ್ಣ ಉಪಾಧ್ಯಾಯ,
ದಿನೇಶ್ ಜೈನ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಸ ಸಂಗ್ರಹ: ಸಮರ್ಪಕ ನಿರ್ವಹಣೆ ಅಗತ್ಯ
ನಗರಸಭೆ ಆಡಳಿತವು ಕಸ ಸಂಗ್ರಹಕ್ಕೆ ಸಂಬಂಧಿಸಿದಂತೆ ಹಣ ಸಂಗ್ರಹ ಮಾಡಿ ಕಸ ಕೊಂಡೊಯ್ಯಲು ವಾರ ಕಳೆದರೂ ಬರುತ್ತಿಲ್ಲ. ಕೆಲವೊಮ್ಮೆ ಹೊತ್ತಲ್ಲದ ಹೊತ್ತಿನಲ್ಲಿ ಬರುತ್ತಾರೆ ಎನ್ನುವ ಆರೋಪ ಸಾರ್ವಜನಿಕ ವಲಯದಿಂದ ಇದೆ. ತತ್ಕ್ಷಣ ಈ ವ್ಯವಸ್ಥೆಯನ್ನು ಸರಿಪಡಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ