ಜೋಡುಪಾಲ: ರವಿವಾರವೂ ಮುಂದುವರಿದ ಕಾರ್ಯಾಚರಣೆ


Team Udayavani, Aug 20, 2018, 9:27 AM IST

jodupaqala.jpg

ಸುಳ್ಯ: ಜೋಡುಪಾಲ ದುರಂತ ಸ್ಥಳದಲ್ಲಿ ರವಿವಾರವೂ ಕಾರ್ಯಾಚರಣೆ ನಡೆದು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ನಾಪತ್ತೆ ಆಗಿರುವ ಇಬ್ಬರ ಪತ್ತೆಗೆ ಎನ್‌ಡಿಆರ್‌ಎಫ್‌ ಶೋಧ ಮುಂದುವರಿಸಿದೆ. ರವಿವಾರ ಬೆಳಗ್ಗೆ ಎನ್‌ಡಿಆರ್‌ಎಫ್‌, ಅಗ್ನಿಶಾಮಕ ದಳ, ಗೃಹರಕ್ಷಕ ಪಡೆ ಹಾಗೂ ಸ್ವಯಂಸೇವಕರು ಕಾರ್ಯಾಚರಣೆ ನಡೆಸಿ ಹಲವರನ್ನು  ಸುರಕ್ಷಿತ ಸ್ಥಳಕ್ಕೆ ದಾಟಿಸಿದ್ದಾರೆ. ಇಬ್ಬರು ಮಕ್ಕಳನ್ನು ರಕ್ಷಿಸಿ, ಪಾಕೃತಿಕ ಪರಿಹಾರ ಕೇಂದ್ರಕ್ಕೆ ತರ ಲಾಯಿತು. ಕೆಲವು ಕುಟುಂಬಗಳು ಪರಿಹಾರ ಕೇಂದ್ರಗಳಿಗೆ ಬರಲು ಒಪ್ಪಿಲ್ಲ. ಗಾಳಿಬೀಡು ಮೂಲಕ ಮಡಿಕೇರಿ ಕಡೆಗೆ ತೆರಳಿರುವವರನ್ನು ಅಗತ್ಯ ಬಿದ್ದರೆ ಸ್ಥಳಾಂತರಿಸಲಾಗುವುದು ಎಂದು ಸಹಾಯಕ ಆಯುಕ್ತ ಎಚ್‌.ಕೆ. ಕೃಷ್ಣಮೂರ್ತಿ ಮಾಹಿತಿ ನೀಡಿದ್ದಾರೆ. ಸುರಕ್ಷತೆಯ ದೃಷ್ಟಿಯಿಂದ 100ಕ್ಕೂ ಅಧಿಕ ಮನೆಗಳಿಗೆ ಬೀಗ ಹಾಕಿ ಜನರನ್ನು ಸ್ಥಳಾಂತರಿಸಲಾಗಿದೆ.

848 ಮಂದಿ ರಕ್ಷಣೆ
ಒಟ್ಟು 848 ನೋಂದಾಯಿತ ಕುಟುಂಬಗಳ ಪೈಕಿ 384 ಮಂದಿ ಅರಂ ತೋಡು, ಸಂಪಾಜೆ, ಕಲ್ಲುಗುಂಡಿ ಕೇಂದ್ರ ಗಳಲ್ಲಿ ತಂಗಿದ್ದಾರೆ. ಉಳಿದವರು ಸಂಬಂಧಿಕರ ಮನೆ ಗಳಲ್ಲಿದ್ದಾರೆ. ನೆರವು ಸಾಮಗ್ರಿಗಳು ತುಂಬಿದ್ದು, ಆರೋಗ್ಯ ತಪಾಸಣೆ ಪ್ರಗತಿಯಲ್ಲಿದೆ.
ಸ್ಥಳಾಂತರ ಪ್ರಕ್ರಿಯೆ ಮಧ್ಯಾಹ್ನದ ವೇಳೆ ಕೊನೆಗೊಂಡಿತ್ತು. ರಕ್ಷಣಾ ದಳದ ಆಯ್ದ ಸಿಬಂದಿ ಬಸಪ್ಪ ಅವರ ಪತ್ನಿ ಗೌರಮ್ಮ ಮತ್ತು ಸಂಬಂಧಿ ಮಂಜುಳಾ ಅವರಿಗಾಗಿ ಗುಡ್ಡ ಬಿದ್ದ ಸ್ಥಳ ಹಾಗೂ ತೋಡು, ನದಿ ಭಾಗಗಳಲ್ಲಿ ಶೋಧ ನಡೆಯುತ್ತಿದೆ. ನದಿಯ ಸೇತುವೆ, ಕಿಂಡಿ ಅಣೆಕಟ್ಟಿ ನಲ್ಲಿ ಮರಗಳು ಸಿಲುಕಿದ್ದು, ಅವುಗಳ ತೆರವು ಕಾರ್ಯ ಆರಂಭ ವಾಗಿ, ನೀರಿನ ಹರಿವು ಹೆಚ್ಚಿದೆ.

ಮಂಜು ಕವಿದ ವಾತಾವರಣ
ಜೋಡುಪಾಲದಲ್ಲಿ ಮಧ್ಯಾಹ್ನವೇ ಮಂಜು ಕವಿದಿತ್ತು. ಆಗಾಗ ಗಾಳಿ, ಮಳೆಯಾಗಿದೆ. ಹೊಟೇಲ್‌ ಬಳಿ 100 ಮೀ. ಉದ್ದಕ್ಕೆ ಗುಡ್ಡ ಕುಸಿದಿದೆ. ರಸ್ತೆ ಯುದ್ದಕ್ಕೂ ಗುಡ್ಡ ಕುಸಿಯುತ್ತಿದ್ದು, ತೆರವಿಗೆ ಆರೇಳು ತಿಂಗಳೇ ಬೇಕು.

ಅಲ್ಲಲ್ಲಿ  ಬ್ಯಾರಿಕೇಡ್‌
ಸಂಪಾಜೆ ರಸ್ತೆಯ ಮೂರು ಕಡೆ ಬ್ಯಾರಿಕೇಡ್‌ ಅಳವಡಿಸಿ ಜನರ ಸಂಚಾರ ನಿಯಂತ್ರಿಸಲಾಯಿತು. ಬೀಗ ಹಾಕಿದ ಮನೆಗಳ ಸ್ಥಿತಿಗತಿ ನೋಡಲು ಹೊರಟವರಿಗೂ ಪ್ರವೇಶ ನೀಡಲಿಲ್ಲ.

ಕಂದಾಯ ಸಚಿವರ ಭೇಟಿ
ಜೋಡುಪಾಲ ದುರಂತ ಸ್ಥಳ ಹಾಗೂ ಅರಂತೋಡು, ಕಲ್ಲುಗುಂಡಿ, ಸಂಪಾಜೆ ಪರಿಹಾರ ಕೇಂದ್ರಗಳಿಗೆ ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ, ಸಚಿವ ಯು.ಟಿ. ಖಾದರ್‌, ವಿಧಾನ ಪರಿಷತ್‌ ಸದಸ್ಯರಾದ ಐವನ್‌ ಡಿ’ಸೋಜಾ, ಹರೀಶ್‌ ಕುಮಾರ್‌ ಹಾಗೂ ಪರಿಹಾರ ಕೇಂದ್ರಗಳಿಗೆ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಸಂಸದ ನಳಿನ್‌ ಕುಮಾರ್‌ ಕಟೀಲು, ಶಾಸಕ ಅಂಗಾರ, ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌, ಎಸ್‌ಪಿ ಡಾ| ರವಿಕಾಂತೇಗೌಡ, ಸಹಾ
ಯಕ ಆಯುಕ್ತ ಎಚ್‌.ಕೆ. ಕೃಷ್ಣಮೂರ್ತಿ, ತಹಶೀಲ್ದಾರ್‌ ಕುಂಞಮ್ಮ, ಭೂಮಾಪನ ಇಲಾಖೆ ಸಹಾಯಕ ನಿರ್ದೇಶಕ ಬಿ.ಕೆ. ಕುಸುಮಾಧರ್‌ ಭೇಟಿ ನೀಡಿ ಪರಿಶೀಲಿಸಿದರು.

ಎರಡು ಕುಟುಂಬ ಸ್ಥಳಾಂತರ
ಮರ್ಕಂಜ ಗ್ರಾಮದ ಉಬ್ರಾಳ ಮಾವಜಿ ಎಂಬಲ್ಲಿ ಗುಡ್ಡ ಕುಸಿತದ ಭೀತಿ ಉಂಟಾಗಿದೆ. ಕೇಶವ ಗೌಡ ಹಾಗೂ ಮೇದಪ್ಪ ಮನೆಯವರು ಸುರಕ್ಷಿತ ಸ್ಥಳಕ್ಕೆ ತೆರಳಿದ್ದಾರೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.