ಮಹಿಳಾಧಿಕಾರಕ್ಕೆ ಅವಕಾಶ ಕಲ್ಪಿಸಿದೆ ಮೀಸಲಾತಿ


Team Udayavani, Sep 5, 2018, 10:21 AM IST

5-september-3.jpg

ಪುತ್ತೂರು: ನಗರಸಭಾ ಚುನಾವಣೆಯ ಮತ ಎಣಿಕೆ ಮುಗಿದ ಬೆನ್ನಿಗೇ ಮೀಸಲಾತಿ ಪಟ್ಟಿಯನ್ನೂ ಸರಕಾರ ಹೊರಡಿಸಿದೆ. ಮೀಸಲಾತಿ ಪಟ್ಟಿಯ ಪ್ರಕಾರ ಪುತ್ತೂರು ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಎರಡೂ ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ. ಪುತ್ತೂರು ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲಾತಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮಹಿಳೆ ಮೀಸಲಾತಿ ನಿಗದಿಯಾಗಿದೆ. ನಗರಸಭೆಯ 31 ವಾರ್ಡ್‌ ಸ್ಥಾನಗಳಲ್ಲಿ 25 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಈ ಎರಡೂ ಮೀಸಲಾತಿ ಅಭ್ಯರ್ಥಿಗಳನ್ನು ಹೊಂದಿರುವುದರಿಂದ ಪುತ್ತೂರು ನಗರಸಭೆಯಲ್ಲಿ ಬಿಜೆಪಿಯ ಮಹಿಳಾ ಆಡಳಿತ ಪಾರಮ್ಯ ಮೆರೆಯುವುದು ನಿಶ್ಚಿತ.

ನಗರಸಭಾ ಚುನಾವಣೆಗೆ ಬಿಜೆಪಿಯಿಂದ 14 ಮಹಿಳಾ ಅಭ್ಯರ್ಥಿಗಳು ಸ್ಪರ್ಧಿಸಿದ್ದು, 12 ಮಹಿಳೆಯರು ಗೆಲುವು ಸಾಧಿಸಿದ್ದಾರೆ. ಪ್ರಥಮವಾಗಿ ನಗರಸಭೆಗೆ ಪ್ರವೇಶ ಮಾಡಿರುವ ಎಸ್‌ಡಿಪಿಐನ ಅಭ್ಯರ್ಥಿಯೂ ಮಹಿಳೆ. ಕಾಂಗ್ರೆಸ್‌ನಿಂದ ಗೆದ್ದಿರುವ ಐವರು ಅಭ್ಯರ್ಥಿಗಳಲ್ಲಿ ಒಬ್ಬರು ಮಹಿಳೆ ಇದ್ದಾರೆ. ಸಾಮಾನ್ಯ ಮಹಿಳೆ ಮೀಸಲಾತಿ ಬಂದಿರುವುದರಿಂದ 14 ಮಹಿಳಾ ಸದಸ್ಯರಿಗೂ ಅವಕಾಶ ಇದೆ. ಬಹುಮತ ಇದ್ದವರಿಗೆ ಮಾತ್ರ ಇದು ಸಾಧ್ಯವಾಗುತ್ತದೆ.

ಅಧ್ಯಕ್ಷ ಗಾದಿಗಿದೆ ಪೈಪೋಟಿ
ಬಹುಮತ ಹೊಂದಿರುವ ಬಿಜೆಪಿಯಿಂದ ಸಾಮಾನ್ಯ ಮೀಸಲಾತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೇರಲು ಅರ್ಹರಾದವರ ಪಟ್ಟಿ ದೊಡ್ಡದಿದೆ. ಇವರಲ್ಲಿ ಪ್ರಮುಖವಾಗಿ ವಿದ್ಯಾಗೌರಿ, ಗೌರಿ ಬನ್ನೂರು, ಯಶೋದಾ ಹರೀಶ್‌ ಅವರ ಹೆಸರು ಕೇಳಿ ಬರುತ್ತಿದೆ.

ನಗರಸಭೆಗೆ ಪ್ರಥಮ ಬಾರಿಗೆ ಸ್ಪರ್ಧೆ ನಡೆಸಿ 19 ನೇ ವಾರ್ಡ್‌ನಿಂದ ಗೆಲುವು ಸಾಧಿಸಿರುವ ಹಾಲಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಗೌರಿ ಅವರಿಗೆ ಅಧ್ಯಕ್ಷ ಸ್ಥಾನ ಪಡೆಯುವ ಅವಕಾಶಗಳು ಹೆಚ್ಚು ಇವೆ. ಪುತ್ತೂರು ನಗರಸಭೆಯಲ್ಲಿ ಅತಿ ಹೆಚ್ಚು (571) ಮತಗಳ ಅಂತರದಿಂದ ಗೆದ್ದಿರುವುದು ಒಂದಾದರೆ ಮಹಿಳಾ ಮೋರ್ಚಾದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ ಹೆಗ್ಗಳಿಕೆ ಇವರಿಗಿದೆ. ಜಾತಿ ಲೆಕ್ಕಾಚಾರಕ್ಕೆ ಬಂದಾಗ ಹಾಲಿ ಪುತ್ತೂರಿನಲ್ಲಿ ಬಿಜೆಪಿ ಕಡೆಯಿಂದ ಬ್ರಾಹ್ಮಣ ಸಮುದಾಯಕ್ಕೆ ಹೆಚ್ಚಿನ ಸ್ಥಾನಮಾನ ನೀಡದೇ ಇರುವುದರಿಂದ ವಿದ್ಯಾಗೌರಿ ಅವರಿಗೆ ಇದು ಪೂರಕವಾಗಿ ಅಧ್ಯಕ್ಷ ಸ್ಥಾನ ಲಭಿಸುವ ಸಾಧ್ಯತೆ ಇದೆ.

ವಾರ್ಡ್‌ ಸಂಖ್ಯೆ 4ರಲ್ಲಿ ಗೆಲುವು ಸಾಧಿಸಿರುವ ಗೌರಿ ಬನ್ನೂರು ಅವರು ರಾಜಕೀಯದಲ್ಲಿ ಅನುಭವಿ. ಒಂದು ಬಾರಿ ಬನ್ನೂರು ಗ್ರಾ.ಪಂ. ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಇವರು 2002ರ ಅವಧಿಯಲ್ಲಿ ಪುತ್ತೂರು ಪುರಸಭೆಯ ಸದಸ್ಯರಾಗಿಯೂ ಐದು ವರ್ಷ ಕೆಲಸ ಮಾಡಿದ್ದಾರೆ. ಹಾಲಿ ಪುತ್ತೂರು ಬಿಜೆಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಒಕ್ಕಲಿಗ ಸಮುದಾಯದ ಗೌರಿ ಬನ್ನೂರು ರಾಜಕೀಯ ಅನುಭವ ಪರಿಗಣಿಸಿದರೆ ಅವರಿಗೆ ಅಧ್ಯಕ್ಷ ಗಾದಿ ಒಲಿಯಬಹುದು. 

ವಾರ್ಡ್‌ 18ರಿಂದ ಗೆದ್ದಿರುವ ಯಶೋದಾ ಹರೀಶ್‌ ಅನುಭವಿ. 2008, 2013ರ ಬಳಿಕ ಈ ಸಲ ಮೂರನೇ ಬಾರಿಗೆ ಪುತ್ತೂರು ನಗರಸಭೆಯ ಸದಸ್ಯರಾಗಿದ್ದಾರೆ. ಬಿಲ್ಲವ ಸಮುದಾಯಕ್ಕೆ ಪ್ರಾಶಸ್ತ್ಯದ ದೃಷ್ಟಿಯಿಂದ ಆಯ್ಕೆ ನಡೆಸಿದರೆ ಹಾಗೂ ಅನುಭವವನ್ನು ಪರಿಗಣಿಸಿದರೆ ಯಶೋದಾ ಹರೀಶ್‌ ಅವರಿಗೂ ಅಧ್ಯಕ್ಷ ಗಾದಿ ಏರುವ ಅವಕಾಶ ಸಿಗಬಹುದು.

ಉಪಾಧ್ಯಕ್ಷ ಸ್ಥಾನಕ್ಕೆ ಇಬ್ಬರು
ಪುತ್ತೂರು ನಗರಸಭಾ ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮೀಸಲಾತಿ ಬಂದಿರುವುದರಿಂದ ಹೆಚ್ಚು ಸ್ಪರ್ಧೆ ಇಲ್ಲ. ವಾರ್ಡ್‌ 22ರಿಂದ ಸ್ಪರ್ಧಿಸಿ ಗೆದ್ದಿರುವ ಶಶಿಕಲಾ ಸಿ.ಎಸ್‌. ಹಾಗೂ ವಾರ್ಡ್‌ 7ರಿಂದ ಆಯ್ಕೆಯಾಗಿರುವ ಲೀಲಾವತಿ ಮಾತ್ರ ಉಪಾಧ್ಯಕ್ಷ ಮೀಸಲಾತಿ ಸ್ಥಾನದ ಅರ್ಹರಾಗಿದ್ದಾರೆ. ಶಶಿಕಲಾ ಪುರಸಭಾ ಸದಸ್ಯರಾಗಿ ಅನುಭವ ಹೊಂದಿದ್ದಾರೆ. ಲೀಲಾವತಿ ಹೊಸ ಮುಖ.

ಸುಳ್ಯ ನ.ಪಂ.ಗೂ ಮೀಸಲಾತಿ ನಿಗದಿ
ಸುಳ್ಯ: ಇಲ್ಲಿನ ನಗರ ಪಂಚಾಯತ್‌ ಗೆ 2019 ರಲ್ಲಿ ನಡೆಯಲಿರುವ ಚುನಾವಣೆಗೆ ಸಂಬಂಧಿಸಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿಪಡಿಸಲಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಬಿಸಿಎ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯರಿಗೆ ನಿಗದಿಯಾಗಿದೆ.

ರಾಜೇಶ್‌ ಪಟ್ಟೆ 

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.