ಮಂಗಳೂರಿನ ಆಸ್ಪತ್ರೆಗಳನ್ನು ಕಾಸರಗೋಡಿನ ರೋಗಿಗಳಿಗೆ ಮೀಸಲು ಇಡಬಾರದು: ಮಿಥುನ್ ರೈ
Team Udayavani, Apr 11, 2020, 5:07 PM IST
ಮಂಗಳೂರು: ಕಾಸರಗೋಡು ಜಿಲ್ಲೆಯಲ್ಲಿ ಚಿಕಿತ್ಸೆ ಸಿಗದ ರೋಗಿಗಳಿಗೆ ಕೆ.ಎಸ್ ಹೆಗಡೆ ಆಸ್ಪತ್ರೆಯಲ್ಲಿ ಅನುಮತಿ ನೀಡಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಹೃದಯ ಶ್ರೀಮಂತಿಕೆ ಮೆರೆದಿದೆ. ಆದರೆ ಮುಂದೆ ಯಾವುದೇ ಒತ್ತಡಕ್ಕೆ ಮಣಿಯದೆ ನಮ್ಮ ಜಿಲ್ಲೆಯ ಇನ್ನುಳಿದ ಖಾಸಗಿ ಆಸ್ಪತ್ರೆಯನ್ನು ಕೇರಳದ ರೋಗಿಗಳಿಗೆ ಮೀಸಲು ಇಡಬಾರದು ಎಂದು ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಿಥುನ್ ರೈ, ದಕ್ಷಿಣ ಕನ್ನಡ ಜಿಲ್ಲಾಡಳಿತ ಕೇರಳ ಸರಕಾರ ಮನವಿಗೆ ಸ್ಪಂದಿಸಿ ಖಾಸಗಿ ಆಸ್ಪತ್ರೆಯನ್ನು ಕೇರಳದ ರೋಗಿಗಳಿಗೆ ಚಿಕಿತ್ಸೆಗೆ ಅನುಮತಿ ನೀಡಿದೆ. ಕಾಸರಗೋಡು ಜನರಿಗೆ ತೋರಿದ ಮಾನವೀಯತೆಗೆ ವೈಯಕ್ತಿಕವಾಗಿ ಜಿಲ್ಲಾಡಳಿತಕ್ಕೆ ಶ್ಲಾಘನೆ ವ್ಯಕ್ತಪಡಿಸುತ್ತೇನೆ ಎಂದರು.
ನಮ್ಮ ಜಿಲ್ಲೆಯ, ತಾಲೂಕಿನ ಜನರು ನಮ್ಮ ಜಿಲ್ಲೆಯ ಆಸ್ಪತ್ರೆಗಳನ್ನು ನಂಬಿದವರು. ನಮ್ಮ ಜಿಲ್ಲೆಯ ಜನರ ಆರೋಗ್ಯ ಕ್ಷೇಮ ಕಾಪಾಡಬೇಕು. ಬಿಜೆಪಿಯ ಒತ್ತಡಕ್ಕೆ ಮಣಿದು ಕಾಸರಗೋಡಿನ ರೋಗಿಗಳಿಗೆ ಮೃದುಧೋರಣೆ ತೋರಿದರೆ ಜಿಲ್ಲೆಯ ಜನರ ಆರೋಗ್ಯ ಕಾಪಾಡುವಲ್ಲಿ ವಿಫಲವಾಗುತ್ತದೆ ಎಂದರು.
ಮಡಿಕೇರಿ ಹಾಗೂ ಚಿಕ್ಕಮಗಳೂರು ಜನರು ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಯನ್ನು ನಂಬಿದವರು. ಕಾಸರಗೋಡಿನ ರೋಗಿಗಳು ಅಫಘಾತ ಮತ್ತು ತುರ್ತು ನೆಪದಲ್ಲಿ ಕೋವಿಡ್ ರೋಗಿಗಳು ಜಿಲ್ಲೆಗೆ ಪ್ರವೇಶ ಮಾಡಿದ ನಿರ್ದೇಶನಗಳು ಕಂಡು ಬಂದಿವೆ. ನಮ್ಮ ಜಿಲ್ಲೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ವೈದ್ಯರಿಗೆ ಹಾಗೂ ನರ್ಸಗಳಿಗೆ ಕೋವಿಡ್ ಸೋಂಕು ಹರಡುವ ಲಕ್ಷಣ ಕಾಣುತ್ತಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್